ನೈಟ್ ಕರ್ಫ್ಯೂ ಚಿತ್ರದಲ್ಲಿ ನಟಿ ಮಾಲಾಶ್ರೀ 
ಸಿನಿಮಾ ಸುದ್ದಿ

ಲೇಡಿ ಸೂಪರ್‌ಸ್ಟಾರ್ ಮಾಲಾಶ್ರೀ ಅಭಿನಯದ 'ನೈಟ್ ಕರ್ಫ್ಯೂ' ಈ ವಾರ ತೆರೆಗೆ

'ಕನ್ನಡ ಚಿತ್ರರಂಗದ ಲೇಡಿ ಸೂಪರ್‌ಸ್ಟಾರ್' ಎಂದೇ ಖ್ಯಾತರಾಗಿರುವ ಮಾಲಾಶ್ರೀ ಅವರು 'ನೈಟ್ ಕರ್ಫ್ಯೂ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಿದ್ಧರಾಗಿದ್ದಾರೆ. ಚಿತ್ರ ಈ ವಾರ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್-ಪ್ಯಾಕ್ಡ್ ಥ್ರಿಲ್ಲರ್ ಚಿತ್ರವು ಕನ್ನಡ-ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಮಾಲಾಶ್ರೀ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ ವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

'ಕನ್ನಡ ಚಿತ್ರರಂಗದ ಲೇಡಿ ಸೂಪರ್‌ಸ್ಟಾರ್' ಎಂದೇ ಖ್ಯಾತರಾಗಿರುವ ಮಾಲಾಶ್ರೀ ಅವರು 'ನೈಟ್ ಕರ್ಫ್ಯೂ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಿದ್ಧರಾಗಿದ್ದಾರೆ. ಚಿತ್ರ ಏಪ್ರಿಲ್ 12 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್-ಪ್ಯಾಕ್ಡ್ ಥ್ರಿಲ್ಲರ್ ಚಿತ್ರವು ಕನ್ನಡ-ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಮಾಲಾಶ್ರೀ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ ವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನೈಟ್ ಕರ್ಫ್ಯೂ ಚಿತ್ರವನ್ನು ರವೀಂದ್ರ ವಂಶಿ ನಿರ್ದೇಶಿಸಿದ್ದು, ಇದು ಅವರ ನಾಲ್ಕನೇ ಸಿನಿಮಾವಾಗಿದೆ. ಅವರು ಈ ಹಿಂದೆ ಪುಟಾಣಿ ಸಫಾರಿ ಮತ್ತು ವಾಸಂತಿ ನಲಿದಾಗ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಮುಂಬರುವ ನೈಟ್ ಕರ್ಫ್ಯೂ ಚಿತ್ರಕ್ಕೆ ನಿರ್ದೇಶನದೊಂದಿಗೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆದಿದ್ದಾರೆ. ನೈಜ ಘಟನೆಗಳಿಂದ ಪ್ರೇರಿತವಾಗಿರುವ ನೈಟ್ ಕರ್ಫ್ಯೂ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಸಂಭವಿಸುವ ಘಟನೆಗಳನ್ನು ಸಿನಿಮೀಯ ಶೈಲಿಯಲ್ಲಿ ಕಮರ್ಷಿಯಲ್ ಅಂಶಗಳೊಂದಿಗೆ ತೆರೆಮೇಲೆ ತರಲು ತಯಾರಿಸಲಾಗಿದೆ.

ಸ್ವರ್ಣಗಂಗಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಿಎಸ್ ಚಂದ್ರಶೇಖರ್ ನಿರ್ಮಿಸಿರುವ ಈ ಚಿತ್ರದಲ್ಲಿ ರಂಜನಿ ರಾಘವನ್ ಕೂಡ ನಟಿಸಿದ್ದಾರೆ. ಕಿರುತೆರೆಯಲ್ಲಿ ಹೆಸರುವಾಸಿಯಾಗಿರುವ ರಂಜನಿ ಈಗ ಬೆಳ್ಳಿತೆರೆಯತ್ತ ಗಮನ ಹರಿಸಲು ಸಿದ್ಧರಾಗಿದ್ದಾರೆ. ಚಿತ್ರದ ಇನ್ನುಳಿದ ತಾರಾಗಣದಲ್ಲಿ ಪ್ರಮೋದ್ ಶೆಟ್ಟಿ, ರಂಗಾಯಣ ರಘು, ಸಾಧು ಕೋಕಿಲ, ಮಂಜು ಪಾವಗಡ, ಸಹನಾ ಶ್ರೀ, ಅಶ್ವಿನ್ ರಮೇಶ್, ವರ್ಧನ್ ತೀರ್ಥಹಳ್ಳಿ, ಮಂಡ್ಯ ಸಿದ್ದು, ಸದಾನಂದ್, ಗಂಗರಾಜು, ನಿತಿನ್, ವಸಂತ್ ಕುಮಾರ್.ಎಸ್, ಬೇಬಿ ಮೌಲ್ಯ ಮಂಜುನಾಥ್, ರಜನಿ, ಶಿವರಾಜ್ ಶೆಟ್ಟಿ, ಮಹೇಶ್ ಎಂ ಮತ್ತು ಅಲ್ಸೂರು ರಾಜಕುಮಾರ್ ನಟಿಸಿದ್ದಾರೆ.

ನೈಟ್ ಕರ್ಫ್ಯೂ ಚಿತ್ರದಲ್ಲಿ ಯಾವುದೇ ಹಾಡುಗಳಿಲ್ಲ. ಎಂಎಸ್ ಮಾರುತಿಯವರ ಹಿನ್ನೆಲೆ ಸಂಗೀತವನ್ನು ಮಾತ್ರ ಒಳಗೊಂಡಿದೆ. ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣವಿರುವ ಈ ಚಿತ್ರವು ಜಾಗ್ವರ್ ಸಣ್ಣಪ್ಪ ಅವರ ಸಾಹಸ ಮತ್ತು ಸಿ ರವಿಚಂದ್ರ ಅವರ ಸಂಕಲನವನ್ನು ಒಳಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT