ಶಿವರಾಜ್ ಕೆ.ಆರ್ ಪೇಟೆ ತಂದೆ 
ಸಿನಿಮಾ ಸುದ್ದಿ

ಕಾಮಿಡಿ ಕಿಲಾಡಿ ಖ್ಯಾತಿಯ ಶಿವರಾಜ್ ಕೆ ಆರ್ ಪೇಟೆಗೆ ಪಿತೃ ವಿಯೋಗ

 ಜೀ ಕನ್ನಡದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಶಿವರಾಜ್ ಕೆ ಆರ್ ಪೇಟೆ  ಅವರ ತಂದೆ ರಾಮೇಗೌಡ ಅವರು ಆಗಸ್ಟ್ 31ರಂದು ನಿಧನರಾಗಿದ್ದಾರೆ.

ಬೆಂಗಳೂರು: ಜೀ ಕನ್ನಡದ ರಿಯಾಲಿಟಿ ಶೋ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಶಿವರಾಜ್ ಕೆ ಆರ್ ಪೇಟೆ  ಅವರ ತಂದೆ ರಾಮೇಗೌಡ ಅವರು ಆಗಸ್ಟ್ 31ರಂದು ನಿಧನರಾದರು. ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ರಾಜಘಟ್ಟ ಗ್ರಾಮದ ನಿವಾಸಿಯಾಗಿದ್ದರು.

ಡ್ರಾಮಾ ಮಾಸ್ಟರ್ ರಾಮೇಗೌಡ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮೇಗೌಡ ಅವರು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ನಾಲ್ಕು ಗಂಡು ಮಕ್ಕಳು ಮೂರು ಹೆಣ್ಣುಮಕ್ಕಳು ಇದ್ದಾರೆ.  ಹುಟ್ಟೂರು ಕೆ.ಆರ್‌. ಪೇಟೆ ತಾಲೂಕಿನ ರಾಜಘಟ್ಟದಲ್ಲಿ ಸೆ. 1ರ ಶುಕ್ರವಾರ ಮಧ್ಯಾಹ್ನದ ವೇಳೆಗೆ ಅಂತ್ಯಕ್ರಿಯೆ ನೆರವೇರಲಿದೆ.

ರಾಮೇಗೌಡರು ಡ್ರಾಮಾ ಮಾಸ್ಟರ್‌ ಆಗಿ ಕಳೆದ ಕೆಲ ದಶಕಗಳಿಂದ ಗುರುತಿಸಿಕೊಂಡಿದ್ದರು. ನಾಟಕ ನಿರ್ದೇಶನದಲ್ಲಿಯೂ ತೊಡಗಿಸಿಕೊಂಡು, ಅಪಾರ ಶಿಷ್ಯವೃಂದವನ್ನೂ ಹೊಂದಿದ್ದರು. ಅಪ್ಪನ ಗರಡಿಯಲ್ಲಿಯೇ ‌ಶಿವರಾಜ್‌ ಕೆ.ಆರ್‌. ಪೇಟೆ ನಟನೆಯನ್ನು ಕರಗತ ಮಾಡಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT