ರಚಿತಾ ರಾಮ್ - VK-29 ಪೋಸ್ಟರ್ - ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಜಡೇಶಾ ಕೆ ಹಂಪಿ ನಿರ್ದೇಶನದ 'VK-29' ಚಿತ್ರದಲ್ಲಿ ದುನಿಯಾ ವಿಜಯ್‌ಗೆ ನಟಿ ರಚಿತಾ ರಾಮ್ ಜೋಡಿ?

ಜಂಟಲ್‌ಮನ್ ಮತ್ತು ಗುರು ಶಿಷ್ಯರು ಚಿತ್ರಗಳ ನಿರ್ದೇಶಕ ಮತ್ತು ದರ್ಶನ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಕಾಟೇರ ಸಿನಿಮಾದ ಬರಹಗಾರರಾಗಿರುವ ಜಡೇಶಾ ಕೆ ಹಂಪಿ ಇದೀಗ ನಟ ದುನಿಯಾ ವಿಜಯ್ ಅವರೊಂದಿಗೆ ತಮ್ಮ ಮುಂದಿನ ಯೋಜನೆಗೆ ತಯಾರಿ ನಡೆಸುತ್ತಿದ್ದಾರೆ. ನಟ ವಿಜಯ್‌ಗೆ ಜೋಡಿಯಾಗಿ ನಟಿ ರಚಿತಾ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಜಂಟಲ್‌ಮನ್ ಮತ್ತು ಗುರು ಶಿಷ್ಯರು ಚಿತ್ರಗಳ ನಿರ್ದೇಶಕ ಮತ್ತು ದರ್ಶನ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಕಾಟೇರ ಸಿನಿಮಾದ ಬರಹಗಾರರಾಗಿರುವ ಜಡೇಶಾ ಕೆ ಹಂಪಿ ಇದೀಗ ನಟ ದುನಿಯಾ ವಿಜಯ್ ಅವರೊಂದಿಗೆ ತಮ್ಮ ಮುಂದಿನ ಯೋಜನೆಗೆ ತಯಾರಿ ನಡೆಸುತ್ತಿದ್ದಾರೆ. ಆಕ್ಷನ್-ಪ್ಯಾಕ್ಡ್ ಸಿನಿಮಾ ಇದಾಗಿದ್ದು, ಫ್ಯಾಮಿಲಿ ಎಂಟರ್‌ಟೈನರ್ ಎಂದು ಹೇಳಲಾಗಿದೆ. ನಟ ವಿಜಯ್‌ಗೆ ಜೋಡಿಯಾಗಿ ನಟಿ ರಚಿತಾ ರಾಮ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಸದ್ಯ ಸಂಜು ವೆಡ್ಸ್ ಗೀತಾ 2 ಚಿತ್ರೀಕರಣದಲ್ಲಿರುವ ನಟಿಯೊಂದಿಗೆ ಚರ್ಚೆಗಳು ನಡೆಯುತ್ತಿವೆ. ರಚಿತಾ ರಾಮ್ ಅವರು ಪ್ರೀತಂ ಗುಬ್ಬಿ ನಿರ್ದೇಶನದ 'ಜಾನಿ ಜಾನಿ ಯೆಸ್ ಪಾಪ' (2018) ನಲ್ಲಿ ವಿಜಯ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದರು. ಇದೀಗ ಎಲ್ಲವೂ ಅಂದುಕೊಂಡಂತೆ ಆದರೆ, ವಿಜಯ್ ಮತ್ತು ರಚಿತಾ ಜೋಡಿ ಎರಡನೇ ಬಾರಿಗೆ ಮೋಡಿ ಮಾಡಲು ಮುಂದಾಗಲಿದೆ.

ತಾತ್ಕಾಲಿಕವಾಗಿ 'VK-29' ಎಂಬ ಶೀರ್ಷಿಕೆಯನ್ನು ಇಡಲಾಗಿದ್ದು, ಕುತೂಹಲಕಾರಿ ಪೋಸ್ಟರ್‌ನೊಂದಿಗೆ ಅಧಿಕೃತವಾಗಿ ಚಿತ್ರವನ್ನು ಘೋಷಿಸಲಾಗಿದೆ. ಸಾರಥಿ ನಿರ್ಮಾಪಕ ಕೆವಿ ಸತ್ಯ ಪ್ರಕಾಶ್ ಅವರು ಈ ಚಿತ್ರದ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಅವರು ತಮ್ಮ ಮಗ ಸೂರಜ್ ಜೊತೆಗೆ ಈ ಯೋಜನೆಗೆ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಚಿತ್ರದ ಮುಹೂರ್ತಕ್ಕೆ ಚಿತ್ರತಂಡ ಸಜ್ಜಾಗಿದ್ದು, ಸದ್ಯದಲ್ಲೇ ನಡೆಯುವ ನಿರೀಕ್ಷೆ ಇದೆ.

ನಟಿ ರಚಿತಾ ರಾಮ್ ಚಿತ್ರತಂಡ ಸೇರಿರುವ ಕುರಿತು ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ ಎಂದು ನಿರೀಕ್ಷಿಸಲಾಗಿದೆ. 'VK-29' ಚಿತ್ರದಲ್ಲಿ ಮೂಲಕ ದುನಿಯಾ ವಿಜಯ್ ಅವರ ಮೋನಿಕಾ ಮಹತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಸ್ಯಾಂಡಲ್‌ವುಡ್‌ಗೆ ಮೋನಿಕಾ ಎಂಟ್ರಿ ಕೊಡಲಿದ್ದಾರೆ. ಚಿತ್ರದ ತಾರಾಗಣ ಮತ್ತು ತಂಡದ ಬಗ್ಗೆ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT