ನಿರ್ಮಾಪಕ ಸೌಂದರ್ಯ ಜಗದೀಶ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವು, ಆತ್ಮಹತ್ಯೆ ಶಂಕೆ!

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನರಾಗಿದ್ದು, ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನರಾಗಿದ್ದು, ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಇಂದು ಭಾನುವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನ ತಮ್ಮ ನಿವಾಸದಲ್ಲಿ ಸಾವಿಗೀಡಾಗಿದ್ದು, ತೀವ್ರ ಆರ್ಥಿಕ ಸಮಸ್ಯೆಯಿಂದ ಇತ್ತೀಚೆಗೆ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಅವರ ಮನೆಯನ್ನು ಬ್ಯಾಂಕ್ ಅಧಿಕಾರಿಗಳು ಸೀಜ್ ಮಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಸದ್ಯ ಅವರ ಮೃತದೇಹವನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿಡಲಾಗಿದೆ.

ಇತ್ತೀಚೆಗೆ ಅವರ ಪುತ್ರಿ ಸೌಂದರ್ಯ ವಿವಾಹ ನೆರವೇರಿತ್ತು. ಕನ್ನಡದಲ್ಲಿ ಅವರು ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು, ಮಸ್ತ್ ಮಜಾ ಮಾಡಿ ಇತ್ಯಾದಿ ಚಿತ್ರಗಳನ್ನು ನಿರ್ಮಿಸಿದ್ದರು. ತಮ್ಮ ಪುತ್ರನನ್ನು ಸ್ಯಾಂಡಲ್ ವುಡ್ ನಲ್ಲಿ ಉತ್ತಮ ನಟನಾಗಿ ಮಾಡಬೇಕೆಂಬ ಪ್ರಯತ್ನ ಯಶಸ್ಸು ಕಂಡಿರಲಿಲ್ಲ.

ಇತ್ತೀಚೆಗೆ ರಾಜಾಜಿನಗರದಲ್ಲಿರುವ ಅವರ ಒಡೆತನದ ಜೆಟ್ ಲ್ಯಾಗ್ ಪಬ್ ನಲ್ಲಿ ನಟ ದರ್ಶನ್ ನಟನೆಯ ಯಶಸ್ಸು ಕಂಡ ಕಾಟೇರ ಚಿತ್ರತಂಡ ಅವಧಿ ಮೀರಿ ಪಾರ್ಟಿ ನಡೆಸಿ ಪೊಲೀಸರಿಂದ ನೊಟೀಸ್ ಪಡೆದಿತ್ತು. ಇತ್ತೀಚೆಗೆ ಸೌಂದರ್ಯ ಜಗದೀಶ್ ಅವರು ಸಾಕಷ್ಟು ವಿವಾದಗಳಿಗೆ ಸಿಲುಕಿದ್ದರು.

ಪತ್ನಿ ರೇಖಾ ಜಗದೀಶ್ , ಮಗ ನಟ ಸ್ನೇಹಿತ್, ಓರ್ವ ಪುತ್ರಿ ಸೇರಿ ಅಪಾರ ಬಂಧು ಬಳಗದವರನ್ನು, ಚಿತ್ರರಂಗದ ಸ್ನೇಹಿತರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT