ನೈಟ್ ಕರ್ಫ್ಯೂ ಚಿತ್ರದಲ್ಲಿ ನಟಿ ಮಾಲಾಶ್ರೀ 
ಸಿನಿಮಾ ಸುದ್ದಿ

ಲೇಡಿ ಸೂಪರ್‌ಸ್ಟಾರ್ ಮಾಲಾಶ್ರೀ ಅಭಿನಯದ 'ನೈಟ್ ಕರ್ಫ್ಯೂ' ಈ ವಾರ ತೆರೆಗೆ

'ಕನ್ನಡ ಚಿತ್ರರಂಗದ ಲೇಡಿ ಸೂಪರ್‌ಸ್ಟಾರ್' ಎಂದೇ ಖ್ಯಾತರಾಗಿರುವ ಮಾಲಾಶ್ರೀ ಅವರು 'ನೈಟ್ ಕರ್ಫ್ಯೂ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಿದ್ಧರಾಗಿದ್ದಾರೆ. ಚಿತ್ರ ಈ ವಾರ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್-ಪ್ಯಾಕ್ಡ್ ಥ್ರಿಲ್ಲರ್ ಚಿತ್ರವು ಕನ್ನಡ-ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಮಾಲಾಶ್ರೀ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ ವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

'ಕನ್ನಡ ಚಿತ್ರರಂಗದ ಲೇಡಿ ಸೂಪರ್‌ಸ್ಟಾರ್' ಎಂದೇ ಖ್ಯಾತರಾಗಿರುವ ಮಾಲಾಶ್ರೀ ಅವರು 'ನೈಟ್ ಕರ್ಫ್ಯೂ' ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಿದ್ಧರಾಗಿದ್ದಾರೆ. ಚಿತ್ರ ಏಪ್ರಿಲ್ 12 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್-ಪ್ಯಾಕ್ಡ್ ಥ್ರಿಲ್ಲರ್ ಚಿತ್ರವು ಕನ್ನಡ-ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಮಾಲಾಶ್ರೀ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿದ ವೈದ್ಯೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನೈಟ್ ಕರ್ಫ್ಯೂ ಚಿತ್ರವನ್ನು ರವೀಂದ್ರ ವಂಶಿ ನಿರ್ದೇಶಿಸಿದ್ದು, ಇದು ಅವರ ನಾಲ್ಕನೇ ಸಿನಿಮಾವಾಗಿದೆ. ಅವರು ಈ ಹಿಂದೆ ಪುಟಾಣಿ ಸಫಾರಿ ಮತ್ತು ವಾಸಂತಿ ನಲಿದಾಗ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಮುಂಬರುವ ನೈಟ್ ಕರ್ಫ್ಯೂ ಚಿತ್ರಕ್ಕೆ ನಿರ್ದೇಶನದೊಂದಿಗೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆದಿದ್ದಾರೆ. ನೈಜ ಘಟನೆಗಳಿಂದ ಪ್ರೇರಿತವಾಗಿರುವ ನೈಟ್ ಕರ್ಫ್ಯೂ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಸಂಭವಿಸುವ ಘಟನೆಗಳನ್ನು ಸಿನಿಮೀಯ ಶೈಲಿಯಲ್ಲಿ ಕಮರ್ಷಿಯಲ್ ಅಂಶಗಳೊಂದಿಗೆ ತೆರೆಮೇಲೆ ತರಲು ತಯಾರಿಸಲಾಗಿದೆ.

ಸ್ವರ್ಣಗಂಗಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬಿಎಸ್ ಚಂದ್ರಶೇಖರ್ ನಿರ್ಮಿಸಿರುವ ಈ ಚಿತ್ರದಲ್ಲಿ ರಂಜನಿ ರಾಘವನ್ ಕೂಡ ನಟಿಸಿದ್ದಾರೆ. ಕಿರುತೆರೆಯಲ್ಲಿ ಹೆಸರುವಾಸಿಯಾಗಿರುವ ರಂಜನಿ ಈಗ ಬೆಳ್ಳಿತೆರೆಯತ್ತ ಗಮನ ಹರಿಸಲು ಸಿದ್ಧರಾಗಿದ್ದಾರೆ. ಚಿತ್ರದ ಇನ್ನುಳಿದ ತಾರಾಗಣದಲ್ಲಿ ಪ್ರಮೋದ್ ಶೆಟ್ಟಿ, ರಂಗಾಯಣ ರಘು, ಸಾಧು ಕೋಕಿಲ, ಮಂಜು ಪಾವಗಡ, ಸಹನಾ ಶ್ರೀ, ಅಶ್ವಿನ್ ರಮೇಶ್, ವರ್ಧನ್ ತೀರ್ಥಹಳ್ಳಿ, ಮಂಡ್ಯ ಸಿದ್ದು, ಸದಾನಂದ್, ಗಂಗರಾಜು, ನಿತಿನ್, ವಸಂತ್ ಕುಮಾರ್.ಎಸ್, ಬೇಬಿ ಮೌಲ್ಯ ಮಂಜುನಾಥ್, ರಜನಿ, ಶಿವರಾಜ್ ಶೆಟ್ಟಿ, ಮಹೇಶ್ ಎಂ ಮತ್ತು ಅಲ್ಸೂರು ರಾಜಕುಮಾರ್ ನಟಿಸಿದ್ದಾರೆ.

ನೈಟ್ ಕರ್ಫ್ಯೂ ಚಿತ್ರದಲ್ಲಿ ಯಾವುದೇ ಹಾಡುಗಳಿಲ್ಲ. ಎಂಎಸ್ ಮಾರುತಿಯವರ ಹಿನ್ನೆಲೆ ಸಂಗೀತವನ್ನು ಮಾತ್ರ ಒಳಗೊಂಡಿದೆ. ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣವಿರುವ ಈ ಚಿತ್ರವು ಜಾಗ್ವರ್ ಸಣ್ಣಪ್ಪ ಅವರ ಸಾಹಸ ಮತ್ತು ಸಿ ರವಿಚಂದ್ರ ಅವರ ಸಂಕಲನವನ್ನು ಒಳಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT