ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

ಸದ್ಯಕ್ಕೆ ನನ್ನ ಗಮನ ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ: ಅಶುತೋಷ್ ಗೋವಾರಿಕರ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟು ಬಿಡದ ರಿಷಬ್ ಶೆಟ್ಟಿ

ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಕಾಂತಾರ ಪ್ರೀಕ್ವೆಲ್‌ನ ತಯಾರಿಯಲ್ಲಿ  ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ, ಖ್ಯಾತ ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವಾರಿಕರ್ ಮುಂದಿನ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್ ನಿರ್ಮಿಸುತ್ತಿರುವ ಕಾಂತಾರ ಪ್ರೀಕ್ವೆಲ್‌ನ ತಯಾರಿಯಲ್ಲಿ  ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ, ಖ್ಯಾತ ಬಾಲಿವುಡ್ ನಿರ್ದೇಶಕ ಅಶುತೋಷ್ ಗೋವಾರಿಕರ್ ಮುಂದಿನ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಾಲಿವುಡ್‌ ನಲ್ಲಿ ʼಲಗಾನ್‌ʼ ʼಸ್ವದೇಸ್ʼ, ʼಜೋಧಾ ಅಕ್ಬರ್ʼ, ಹಾಗೂ ʼಖೇಲಿನ್ ಹಮ್ ಜೀ ಜಾನ್ ಸೆʼ ಮುಂತಾದ ಸಿನಿಮಾಗಳನ್ನು ಮಾಡಿರುವ ಖ್ಯಾತ ನಿರ್ದೇಶಕ ಅಶುತೋಷ್ ಗೋವಾರಿಕರ್ ಅವರು ಕನ್ನಡದ ʼಡಿವೈನ್‌ ಸ್ಟಾರ್ʼ ರಿಷಬ್‌ ಶೆಟ್ಟಿ ಅವರೊಂದಿಗೆ ಪ್ಯಾನ್‌ ಇಂಡಿಯಾ ಸಿನಿಮಾ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2022 ರಲ್ಲಿ ರಿಲೀಸ್ ಆದ ಕಾಂತಾರ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿ ಪ್ರಶಂಸೆ ಪಡೆಯಿತು.  

ಕೊನೆಯದಾಗಿ ಪಾಣಿಪತ್ ನಿರ್ದೇಶಿಸಿದ ಅಶುತೋಷ್, ರಿಷಬ್ ಶೆಟ್ಟಿ ಜೊತೆ ಕೈಜೋಡಿಸಲು ತೀವ್ರ ಆಸಕ್ತಿ ತೋರಿದ್ದಾರೆ. ಈ ಸಂಬಂಧ ಈಗಾಗಲೇ ಹಲವಾರು ಚರ್ಚೆ ನಡೆದಿವೆ. ಈ ಸಂಬಂಧ ಅಶುತೋಷ್ ಕಥೆ ಸಿದ್ದಪಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದು ರಿಷಬ್ ಶೆಟ್ಟಿ ವೃತ್ತಿ ಜೀವನದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಸದ್ಯ, ನನ್ನ ಗಮನವು ಕೇವಲ ಕಾಂತಾರ ಪ್ರೀಕ್ವೆಲ್ ಮೇಲೆ ಮಾತ್ರ ಇದೆ, ಅದು ತಯಾರಿ ಹಂತದಲ್ಲಿದೆ. ನನ್ನ ಪ್ರಸ್ತುತ ಯೋಜನೆ ಪೂರೈಸಿದ ನಂತರವೇ ನಾನು ನನ್ನ ಮುಂದಿನ ಸಿನಿಮಾ ಬಗ್ಗೆ ಚರ್ಚಿಸುತ್ತೇನೆ ಎಂದಿದ್ದಾರೆ.

ನಿರ್ದೇಶಕನಾಗಿ ತನ್ನನ್ನು ತಾನು ಸ್ಥಾಪಿಸಿಕೊಂಡ ರಿಷಬ್, ಬೆಲ್ ಬಾಟಮ್ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು , ನಾಯಕನಾಗಿಯೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಕಾಂತಾರ ಸಿನಿಮಾ ಮೂಲಕ ನಟನೆಯಲ್ಲೂ ತಮ್ಮ ಕೌಶಲ್ಯ ಪ್ರದರ್ಶಿಸಿದರು.

ನಿರ್ದೇಶಕ ಮತ್ತು ನಟನ ಕಡೆಯಿಂದ ಅಧಿಕೃತ ಪ್ರಕಟಣೆಗಾಗಿ ನಾವು ಕಾಯುತ್ತಿದ್ದೇವೆ. ಅಶುತೋಷ್ ಯಾವ ರೀತಿಯ ಸ್ಕ್ರಿಪ್ಟ್  ಹೊಂದಿದ್ದಾರೆ ಎಂಬುದರ ಕುರಿತು  ರಿಷಬ್ ಶೆಟ್ಟಿ ಆಶ್ಚರ್ಯಪಡಿಸಿರುವುದು ಕುತೂಹಲಕಾರಿಯಾಗಿದೆ. ಕಾಂತಾರ ಪ್ರೀಕ್ವೆಲ್ ಜೊತೆಗೆ  ಅವರು ಕಿರಿಕ್ ಪಾರ್ಟಿ 2 ಮತ್ತು ಬೆಲ್ ಬಾಟಮ್ 2 ನಲ್ಲಿ  ನಟಿಸಲು ಸಿದ್ದರಾಗುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT