ಮಾನ್ವಿತಾ ಕಾಮತ್ 
ಸಿನಿಮಾ ಸುದ್ದಿ

ಮೇ 1ರಂದು ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ವಿವಾಹ!

ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಮಾನ್ವಿತಾ ಕಾಮತ್ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದ್ದು ಮೇ1 ರಂದು ಅವರು ಸಪ್ತಪದಿ ತುಳಿಯಲಿದ್ದಾರೆ.

ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಮಾನ್ವಿತಾ ಕಾಮತ್ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದ್ದು ಮೇ1 ರಂದು ಅವರು ಸಪ್ತಪದಿ ತುಳಿಯಲಿದ್ದಾರೆ.

ಸಂಗೀತ ನಿರ್ದೇಶಕ ಅರುಣ್ ಕುಮಾರ್ ಅವರು ಮಾನ್ವಿತಾ ಜೊತೆಗೆ ವಿವಾಹ ನಡೆಯಲಿದೆ. ನಟಿ ಮಾನ್ವಿತಾ ಮತ್ತು ಅರುಣ್ ಕುಮಾರ್ ಅವರ ವಿವಾಹವು ಮೇ 1ರಂದು ಮಂಗಳೂರಿನಲ್ಲಿ ಜರುಗಲಿದೆ. ಹಳದಿ ಶಾಸ್ತ್ರವು ಏಪ್ರಿಲ್‌ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರವು ಏಪ್ರಿಲ್ 30ರಂದು ನಡೆಯಲಿದೆ. ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಮಾನ್ವಿತಾ ಮತ್ತು ಅರುಣ್ ದಾಂಪತ್ಯ ಬದುಕಿಗೆ ಕಾಲಿಡಲಿದ್ದಾರೆ. ಮದುವೆ ಕುರಿತಾದ ಡಿಜಿಟಲ್ ಆಮಂತ್ರಣ ಪತ್ರಿಕೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಆರ್.ಜೆಯಾಗಿ ವೃತ್ತಿಯನ್ನು ಆರಂಭಿಸಿದ್ದ ಮಾನ್ವಿತಾ ಆನಂತರ ಸಿನಿಮಾ ರಂಗಕ್ಕೆ ಬಂದರು. ಸೂರಿ ನಿರ್ದೇಶನದ ಕೆಂಡ ಸಂಪಿಗೆ ಸಿನಿಮಾ ಅವರಿಗೆ ಹೆಸರು ತಂದುಕೊಟ್ಟಿತು. ಆನಂತರ ಟಗರು ಸಿನಿಮಾದ ಮೂಲಕ ಸಾಕಷ್ಟು ಜನಕ್ಕೆ ಪರಿಚಯವಾದರು. ಅಲ್ಲಿಂದ ಟಗರು ಪುಟ್ಟಿ ಎಂದೇ ಫೇಮಸ್ ಆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT