ವಿ.ಆರ್ ಭಾಸ್ಕರ್ 
ಸಿನಿಮಾ ಸುದ್ದಿ

ನಟ ದಿವಂಗತ ವಿಷ್ಣುವರ್ಧನ್ ಆಪ್ತ, ನಿರ್ದೇಶಕ- ಸಂಭಾಷಣೆಕಾರ ವಿ.ಆರ್ ಭಾಸ್ಕರ್ ವಿಧಿವಶ

ನಟ ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಬಹುಕಾಲ ಸಹಾಯಕರಾಗಿದ್ದ ನಟ, ಸಾಹಿತಿ ಹಾಗೂ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಬೆಂಗಳೂರು: ನಟ ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಬಹುಕಾಲ ಸಹಾಯಕರಾಗಿದ್ದ ನಟ, ಸಾಹಿತಿ ಹಾಗೂ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ವಿಷ್ಣುವರ್ಧನ್ ಅವರಿಗೆ ಸಹಾಯಕರಾಗುವುದರ ಜೊತೆಗೆ ತೀರಾ ಆತ್ಮೀಯರೂ ಆಗಿದ್ದರು. ಈ ಒಡನಾಟವೇ ಅವರನ್ನು ನಟರನ್ನಾಗಿ, ನಿರ್ದೇಶಕರನ್ನಾಗಿ ಮತ್ತು ಬರಹಗಾರರನ್ನಾಗಿ ಮಾಡಿತ್ತು. ಇತ್ತೀಚೆಗಷ್ಟೇ ಅವರು ಮಗನ ಬಗ್ಗೆ ವಿಡಿಯೋವೊಂದನ್ನು ಮಾಡಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಗನಿಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದರು. ನಂತರ ಮಗನನ್ನು ಮತ್ತು ಪತ್ನಿಯನ್ನೂ ಕಳೆದುಕೊಂಡರು.

ರುದ್ರ ನಾಗ, ಕರ್ತವ್ಯ, ನನ್ನ ಶತ್ರು,  ಪೊಲೀಸ್ ಮತ್ತು ದಾದಾ, ರುದ್ರ ವೀಣೆ, ದಾದಾ, ಆರಾಧನೆ, ಕರುಳಿನ ಕುಡಿ, ಕದಂಬ, ಸುಪ್ರಭಾತ, ರುದ್ರ, ಲಯನ್ ಜಗಪತಿ ರಾವ್, ಒಂದಾಗಿ ಬಾಳು, ಡಿಸೆಂಬರ್ 31, ಹೃದಯವಂತ, ನೀನು ನಕ್ಕರೆ ಹಾಲು ಸಕ್ಕರೆ, ರವಿವರ್ಮ, ಏಕದಂತ, ಡಾಕ್ಟರ್ ಕೃಷ್ಣ, ಗಾಡ್ ಫಾದರ್, ಆಪ್ರಮಿತ್ರ, ಆಪ್ತರಕ್ಷಕ ಸೇರಿದಂತೆ  ‌ವಿಷ್ಣುವರ್ಧನ್ ಅವರ ಹಲವು ಸಿನಿಮಾಗಳಿಗೆ ಸಂಭಾಷಣೆ, ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.

ಅನುರಾಗ ದೇವತೆ, ಮನೆಮನೆ ರಾಮಾಯಣ, ಸಕಲಕಲಾವಲ್ಲಭ, ಹೃದಯಾಂಜಲಿ, ಪಂಜಾಬಿ ಹೌಸ್, ಮುಂತಾದ ಸಿನಿಮಾಗಳಿಗೆ ವಿ.ಆರ್.ಭಾಸ್ಕರ್ ನಿರ್ದೇಶನ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT