ವರ್ತೂರು ಸಂತೋಷ್ 
ಸಿನಿಮಾ ಸುದ್ದಿ

ಹುಲಿ ಉಗುರು ಪ್ರಕರಣ: ವಾರದ ನಂತರ ವರ್ತೂರು ಸಂತೋಷ್ ಬಿಗ್ ಬಾಸ್ ಮನೆಗೆ ರಿ ಎಂಟ್ರಿ

ಹುಲಿ ಉಗುರು ಪೆಂಡೆಂಟ್ ನ್ನು ಕುತ್ತಿಗೆಯ ಚೈನಿಗೆ ಧರಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್​ (Varthur Santhosh) ಅವರು ಮತ್ತೆ ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ್ದಾರೆ. 

ಬೆಂಗಳೂರು: ಹುಲಿ ಉಗುರು ಪೆಂಡೆಂಟ್ ನ್ನು ಕುತ್ತಿಗೆಯ ಚೈನಿಗೆ ಧರಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಪರ್ಧಿ ವರ್ತೂರು ಸಂತೋಷ್​ (Varthur Santhosh) ಅವರು ಮತ್ತೆ ಬಿಗ್​ ಬಾಸ್​ ಮನೆಗೆ ಎಂಟ್ರಿ ನೀಡಿದ್ದಾರೆ. 

ಕಳೆದ ವಾರ ಅವರನ್ನು ಅರಣ್ಯಾಧಿಕಾರಿಗಳು ನೇರವಾಗಿ ಬಿಗ್ ಬಾಸ್ ಮನೆಯಿಂದ ಬಂಧಿಸಿ ಕರೆದಕೊಂಡು ಹೋಗಿ ಪರಪ್ಪನ ಅಗ್ರಹಾರದಲ್ಲಿರಿಸಿದ್ದರು. ನಂತರ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ವರ್ತೂರು ಸಂತೋಷ್​ ಅವರಿಗೆ ಬಿಗ್ ಬಾಸ್ ಮನೆಯೊಳಗೆ ಪ್ರವೇಶಿಸಲು ಮತ್ತೊಮ್ಮೆ ಅವಕಾಶ ಸಿಕ್ಕಿದೆ. 

ತಾನು ಇಷ್ಟು ದಿನ ಎಲ್ಲಿ ಹೋಗಿದ್ದೆ, ಏಕೆ ಹೊರ ಹೋಗಿದ್ದೆ ಎಂಬುದನ್ನು ಅವರು ಸಹಸ್ಪರ್ಧಿಗಳ ಜೊತೆ ಹಂಚಿಕೊಳ್ಳುತ್ತಾರೋ ಎಂಬ ಕುತೂಹಲವಿದೆ. 

ವರ್ತೂರು ಸಂತೋಷ್ ಅವರು ಬಿಗ್ ಬಾಸ್ ಮನೆ ಒಳಗೆ ಬರುತ್ತಿದ್ದಂತೆ ಉಳಿದ ಸ್ಪರ್ಧಿಗಳಿಗೆ ಅಚ್ಚರಿ ಆಗಿದೆ. ಅವರು ಒಂದು ವಾರ ಗ್ಯಾಪ್ ಕೊಟ್ಟಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ಹೀಗಾಗಿ, ಅವರಿಗೆ ಪ್ರಶ್ನೆಗಳ ಸುರಿಮಳೆಗೈಯಲಾಗಿದೆ. ‘ಬಿಸ್ನೆಸ್​ ವಿಚಾರಕ್ಕೆ ಹೊರಗೆ ಹೋಗಿದ್ದೆಯೋ ಅಥವಾ ಆರೋಗ್ಯದ ಸಮಸ್ಯೆ ಕಾಡಿತ್ತೋ’ ಎಂದು ವಿನಯ್ ಕೇಳಿದರು. ‘ನಿಮ್ಮ ಚಿನ್ನವನ್ನು ತೆಗೆದುಕೊಂಡು ಹೋದರೆ’ ಎಂದು ನಮ್ರತಾ ಪ್ರಶ್ನಿಸಿದ್ದಾರೆ. ಈ ವೇಳೆ ಬಿಗ್ ಬಾಸ್ ನಾಮಿನೇಷನ್ ವಿಚಾರ ಪ್ರಸ್ತಾಪವಾಗಿದೆ. ಇವೆಲ್ಲವೂ ಇಂದು ರಾತ್ರಿಯ ಬಿಗ್ ಬಾಸ್ ಸಂಚಿಕೆಯಲ್ಲಿ ಪ್ರಸಾರವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT