ಖುಷಿ ಸಿನಿಮಾ ಪೋಸ್ಟರ್ 
ಸಿನಿಮಾ ಸುದ್ದಿ

ವಿಜಯ ದೇವರಕೊಂಡ-ಸಮಂತಾ ಅಭಿನಯದ 'ಖುಷಿ' ಸಿನಿಮಾ ಒಟಿಟಿ ಬಿಡುಗಡೆಗೆ ದಿನಾಂಕ ಫಿಕ್ಸ್!

ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ಅಭಿನಯದ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ತೆರೆಕಂಡಿತು. ದೇವರಕೊಂಡ ಮತ್ತು ಸಮಂತಾ ಅಭಿಮಾನಿಗಳಿಗೆ ಸಖತ್ ಖುಷಿ ಕೊಟ್ಟ ಸಿನಿಮಾ, ಗಲ್ಲಾಪೆಟ್ಟಿಗೆಯಲ್ಲಿಯೂ ಕಮಾಲ್ ಮಾಡಿತು. ಇದೀಗ, ಚಿತ್ರತಂಡ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ.

ವಿಜಯ್ ದೇವರಕೊಂಡ ಮತ್ತು ಸಮಂತಾ ರುತ್ ಪ್ರಭು ಅಭಿನಯದ ಖುಷಿ ಸಿನಿಮಾ ಸೆಪ್ಟೆಂಬರ್ 1 ರಂದು ತೆರೆಕಂಡಿತು. ದೇವರಕೊಂಡ ಮತ್ತು ಸಮಂತಾ ಅಭಿಮಾನಿಗಳಿಗೆ ಸಖತ್ ಖುಷಿ ಕೊಟ್ಟ ಸಿನಿಮಾ, ಗಲ್ಲಾಪೆಟ್ಟಿಗೆಯಲ್ಲಿಯೂ ಕಮಾಲ್ ಮಾಡಿತು. ಬಿಡುಗಡೆಯಾದ ಮೊದಲ ಐದು ದಿನಗಳಲ್ಲಿಯೇ 70 ಕೋಟಿ ಗಳಿಸುವಲ್ಲಿ ಯಶಸ್ವಿಯಾಯಿತು. ಆದರೆ, ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾ ಬಿಡುಗಡೆ ನಂತರ, ಖುಷಿ ಸಿನಿಮಾದ ಓಟಕ್ಕೆ ಬ್ರೇಕ್ ಬಿದ್ದಿತು. ಇದೀಗ, ಚಿತ್ರತಂಡ ಸಿನಿಮಾದ ಒಟಿಟಿ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ.

ಶಿವ ನಿರ್ವಾಣ ನಿರ್ದೇಶನದ ಈ ಚಿತ್ರದ ಒಟಿಟಿ ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಖರೀದಿಸಿದೆ. ವರದಿಯ ಪ್ರಕಾರ, ಚಿತ್ರದ ಸ್ಟ್ರೀಮಿಂಗ್ ಹಕ್ಕುಗಳನ್ನು ಖರೀದಿಸಲು ನೆಟ್‌ಫ್ಲಿಕ್ಸ್ ಭಾರಿ ಮೊತ್ತವನ್ನೇ ಪಾವತಿಸಿದೆ ಎನ್ನಲಾಗಿದೆ. ಸದ್ಯ ಚಿತ್ರದ ಡಿಜಿಟಲ್ ಸ್ಟ್ರೀಮಿಂಗ್ ಸೆಪ್ಟೆಂಬರ್ 30 ಅಥವಾ ಅಕ್ಟೋಬರ್ 4 ರಂದು ಪ್ರಾರಂಭವಾಗುವ ಸಾದ್ಯತೆ ಇದೆ.

ಖುಷಿಗೆ ಪ್ರೇಕ್ಷಕರಿಂದ ಅಗಾಧವಾದ ಪ್ರತಿಕ್ರಿಯೆ ಸಿಕ್ಕಿತು. ಕೊನೆಯ ಬಾರಿ ಲೈಗರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಟ ವಿಜಯ್ ದೇವರಕೊಂಡ ಅವರು ತಮ್ಮ ಚಿತ್ರದ ಮೇಲೆ ಪ್ರೀತಿ ತೋರಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಹೇಳಿದರು. 

'ನೀವೆಲ್ಲರೂ ನನ್ನೊಂದಿಗೆ 5 ವರ್ಷಗಳ ಕಾಲ ಕಾದಿದ್ದೀರಿ. ನಾನು ಕೂಡ ತಾಳ್ಮೆಯಿಂದ ಕಾಯ್ದಿದ್ದೇನೆ. ಇದೀಗ ಖುಷಿ ಸಿನಿಮಾ ಮಾಡಿದ್ದೇನೆ. ನನಗೆ ಈ ಸಂತೋಷದಿಂದ ಎಚ್ಚರವಾಯಿತು ಮತ್ತು ನನ್ನ ಫೋನ್‌ಗೆ ನೂರಾರು ಸಂದೇಶಗಳು ಬಂದವು. ನಾನು ಸಹಾಯ ಮಾಡಲು ಸಾಧ್ಯವಿಲ್ಲ ಆದರೆ, ಈ ಭಾವನೆಗಳೊಂದಿಗೆ ಕಣ್ಣೀರು ಹಾಕುತ್ತೇನೆ. ನಾನು ನಿಮ್ಮೆಲ್ಲರನ್ನು ಪ್ರೀತಿಸುತ್ತೇನೆ. ನಿಮ್ಮ ಸ್ನೇಹಿತರು ಮತ್ತು ಕುಟುಂಬಗಳೊಂದಿಗೆ ಹೋಗಿ ಚಿತ್ರವನ್ನು ಆನಂದಿಸಿ' ಎಂದು ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT