ಜ್ಯೋತಿ ರೈ 
ಸಿನಿಮಾ ಸುದ್ದಿ

ತೆಲುಗು ನಿರ್ದೇಶಕನ ಜೊತೆ ಎರಡನೇ ವಿವಾಹಕ್ಕೆ ಕನ್ನಡ ನಟಿ ಜ್ಯೋತಿ ರೈ ಸಿದ್ದ: ಎಂಗೇಜ್ ಮೆಂಟ್ ಪೋಸ್ಟ್ ವೈರಲ್

ಕನ್ನಡ ಕಿರುತೆರೆ ನಟಿ ಜ್ಯೋತಿರೈ ಸದ್ದಿಲ್ಲದೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ಕನ್ನಡ ಕಿರುತೆರೆ ನಟಿ ಜ್ಯೋತಿರೈ ಸದ್ದಿಲ್ಲದೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಗುಡ್‌ ನ್ಯೂಸ್ ಕೊಡುವುದಾಗಿ ಹೇಳಿದ್ದ ಚೆಲುವೆ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ ಎನ್ನಲಾಗ್ತಿದೆ.

ತೆಲುಗು ನಿರ್ದೇಶಕ ಸುಕು ಪೂರ್ವಜ್‌ ಜೊತೆ ಎಂಗೇಜ್‌ಮೆಂಟ್‌ ಆಗಿದೆ ಎಂದು ಜ್ಯೋತಿ ಬರೆದುಕೊಂಡಿದ್ದಾರೆ. ಆದರೆ ಜ್ಯೋತಿ ರೈ ಕುತ್ತಿಗೆಯಲ್ಲಿ ಕರಿಮಣಿ ಕಾಣಿಸುತ್ತಿದ್ದು ಈಗಾಗಲೇ ಅವರಿಗೆ ಮದುವೆ ಆಗಿದೆ, ಬಹುಶ: ಇದು ಹಳೆಯ ಫೋಟೋಗಳಿರಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಕನ್ನಡ ಕಿರುತೆರೆ ನಟಿ ಜ್ಯೋತಿ ರೈ ಕೆಲವು ದಿನಗಳಿಂದ ಭಾರೀ ಸುದ್ದಿಯಲ್ಲಿದ್ದಾರೆ. ಕನ್ನಡದ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದ ಜ್ಯೋತಿ ರೈ ಈಗ ನಾಯಕಿ ಪಾತ್ರಗಳಲ್ಲಿ ಮಿಂಚುತ್ತಿದ್ದಾರೆ. ಇನ್ನೆಂದಿಗೂ ನಾನು ಪೋಷಕ ಪಾತ್ರ ಮಾಡುವುದಿಲ್ಲ ಎಂದಿದ್ದಾರೆ. ಜೊತೆಗೆ ಹಾಟ್‌ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಕೆಲವು ದಿನಗಳಿಂದ ಸುದ್ದಿಯೇ ಇಲ್ಲದ ಜ್ಯೋತಿ ರೈ ಇದ್ದಕ್ಕಿದ್ದಂತೆ ಹಾಟ್‌ ಫೋಟೋಗಳ ಮೂಲಕ ಬಹಳ ಸುದ್ದಿಯಾಗಿದ್ದರು. ಜ್ಯೋತಿ ರೈ ಇದ್ದಕ್ಕಿದ್ದಂತೆ ಹೀಗೆ ಬದಲಾಗಿದ್ದು ಎಲ್ಲರಿಗೂ ಆಶ್ಚರ್ಯ ಉಂಟಾಗಿತ್ತು. ಅಲ್ಲದೆ ಜ್ಯೋತಿ ರೈ ಪದೇ ಪದೆ ಯುವಕನೊಬ್ಬನೊಂದಿಗೆ ಇರುವ ಫೋಟೋ ನೋಡಿ ಅನುಮಾನ ವ್ಯಕ್ತಪಡಿಸಿದ್ದರು.

ಬಹುತೇಕ ಫೋಟೋಗಳಿಗೆ ಜ್ಯೋತಿ, ಕಾಮೆಂಟ್‌ ಬಾಕ್ಸ್‌ ಆಫ್‌ ಮಾಡಿದ್ದಾರೆ. ಜ್ಯೋತಿ ರೈ ಮದುವೆ ಆಗಿದ್ದು ಒಬ್ಬ ಮಗ ಕೂಡಾ ಇದ್ದಾನೆ. ಆದರೆ ಮೊದಲ ಪತಿಯಿಂದ ಜ್ಯೋತಿ ದೂರಾಗಿದ್ದು ನಿರ್ದೇಶಕ ಸುಕು ಪೂರ್ವಜ್‌ ಜೊತೆ ಡೇಟಿಂಗ್‌ ಮಾಡುತ್ತಿರಬಹುದು ಎನ್ನಲಾಗಿತ್ತು. ಇದೀಗ ಸ್ವತ: ಜ್ಯೋತಿ ತಮ್ಮ ನಡುವಿನ ಸಂಬಂಧವನ್ನು ಕನ್ಫರ್ಮ್‌ ಮಾಡಿದ್ದಾರೆ.

ಸುಕು ಪೂರ್ವಜ್‌ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿರುವ ಜ್ಯೋತಿ ರೈ ತಮ್ಮಿಬ್ಬರ ಸಂಬಂಧವನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ. ಪೂರ್ವಜ್‌ ಜೊತೆ ಎಂಗೇಜ್‌ಮೆಂಟ್‌ ಆಗಿದೆ ಎಂದು ಜ್ಯೋತಿ ಬರೆದುಕೊಂಡಿದ್ದಾರೆ. ಆದರೆ ಜ್ಯೋತಿ ರೈ ಕುತ್ತಿಗೆಯಲ್ಲಿ ಕರಿಮಣಿ ಕಾಣಿಸುತ್ತಿದ್ದು ಈಗಾಗಲೇ ಅವರಿಗೆ ಮದುವೆ ಆಗಿದೆ. ಬಹುಶ: ಇದು ಹಳೆಯ ಫೋಟೋಗಳಿರಬಹುದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಮಡಿಕೇರಿಯಲ್ಲಿ ಹುಟ್ಟಿದ ಜ್ಯೋತಿ ರೈ ಪುತ್ತೂರಿನಲ್ಲಿ ಓದಿ ಬೆಳೆದರು. ಸದ್ಯ ಈಗ ಹೈದರಾಬಾದ್‌ನಲ್ಲೇ ಸೆಟ್ಲ್ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT