ಕಾಮಿಡಿ ನಟ ಚಂದ್ರಪ್ರಭ 
ಸಿನಿಮಾ ಸುದ್ದಿ

ಚಿಕ್ಕಮಗಳೂರು: ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ; ವಿವಾದದಲ್ಲಿ ಕಾಮಿಡಿ ಸ್ಟಾರ್ ಚಂದ್ರಪ್ರಭ!

ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಜಿ. ಚಂದ್ರಪ್ರಭ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್​ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು: ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಜಿ. ಚಂದ್ರಪ್ರಭ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್​ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಚಿಕ್ಕಮಗಳೂರು ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗ ಕಾರು ಬೈಕಿಗೆ ಗುದ್ದಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಾಲ್ತೇಶ್ ಎನ್ನಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

KA 51 MD 9552 ರಿಜಿಸ್ಟರ್ ಹೊಂದಿದ ಕಾರು ಮಾಲ್ತೇಶ್ ಅವರ ಸ್ಕೂಟರಿಗೆ ಗುದ್ದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಾಲತೇಶ್ ಸ್ಥಳದಲ್ಲಿ ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ಕಾರು ಕಾಮಿಡಿ ಕಿಲಾಡಿ ಶೋ ಚಂದ್ರಪ್ರಭ ಅವರಿಗೆ ಸೇರಿದ್ದು ಎನ್ನಲಾಗುತ್ತಿದೆ.

ಅಪಘಾತ ಸಂಭವಿಸಿ ಮಾಲತೇಶ್ ಗಂಭೀರ ಗಾಯಗೊಂಡರು, ಕಾರು ಚಾಲಕ ಸ್ಥಳದಲ್ಲಿ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡಿರುವ ಮಾಲ್ತೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆಯುವ ಸಂದರ್ಭದಲ್ಲಿ ಚಂದ್ರಪ್ರಭ ಅವರೇ ಕಾರು ಓಡಿಸುತ್ತಿದ್ದರೋ ಅಥವಾ ಬೇರೆಯವರು ಈ ಕಾರನ್ನು ತೆಗೆದುಕೊಂಡು ಹೋಗಿದ್ದರೋ ಎನ್ನುವ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!