ಪೈಟರ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ವಿನೋದ್ ಪ್ರಭಾಕರ್ ಅಭಿನಯದ 'ಫೈಟರ್' ಅಕ್ಟೋಬರ್‌ನಲ್ಲಿ ರಿಲೀಸ್!

ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಸ್ಯಾಂಡಲ್ವುಡ್ ನಟ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಸಂಗೀತ ನಿರ್ದೇಶಕ ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ (ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ, ಗೌರೀಶ್ ಹಾಗೂ ಹಿರಿಯ ಪತ್ರಕರ್ತ ಕೆ.ಎಸ್ ವಾಸು, ಕೆ.ಎನ್ ನಾಗೇಶ್ ಕುಮಾರ್ ಮುಂತಾದ ಗಣ್ಯರು ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ಈ ಹಾಡಿನ ಮೊದಲ ಪದ "ಐ ವಾನ ಫಾಲೋ" ಎಂಬುದನ್ನು ನಿರ್ದೇಶಕರು ಹೇಳಿದಾಗ "ಫಾಲೋ" ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು. ವಿಶೇಷವೆಂದರೆ, ಈ  ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ಹಾಡಿನ ಬಗ್ಗೆ ಮಾಹಿತಿ ನೀಡಿದರು.

ಈ ಹಾಡನ್ನು ಪಾಂಡಿಚೇರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್  ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ "ಫಾಲೋ ಯು" ಹಾಡು ಅದ್ಭುತವಾಗಿ ಹಾಗೂ ಅದ್ದೂರಿಯಾಗಿ ಮೂಡಿಬಂದಿದೆ. ಈ ಹಾಡನ್ನು ವಿವಿಧ ಸ್ಥಳಗಳಲ್ಲಿ ಚಿತ್ರೀಕರಿಸಲಾಗಿದೆ.

ಇದೊಂದು ಕೌಟುಂಬಿಕ ಮನರಂಜನಾ ಚಿತ್ರ. ಒಗ್ಗಟ್ಟು ಮತ್ತು ಶಿಸ್ತಿನ ಮೂಲಕ ಏನನ್ನಾದರೂ ಸಾಧಿಸಬಹುದು ಎಂಬ ಸಂದೇಶವನ್ನು ನಾವು ನೀಡಿದ್ದೇವೆ. ಅದರೊಂದಿಗೆ ಬಲವಾದ ಭಾವನಾತ್ಮಕ ಅಂಶವೂ ಇದೆ ಎಂದು ವಿನೋದ್ ಪ್ರಭಾಕರ್ ಹೇಳಿದ್ದಾರೆ.

ಈ ಚಿತ್ರವನ್ನು ಸೋಮಶೇಖರ್ ಕಟ್ಟಿಗೇನಹಳ್ಳಿ ಅವರ ಆಕಾಶ್ ಎಂಟರ್‌ಪ್ರೈಸಸ್ ಬ್ಯಾನರ್‌ನಿಂದ ನಿರ್ಮಿಸಲಾಗಿದೆ . ಪಾವನಾ ಮತ್ತು ಲೇಖಾ ಚಂದ್ರ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಶರತ್ ಲೋಹಿತಾಶ್ವ, ನಿರೋಷಾ ಮತ್ತು ಪ್ರತಾಪ್ ಕುರಿ ಮುಂತಾದವರು ನಟಿಸಿದ್ದಾರೆ. ಚಿತ್ರವು ಪ್ರಸ್ತುತ ಪೋಸ್ಟ್-ಪ್ರೊಡಕ್ಷನ್ ಕೆಲಸಗಳ ಅಂತಿಮ ಹಂತದಲ್ಲಿದ್ದು, ತಯಾರಕರು ಅಕ್ಟೋಬರ್ ನಲ್ಲಿ ಬಿಡುಗಡೆ ಮಾಡುವ ಉದ್ದೇಶ ಹೊಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT