ಲಿಯೋ ಚಿತ್ರದ ಕನ್ನಡ ಪೋಸ್ಟರ್ 
ಸಿನಿಮಾ ಸುದ್ದಿ

ದಳಪತಿ ವಿಜಯ್-ತ್ರಿಷಾ ನಟನೆಯ 'ಲಿಯೋ' ಸಿನಿಮಾದ ಕನ್ನಡ ಪೋಸ್ಟರ್ ರಿಲೀಸ್!

ಖ್ಯಾತ ಸಿನಿಮಾ ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶನದ ದಳಪತಿ ವಿಜಯ್ ಅಭಿನಯದ 'ಲಿಯೋ' ಚಿತ್ರದ ಪ್ರಚಾರವನ್ನು ಚಿತ್ರತಂಡ ಕಿಕ್‌ಸ್ಟಾರ್ಟ್ ಮಾಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಭಾಗವಾಗಿ, ಚಿತ್ರತಂಡ ಎಲ್ಲಾ ಭಾಷೆಗಳಲ್ಲಿ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಿದೆ.

ಖ್ಯಾತ ಸಿನಿಮಾ ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶನದ ದಳಪತಿ ವಿಜಯ್ ಅಭಿನಯದ 'ಲಿಯೋ' ಚಿತ್ರದ ಪ್ರಚಾರವನ್ನು ಚಿತ್ರತಂಡ ಕಿಕ್‌ಸ್ಟಾರ್ಟ್ ಮಾಡಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಇದರ ಭಾಗವಾಗಿ, ಚಿತ್ರತಂಡ ಎಲ್ಲಾ ಭಾಷೆಗಳಲ್ಲಿ ಪೋಸ್ಟರ್ ಅನ್ನು ಹಂಚಿಕೊಳ್ಳುತ್ತಿದೆ.

ಸೆಪ್ಟಂಬರ್ 17ರಂದು ಚಿತ್ರತಂಡ ಚಿತ್ರದ ತೆಲುಗು ಪೋಸ್ಟರ್ ಅನ್ನು ಬಿಡುಗಡೆ ಮಾಡಿತ್ತು. 'ಶಾಂತವಾಗಿರಿ ಮತ್ತು ಯುದ್ಧವನ್ನು ತಪ್ಪಿಸಿ' ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿತ್ತು. 

ಇದೀಗ ನೆನ್ನೆ (ಸೆಪ್ಟಂಬರ್ 18) ಚಿತ್ರದ ಕನ್ನಡ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, 'ಶಾಂತವಾಗಿರಿ ಮತ್ತು ನಿಮ್ಮನ್ನು ನೀವು ಪಾರುಮಾಡಿಕೊಳ್ಳಲು ಸಂಚು ರೂಪಿಸಿ' ಎಂಬ ಹೊಸ ಅಡಿಬರಹ ನೀಡಿದೆ. ಈ ಮೂಲಕ ಚಿತ್ರತಂಡ ಕುತೂಹಲ ಹೆಚ್ಚಿಸಿದೆ. ಕ್ರೈಂ ಸೀನ್‌ನಂತೆ ಕಾಣುವ ಹಿನ್ನೆಲೆಯಲ್ಲಿ ವಿಜಯ್ ಕುಳಿತಿದ್ದಾರೆ. ಗನ್‌ವೊಂದರ ಒಳಗೆ ಈ ಚಿತ್ರ ಕಾಣುತ್ತದೆ. 

ವಿಜಯ್ ಜೊತೆಗೆ, ಲಿಯೋದಲ್ಲಿ ತ್ರಿಶಾ, ಮಿಸ್ಕಿನ್, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮತ್ತು ಸಂಜಯ್ ದತ್ ಮುಂತಾದವರು ನಟಿಸಿದ್ದಾರೆ.

ಈಗಾಗಲೇ ಕೈದಿ (2019) ಮತ್ತು ವಿಕ್ರಮ್ (2022) ಚಿತ್ರಗಳನ್ನು ನಿರ್ದೇಶಿಸಿದ್ದ ಲೋಕೇಶ್ ಅವರ ಈ ಚಿತ್ರ ಸಿನೆಮ್ಯಾಟಿಕ್ ಯೂನಿವರ್ಸ್‌ನ ಭಾಗವಾಗಿದೆಯೇ ಎಂಬ ಬಗ್ಗೆ ಚಿತ್ರತಂಡ ಇನ್ನೂ ಘೋಷಿಸಿಲ್ಲ. ಚಿತ್ರಕ್ಕೆ ಮನೋಜ್ ಪರಮಹಂಸ ಅವರ ಛಾಯಾಗ್ರಹಣ ಮತ್ತು ಅನಿರುದ್ಧ ರವಿಚಂದರ್ ಅವರ ಸಂಗೀತವಿದೆ.

ಲಲಿತ್ ಕುಮಾರ್ ಅವರ 7 ಸ್ಕ್ರೀನ್ ಸ್ಟುಡಿಯೋ ಬೆಂಬಲದೊಂದಿಗೆ, ನಟ ವಿಜಯ್ ಮತ್ತು ಲೋಕೇಶ್ ಕನಕರಾಜ್ ಅವರು ಎರಡನೇ ಬಾರಿಗೆ ಒಟ್ಟಿಗೆ ಕೆಲಸ ಮಾಡಿದ್ದಾರೆ. ಚಿತ್ರವು ಅಕ್ಟೋಬರ್ 19ರಂದು ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ.

ಈಮಧ್ಯೆ, ವಿಜಯ್ ಈಗ ತಮ್ಮ ಮುಂದಿನ, 'ದಳಪತಿ 68' ಎಂಬ ತಾತ್ಕಾಲಿಕ ಶೀರ್ಷಿಕೆಯ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೊಂದೆಡೆ, ಲೋಕೇಶ್ ಅವರು ಇದೇ ಮೊದಲ ಬಾರಿಗೆ ರಜನಿಕಾಂತ್ ಅವರ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದು, ಚಿತ್ರವನ್ನು ಸನ್ ಪಿಕ್ಚರ್ಸ್ ಬೆಂಬಲಿಸುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್