ಗನ್ಸ್ ಅಂಡ್ ರೋಸಸ್ ಚಿತ್ರದಲ್ಲಿ ನಟ ಕಿಶೋರ್ 
ಸಿನಿಮಾ ಸುದ್ದಿ

ಮತ್ತೆ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ನಟ ಕಿಶೋರ್; ಗನ್ಸ್ ಅಂಡ್ ರೋಸಸ್ ಚಿತ್ರತಂಡ ಸೇರ್ಪಡೆ!

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅಭಿನಯದ ಚೊಚ್ಚಲ ಸಿನಿಮಾ 'ಗನ್ ಅಂಡ್ ರೋಸಸ್' ಚಿತ್ರತಂಡಕ್ಕೆ ದಕ್ಷಿಣ ಭಾರತದ ನಟ ಕಿಶೋರ್ ಸೇರಿಕೊಂಡಿದ್ದಾರೆ. ಎಚ್‌ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಕಿಶೋರ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸುಮಾರು ವರ್ಷಗಳಿಂದ ಹೆಸರಾಂತ ಚಿತ್ರಗಳಿಗೆ ಕಥೆ ಬರೆದಿರುವ ಅಜಯ್ ಕುಮಾರ್ ಅವರ ಪುತ್ರ ಅರ್ಜುನ್ ಅಭಿನಯದ ಚೊಚ್ಚಲ ಸಿನಿಮಾ 'ಗನ್ ಅಂಡ್ ರೋಸಸ್' ಚಿತ್ರತಂಡಕ್ಕೆ ದಕ್ಷಿಣ ಭಾರತದ ನಟ ಕಿಶೋರ್ ಸೇರಿಕೊಂಡಿದ್ದಾರೆ.

ಎಚ್‌ಎಸ್ ಶ್ರೀನಿವಾಸ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಕಿಶೋರ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಕಿಶೋರ್ ಅವರು ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದು, ಚಿತ್ರತಂಡ ಅದರ ಕೆಲವು ಫೋಟೊಗಳನ್ನು ಹಂಚಿಕೊಂಡಿದೆ. 

ಎಚ್‌ಆರ್ ನಟರಾಜ್ ಈ ಯೋಜನೆಗೆ ಬಂಡವಾಳ ಹೂಡುತ್ತಿದ್ದು, ಶರತ್ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಚಿತ್ರವು ಇತ್ತೀಚೆಗಷ್ಟೇ ಪ್ರಾರಂಭವಾದರೂ, ಈಗಾಗಲೇ ಚಿತ್ರೀಕರಣ ಅಂತಿಮ ಹಂತ ತಲುಪಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ.

ಗನ್ಸ್ ಅಂಡ್ ರೋಸಸ್ ಚಿತ್ರಕ್ಕೆ ಶಶಿಕುಮಾರ್ ಅವರ ಸಂಗೀತ ಸಂಯೋಜನೆ, ಜನಾರ್ಧನ್ ಅವರ ಛಾಯಾಗ್ರಹಣ ಮತ್ತು ಸಂಜೀವ್ ರೆಡ್ಡಿ ಅವರ ಸಂಕಲನವಿದೆ. ಚಿತ್ರವು ಗ್ರಾಮೀಣ ಭಾಗದ ಅಂಶಗಳೊಂದಿಗೆ ತುಂಬಿದ ರೋಮ್ಯಾಂಟಿಕ್ ಎಂಟರ್‌ಟೈನರ್ ಆಗಿದೆ.

ಯಶಿಕಾ ನಿಷ್ಕಲ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದ ಪಾತ್ರಗಳಲ್ಲಿ ಶೋಭರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವತ್ಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್ ಮತ್ತು ಡೈಮಂಡ್ ರಾಜಣ್ಣ ಇದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ