ಸಲಾರ್, ಯುವ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಹೊಂಬಾಳೆ ಫಿಲ್ಮ್ಸ್​ನ ಬಹುನಿರೀಕ್ಷಿತ 'ಸಲಾರ್', 'ಯುವ' ಚಿತ್ರ ಒಂದೇ ದಿನ ಬಿಡುಗಡೆ?

ಹೊಂಬಾಳೆ ಫಿಲ್ಮ್ಸ್ ಹೊರ ತರುತ್ತಿರುವ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ಸಲಾರ್ ಹಾಗೂ ಕನ್ನಡ ಚಿತ್ರರಂಗ ಮೇರು ನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ನಟನೆಯ ಯುವ ಚಿತ್ರ ಒಂದೇ ದಿನ ಬಿಡುಗಡೆಯಾಗಲು ಸಜ್ಜಾಗಿವೆ.

ಹೊಂಬಾಳೆ ಫಿಲ್ಮ್ಸ್ ಹೊರ ತರುತ್ತಿರುವ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ಸಲಾರ್ ಹಾಗೂ ಕನ್ನಡ ಚಿತ್ರರಂಗ ಮೇರು ನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ನಟನೆಯ ಯುವ ಚಿತ್ರ ಒಂದೇ ದಿನ ಬಿಡುಗಡೆಯಾಗಲು ಸಜ್ಜಾಗಿವೆ.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಮುಂದೂಡಿತ್ತು. ಇದೀಗ ಚಿತ್ರ ಬಿಡುಗಡೆ ದಿನಾಂಕವನ್ನು ಕೊನೆಗೂ ನಿರ್ಧರಿಸಿರುವ ಚಿತ್ರತಂಡ, ವಾರಾಂತ್ಯದ ವೇಳೆ ಅಧಿಕೃತವಾಗಿ ಮಾಹಿತಿ ನೀಡಲಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಚಿತ್ರವು ಡಿಸೆಂಬರ್ 22 ರಂದು ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿವೆ.

ಒಂದು ವೇಳೆ ಚಿತ್ರ ಡಿಸೆಂಬರ್ 22ಕ್ಕೆ ಬಿಡುಗಡೆಯಾಗಿದ್ದೇ ಆದರೆ, ರಾಜ್‌ಕುಮಾರ್ ಹಿರಾನಿ ನಿರ್ದೇಶನದ ಶಾರುಖ್ ಖಾನ್ ಅವರ ಬಹುನಿರೀಕ್ಷಿತ ಚಿತ್ರ ಡಂಕಿಯೊಂದಿಗೆ ಪೈಪೋಟಿ ಎದುರಾಗಲಿದೆ.

ಈ ನಡುವೆ ಯುವರಾಜ್ ಕುಮಾರ್ ನಟನೆಯ ಯುವ ಚಿತ್ರವನ್ನು ಡಿಸೆಂಬರ್ 22ಕ್ಕೆ ಬಿಡುಗಡೆ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಇದರ ಜೊತೆಗೆ ನಟ ಧ್ರುವ ಸರ್ಜಾ ನಟನೆ ಮಾರ್ಟಿನ್ ಚಿತ್ರತಂಡ ಕೂಡ ಚಿತ್ರ ಬಿಡುಗಡೆಗೆ ಇದೇ ದಿನಾಂಕವನ್ನೇ ಫೈನಲ್ ಮಾಡಲು ಚಿಂತನೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಒಂದು ವೇಳೆ ಇದು ನಿಜವಾಗಿದ್ದೇ ಆದರೆ, ಕ್ರಿಸ್ ಮಸ್ ಹಬ್ಬದ ಸಂದರ್ಭದಲ್ಲಿ ಸಿನಿಪ್ರಿಯರಿಗೆ ಭರ್ಜರಿ ರಸದೌತಣ ಸಿಗುವುದಂತೂ ಖಚಿತ.

ಸಲಾರ್ ಚಿತ್ರದಲ್ಲಿ ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಟಿನ್ನು ಆನಂದ್, ಶ್ರೀಯಾ ರೆಡ್ಡಿ ಮತ್ತು ಪ್ರಮೋದ್ ನಟಿಸಿದ್ದು, ಚಿತ್ರಕ್ಕೆ ಭುವನ್ ಗೌಡ ಛಾಯಾಗ್ರಹಣ ಮತ್ತು ರವಿ ಬಸ್ರೂರ್ ಸಂಗೀತ ಸಂಯೋಜಿಸಿದ್ದಾರೆ. ಇನ್ನು ಯುವರಾಜ್ ಕುಮಾರ್ ಅಭಿನಟದ ಯುವ ಚಿತ್ರಕ್ಕೆ ಸಪ್ತಮಿ ಗೌಡ ಅವರು ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT