ಅನಂತ್ ನಾಗ್ 
ಸಿನಿಮಾ ಸುದ್ದಿ

ಬ್ರಿಟಿಷರ ಕಾಲದಿಂದಲೂ ರಾಜ್ಯಕ್ಕೆ ಅನ್ಯಾಯ, ಅವರಿಂದಲೇ ತಮಿಳುನಾಡಿಗೆ ಹೆಚ್ಚು ನೀರು ಸಿಗುವ ಅವ್ಯವಸ್ಥೆ: ಅನಂತ್ ನಾಗ್

ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ.

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.

ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ ಎಂದಿನಂತೆ ತಮಿಳುನಾಡು ಕಾವೇರಿ ವಿವಾದ ಆರಂಭಿಸಿದೆ. ಇದನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಅಲ್ಲಿ ಅಧಿಕಾರಕ್ಕೆ ಬರುವುದು ಕೇವಲ ಡಿಎಂಕೆ ಸರ್ಕಾರಗಳೇ. ಕರ್ನಾಟಕ ಸರಿಯಾಗಿ ಕಾವೇರಿ ನೀರು ಬಿಡುತ್ತಿಲ್ಲ ಎನ್ನುವ ಭಾವನೆಯನ್ನು ಅಲ್ಲಿನ ಜನರಿಗೆ ಅವರು ತಂದಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕ ಎಂದರೆ ಪಾಕಿಸ್ತಾನ, ಶ್ರೀಲಂಕಾ ಅಂದುಕೊಂಡಿದ್ದಾರೆ. ಯುದ್ಧಕ್ಕೆ ನಿಂತುಕೊಂಡಂತೆ ಅವರ ನಡೆಯಿದೆ. ಮಾತುಕತೆಯಲ್ಲಿ ಬಗೆಹರಿಸಲು ಅವರಿಗೆ ಇಷ್ಟವಿಲ್ಲ. ಅವರೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಹೋಗಿ ಕಾವೇರಿ ಸಮಸ್ಯೆಯನ್ನು ಪ್ರತಿನಿಧಿಸುತ್ತಾರೆ. ನಮ್ಮವರು ಅಷ್ಟೇ ಬಲದಿಂದ ಹೋಗಿ ಪ್ರತಿನಿಧಿಸಿದ್ದು ಕೇಳಿಬರುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಕಾವೇರಿ ನೀರು ಅವರಿಗೆ ಕುಡಿಯಲು ಅಲ್ಲ ಬದಲಾಗಿ ಕೈಗಾರಿಕೆಗಳಿಗೆ ಹಾಗೂ ಕೃಷಿಗೆ ಬಳಕೆಗೆ, ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ನಮ್ಮ ಎಲ್ಲ ಶಾಸಕರು, ಸಂಸದರು ಒಗ್ಗಟ್ಟಿನಿಂದ ನಿಂತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಈ ಕುರಿತು ದಿಟ್ಟ ನಿಲುವು ತಾಳಬೇಕು ಎಂದು ಅನಂತನಾಗ್‌ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT