ನೆಲ್ಸನ್ ಚಿತ್ರದಲ್ಲಿ ನಟ ವಿನೋದ್ ಪ್ರಭಾಕರ್ 
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ಅಭಿನಯದ ಚಿತ್ರದ ಶೀರ್ಷಿಕೆ ಅನಾವರಣ; 'ನೆಲ್ಸನ್' ಟೀಸರ್ ರಿಲೀಸ್ ಮಾಡಿದ ಉಪೇಂದ್ರ

ಗೊಂಬೆಗಳ ಲವ್ ಖ್ಯಾತಿಯ ನಟ ಅರುಣ್ ಕುಮಾರ್ ಅವರು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದು, ನಟ ವಿನೋದ್ ಪ್ರಭಾಕರ್ ಅಭಿನಯದ ಮುಂಬರುವ ಚಿತ್ರಕ್ಕೆ 'ನೆಲ್ಸನ್' ಎಂದು ಹೆಸರಿಡಲಾಗಿದೆ. 

ಗೊಂಬೆಗಳ ಲವ್ ಖ್ಯಾತಿಯ ನಟ ಅರುಣ್ ಕುಮಾರ್ ಅವರು ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದು, ನಟ ವಿನೋದ್ ಪ್ರಭಾಕರ್ ಅಭಿನಯದ ಮುಂಬರುವ ಚಿತ್ರಕ್ಕೆ 'ನೆಲ್ಸನ್' ಎಂದು ಹೆಸರಿಡಲಾಗಿದೆ. 'ಇನ್ ಫಾರೆಸ್ಟ್ ಆಫ್ ಬ್ಲಡ್' ಎಂಬ ಅಡಿಬರಹ ಹೊಂದಿರುವ ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಅನ್ನು ನಟ ಉಪೇಂದ್ರ ಬಿಡುಗಡೆ ಮಾಡಿದರು. ಜಾನಪದ ಅಂಶಗಳಿಂದ ಟೀಸರ್ ಸದ್ಯ ಗಮನ ಸೆಳೆದಿದೆ.

ನೆಲ್ಸನ್ ಒಂದು ಪ್ರಮುಖ ಸಂದೇಶವನ್ನು ಹೊಂದಿದೆ ಮತ್ತು ವಿನೋದ್ ಪ್ರಭಾಕರ್ ಕೋಪೋದ್ರಿಕ್ತ ಯುವಕನಾಗಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿಸುತ್ತಾರೆ ಅರುಣ್. 

'60 ರಿಂದ 90ರ ದಶಕದಲ್ಲಿ ಕಂಡುಬರುವ ಚಾಮರಾಜನಗರ ಜಿಲ್ಲೆಯ ಗ್ಯಾಂಗ್‍‌ಸ್ಟರ್‌ಗಳ ನೈಜ ಕಥೆಯನ್ನು ಆಧರಿಸಿದ ಚಿತ್ರ ಇದಾಗಿದೆ. ಇದು ಈ ಪ್ರದೇಶದ ಭಾಷೆ, ಸಂಸ್ಕೃತಿ, ನೆಲ, ಜಲ ಮತ್ತು ಬುಡಕಟ್ಟು ಸಮುದಾಯಗಳ ಹೋರಾಟದ ಸಾರವನ್ನು ಸೆರೆಹಿಡಿಯುತ್ತದೆ. ಇದು ಶಕ್ತಿಯುತವಾದ ಸಂದೇಶ ಮತ್ತು ಮಹತ್ವದ ಕಥಾಹಂದರವನ್ನು ಹೊಂದಿರುವ ಸಿನಿಮಾವಾಗಿದೆ' ಎಂದು ನವೆಂಬರ್‌ನಲ್ಲಿ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸಿರುವ ಅರುಣ್ ಕುಮಾರ್ ಹೇಳುತ್ತಾರೆ.

ಬಿಎಂ ಶ್ರೀರಾಮ್ ನಿರ್ಮಾಣದ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಜೊತೆಗೆ ಗೋಪಾಲ್ ಕೃಷ್ಣ ದೇಶಪಾಂಡೆ ಕೂಡ ನಟಿಸಿದ್ದಾರೆ. ಚಿತ್ರಕ್ಕೆ ಪ್ರಜ್ವಲ್ ಗೌಡ ಅವರ ಛಾಯಾಗ್ರಹಣ ಮತ್ತು ಭರತ್ ಬಿಜಿ ಅವರ ಸಂಗೀತ ಸಂಯೋಜನೆ ಇದೆ. ಹರಿ ಮಹದೇವ್ ಸಂಭಾಷಣೆ ಬರೆದಿದ್ದು, ನೆಲ್ಸನ್ ಚಿತ್ರಕ್ಕೆ ಸ್ಟಂಟ್ ಮಾಸ್ಟರ್ ರವಿ ವರ್ಮಾ ಸಾಹಸ ದೃಶ್ಯಗಳ ಸಂಯೋಜನೆ ಮಾಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT