ರಜನಿಕಾಂತ್-ಐಶ್ವರ್ಯಾ-ಧನುಷ್ 
ಸಿನಿಮಾ ಸುದ್ದಿ

ರಜನಿ ಮಾತು ನಡೆಯಲಿಲ್ಲ: ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಧನುಷ್- ಐಶ್ವರ್ಯ ದಂಪತಿ

ದಕ್ಷಿಣ ಭಾರತ ಚಿತ್ರರಂಗದ ತಲೈವಾ ಎಂದೇ ಖ್ಯಾತರಾಗಿರುವ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಪತಿ ಧನುಷ್ ಅವರಿಂದ ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದಂಪತಿಗಳು ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಭಾರತ ಚಿತ್ರರಂಗದ ತಲೈವಾ ಎಂದೇ ಖ್ಯಾತರಾಗಿರುವ ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಪತಿ ಧನುಷ್ ಅವರಿಂದ ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದಂಪತಿಗಳು ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಐಶ್ವರ್ಯ ಮತ್ತು ಧನುಷ್ ಅವರು 2022ರ ಜನವರಿ 17ರಂದು ಪರಸ್ಪರ ಪ್ರತ್ಯೇಕತೆಯನ್ನು ಘೋಷಿಸಿದ್ದರು. ಆದರೆ ನಂತರ ಅವರು ತಮ್ಮ ಸಂಬಂಧಕ್ಕೆ ಮತ್ತೊಂದು ಅವಕಾಶವನ್ನು ನೀಡಬಹುದು ಎಂದು ವರದಿಗಳಿವೆ. ಆದರೆ ಇತ್ತೀಚೆಗಿನ ಸುದ್ದಿ ಏನೆಂದರೆ ಇಬ್ಬರೂ ಕಾನೂನುಬದ್ಧವಾಗಿ ಪರಸ್ಪರ ಪ್ರತ್ಯೇಕಗೊಳ್ಳಲು ನಿರ್ಧರಿಸಿದ್ದಾರೆ. ಚೆನ್ನೈನ ಕೌಟುಂಬಿಕ ನ್ಯಾಯಾಲಯದಲ್ಲಿ ದಂಪತಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಸೆಕ್ಷನ್ 13ಬಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಧನುಷ್-ಐಶ್ವರ್ಯ

ಧನುಷ್ ಮತ್ತು ಐಶ್ವರ್ಯ ಸೆಕ್ಷನ್ 13-ಬಿ ಅಡಿಯಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದರ ಅರ್ಥವೇನೆಂದರೆ, ಅವರು ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನವನ್ನು ಬಯಸುತ್ತಾರೆ. ಇಬ್ಬರ ಅರ್ಜಿಯ ವಿಚಾರಣೆ ಶೀಘ್ರದಲ್ಲೇ ನಡೆಯಲಿದೆ. 2022ರಲ್ಲಿ ಪ್ರತ್ಯೇಕತೆಯ ಘೋಷಣೆಯ ನಂತರ ಧನುಷ್ ಮತ್ತು ಐಶ್ವರ್ಯಾ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಆದಾಗ್ಯೂ, ಈ ಮಧ್ಯೆ, ಅವರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಅವರೊಂದಿಗೆ ಶಾಲೆಯ ಕಾರ್ಯಕ್ರಮಗಳಿಗೆ ಹಾಜರಾಗುತ್ತಿದ್ದರು.

18 ವರ್ಷಗಳ ದಾಂಪತ್ಯ ಜೀವನಕ್ಕೆ ಎಳ್ಳುನೀರು

ಧನುಷ್ ಮತ್ತು ಐಶ್ವರ್ಯಾ ಅವರ ದಾಂಪತ್ಯ ಜೀವನ 18 ವರ್ಷಗಳ ಮುಂದುವರೆದಿತ್ತು. ಈ ಜೋಡಿಯು 2004ರಲ್ಲಿ ವಿವಾಹವಾಗಿತ್ತು. ಆಗ ಧನುಷ್‌ಗೆ 21 ವರ್ಷ ಮತ್ತು ಐಶ್ವರ್ಯಾಗೆ 23 ವರ್ಷವಾಗಿತ್ತು. ಅಂದರೆ ಧನುಷ್ ಗಿಂತ ಐಶ್ವರ್ಯಾ ಎರಡು ವರ್ಷ ದೊಡ್ಡವಳು. ದಂಪತಿಗೆ ಯಾತ್ರಾ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಅಯೋಧ್ಯೆ ಟ್ರಸ್ಟ್ ಸಿಇಒ ಅಧಿಕಾರಗಳನ್ನು ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video