ನಟ ವಿಶಾಲ್ 
ಸಿನಿಮಾ ಸುದ್ದಿ

CBFCಯ ಮುಂಬೈ ಕಚೇರಿಯಲ್ಲಿ ಭ್ರಷ್ಟಾಚಾರ: ತಮಿಳು ನಟ ವಿಶಾಲ್ ಆರೋಪ, ತನಿಖೆಗೆ ಆದೇಶ

ಸಿಬಿಎಫ್‌ಸಿಯ ಮುಂಬೈ ಕಚೇರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ತಮಿಳು ನಟ ವಿಶಾಲ್ ಅವರು, ತಮ್ಮ ಹಿಂದಿ ಚಿತ್ರ "ಮಾರ್ಕ್ ಆಂಟನಿ" ಬಿಡುಗಡೆಗಾಗಿ ಪ್ರಮಾಣಪತ್ರ ಪಡೆಯಲು ಲಂಚ ಕೇಳುತ್ತಿರುವುದಾಗಿ ಹೇಳಿದ್ದಾರೆ.

ನವದೆಹಲಿ: ಸಿಬಿಎಫ್‌ಸಿಯ ಮುಂಬೈ ಕಚೇರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ತಮಿಳು ನಟ ವಿಶಾಲ್ ಅವರು, ತಮ್ಮ ಹಿಂದಿ ಚಿತ್ರ "ಮಾರ್ಕ್ ಆಂಟನಿ" ಬಿಡುಗಡೆಗಾಗಿ ಪ್ರಮಾಣಪತ್ರ ಪಡೆಯಲು ಲಂಚ ಕೇಳುತ್ತಿರುವುದಾಗಿ ಹೇಳಿದ್ದಾರೆ. ಈ ಸಂಬಂಧ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶುಕ್ರವಾರ ತನಿಖೆಗೆ ಆದೇಶಿಸಿದೆ.

ಸಿಬಿಎಫ್‌ಸಿಯ ಮುಂಬೈ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಶಾಲ್ ಅವರು ಗುರುವಾರ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಮಾಡಿದ್ದರು. "ಮಾರ್ಕ್ ಆಂಟನಿ" ಸ್ಕ್ರೀನಿಂಗ್ ಮತ್ತು ಪ್ರಮಾಣೀಕರಣಕ್ಕಾಗಿ ತಾವು 6.5 ಲಕ್ಷ ರೂಪಾಯಿ ಪಾವತಿಸಬೇಕಾಗಿದೆ ಎಂದು ತಿಳಿಸಿದ್ದರು.

"ನಟ ವಿಶಾಲ್ ಅವರು ಬಹಿರಂಗಪಡಿಸಿರುವ CBFC ಭ್ರಷ್ಟಾಚಾರದ ವಿಚಾರ ಅತ್ಯಂತ ದುರದೃಷ್ಟಕರವಾಗಿದೆ. ಸರ್ಕಾರ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಮತ್ತು ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಸಂಬಂಧ ತನಿಖೆಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಮುಂಬೈನಲ್ಲಿ ಇಂದೇ ವಿಚಾರಣೆ ನಡೆಸಲಿದೆ" ಎಂದು ಐ & ಬಿ ಸಚಿವಾಲಯ ಶುಕ್ರವಾರ ಟ್ವೀಟ್ ಮಾಡಿದೆ.

ಸಿಬಿಎಫ್‌ಸಿಯಿಂದ ಕಿರುಕುಳಕ್ಕೆ ಒಳಗಾದ ಯಾವುದೇ ನಿದರ್ಶನಗಳಿದ್ದರೆ ಅದನ್ನು ತನ್ನ ಗಮನಕ್ಕೆ ತರುವಂತೆ ಮತ್ತು ಮಾಹಿತಿ ಹಂಚಿಕೊಳ್ಳುವಂತೆ ಸಚಿವಾಲಯ ಜನರಿಗೆ ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT