ಮಾನ್ವಿತಾ ಕಾಮತ್ 
ಸಿನಿಮಾ ಸುದ್ದಿ

ಮೇ 1ರಂದು ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ವಿವಾಹ!

ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಮಾನ್ವಿತಾ ಕಾಮತ್ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದ್ದು ಮೇ1 ರಂದು ಅವರು ಸಪ್ತಪದಿ ತುಳಿಯಲಿದ್ದಾರೆ.

ಸ್ಯಾಂಡಲ್‌ವುಡ್‌ನ 'ಕೆಂಡಸಂಪಿಗೆ' ನಟಿ ಮಾನ್ವಿತಾ ಕಾಮತ್ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಮಾನ್ವಿತಾ ಕಾಮತ್ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದ್ದು ಮೇ1 ರಂದು ಅವರು ಸಪ್ತಪದಿ ತುಳಿಯಲಿದ್ದಾರೆ.

ಸಂಗೀತ ನಿರ್ದೇಶಕ ಅರುಣ್ ಕುಮಾರ್ ಅವರು ಮಾನ್ವಿತಾ ಜೊತೆಗೆ ವಿವಾಹ ನಡೆಯಲಿದೆ. ನಟಿ ಮಾನ್ವಿತಾ ಮತ್ತು ಅರುಣ್ ಕುಮಾರ್ ಅವರ ವಿವಾಹವು ಮೇ 1ರಂದು ಮಂಗಳೂರಿನಲ್ಲಿ ಜರುಗಲಿದೆ. ಹಳದಿ ಶಾಸ್ತ್ರವು ಏಪ್ರಿಲ್‌ 29ರಂದು ನಡೆಯಲಿದೆ ಮತ್ತು ಸಂಗೀತ್ ಶಾಸ್ತ್ರವು ಏಪ್ರಿಲ್ 30ರಂದು ನಡೆಯಲಿದೆ. ಕೊಂಕಣಿ ಸಾಂಪ್ರದಾಯದಂತೆ ಮೇ 1ರಂದು ಮಾನ್ವಿತಾ ಮತ್ತು ಅರುಣ್ ದಾಂಪತ್ಯ ಬದುಕಿಗೆ ಕಾಲಿಡಲಿದ್ದಾರೆ. ಮದುವೆ ಕುರಿತಾದ ಡಿಜಿಟಲ್ ಆಮಂತ್ರಣ ಪತ್ರಿಕೆಯನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಆರ್.ಜೆಯಾಗಿ ವೃತ್ತಿಯನ್ನು ಆರಂಭಿಸಿದ್ದ ಮಾನ್ವಿತಾ ಆನಂತರ ಸಿನಿಮಾ ರಂಗಕ್ಕೆ ಬಂದರು. ಸೂರಿ ನಿರ್ದೇಶನದ ಕೆಂಡ ಸಂಪಿಗೆ ಸಿನಿಮಾ ಅವರಿಗೆ ಹೆಸರು ತಂದುಕೊಟ್ಟಿತು. ಆನಂತರ ಟಗರು ಸಿನಿಮಾದ ಮೂಲಕ ಸಾಕಷ್ಟು ಜನಕ್ಕೆ ಪರಿಚಯವಾದರು. ಅಲ್ಲಿಂದ ಟಗರು ಪುಟ್ಟಿ ಎಂದೇ ಫೇಮಸ್ ಆದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT