ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಎಡಗೈಯೇ ಅಪಘಾತಕ್ಕೆ ಕಾರಣ' ವಿಶೇಷ ಪಾತ್ರದಲ್ಲಿ ನಿರೂಪ್ ಭಂಡಾರಿ!

ಸಮರ್ಥ್ ಬಿ ಕಡಕೋಳ್ ಚೊಚ್ಚಲ ನಿರ್ದೇಶನದ ಚಿತ್ರ ಎಡಗೈಯೇ ಅಪಘಾತಕ್ಕೆ ಕಾರಣ ಶೂಟಿಂಗ್ ಮಂಗಳವಾರ ಮುಕ್ತಾಯಗೊಂಡಿದ್ದು, ದಿಗಂತ್ ನಾಯಕನಾಗಿರುವ ಚಿತ್ರದಲ್ಲಿ ನಿರೂಪ್ ಭಂಡಾರಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ

ಸಮರ್ಥ್ ಬಿ ಕಡಕೋಳ್ ಚೊಚ್ಚಲ ನಿರ್ದೇಶನದ ಚಿತ್ರ ಎಡಗೈಯೇ ಅಪಘಾತಕ್ಕೆ ಕಾರಣ ಶೂಟಿಂಗ್ ಮಂಗಳವಾರ ಮುಕ್ತಾಯಗೊಂಡಿದ್ದು, ದಿಗಂತ್ ನಾಯಕನಾಗಿರುವ ಚಿತ್ರದಲ್ಲಿ ನಿರೂಪ್ ಭಂಡಾರಿ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಅವರು ದಿಗಂತ್ ಮತ್ತು ನಿರೂಪ್ ಭಂಡಾರಿ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ನಿರ್ದೇಶಕರಿಂದ ನಿರ್ಮಾಪಕರಾಗಿ ಬದಲಾಗಿರುವ ಗುರುದತ್ತ ಗಾಣಿಗ ಮಾತನಾಡಿ ನಿರೂಪ್ ಅವರ ಪಾತ್ರವು ವಿಶಿಷ್ಟವಾಗಿದೆ ಇದು ವಿಶೇಷ ಪಾತ್ರವಲ್ಲ ಎಂದು ಹೇಳಿದರು. ಇದು ಚಿತ್ರದ ಕಥಾಹಂದರದಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ನಾವು ನಿರ್ದಿಷ್ಟವಾಗಿ ಈ ಪಾತ್ರಕ್ಕಾಗಿ ನಿರೂಪ್ ಭಂಡಾರಿ ಅವರನ್ನು ಆಯ್ಕೆ ಮಾಡಿದ್ದೇವೆ ಮತ್ತು ಅವರು ಯುವಕರ ತಂಡಕ್ಕೆ ಬೆಂಬಲ ತೋರಿಸುವ ಮೂಲಕ ಅವರು ಆಫರ್ ಒಪ್ಪಿಕೊಂಡಿದ್ದಕ್ಕಾಗಿ ನಮಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ಎಡಗೈಯೇ ಅಪಘಾತಕ್ಕೆ ಕಾರಣ, ಕ್ರೈಮ್ ಥ್ರಿಲ್ಲರ್ ಸಿನಿಮಾವಾಗಿದೆ. ಎಡಗೈ ವ್ಯಕ್ತಿಗಳು ಮತ್ತು ಅವರು ಎದುರಿಸುವ ಸವಾಲುಗಳ ಸುತ್ತ ಕೇಂದ್ರೀಕೃತವಾಗಿದೆ. ಈ ಚಿತ್ರದಲ್ಲಿ ಧನು ಹರ್ಷ ಅವರನ್ನು ನಾಯಕಿಯಾಗಿ ಪರಿಚಯಿಸಲಾಗಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT