ನಿರ್ಮಾಪಕ ಸೌಂದರ್ಯ ಜಗದೀಶ್(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವು, ಆತ್ಮಹತ್ಯೆ ಶಂಕೆ!

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನರಾಗಿದ್ದು, ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ನಿಧನರಾಗಿದ್ದು, ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ.

ಇಂದು ಭಾನುವಾರ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ನ ತಮ್ಮ ನಿವಾಸದಲ್ಲಿ ಸಾವಿಗೀಡಾಗಿದ್ದು, ತೀವ್ರ ಆರ್ಥಿಕ ಸಮಸ್ಯೆಯಿಂದ ಇತ್ತೀಚೆಗೆ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಅವರ ಮನೆಯನ್ನು ಬ್ಯಾಂಕ್ ಅಧಿಕಾರಿಗಳು ಸೀಜ್ ಮಾಡಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.

ಸದ್ಯ ಅವರ ಮೃತದೇಹವನ್ನು ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿಡಲಾಗಿದೆ.

ಇತ್ತೀಚೆಗೆ ಅವರ ಪುತ್ರಿ ಸೌಂದರ್ಯ ವಿವಾಹ ನೆರವೇರಿತ್ತು. ಕನ್ನಡದಲ್ಲಿ ಅವರು ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು, ಮಸ್ತ್ ಮಜಾ ಮಾಡಿ ಇತ್ಯಾದಿ ಚಿತ್ರಗಳನ್ನು ನಿರ್ಮಿಸಿದ್ದರು. ತಮ್ಮ ಪುತ್ರನನ್ನು ಸ್ಯಾಂಡಲ್ ವುಡ್ ನಲ್ಲಿ ಉತ್ತಮ ನಟನಾಗಿ ಮಾಡಬೇಕೆಂಬ ಪ್ರಯತ್ನ ಯಶಸ್ಸು ಕಂಡಿರಲಿಲ್ಲ.

ಇತ್ತೀಚೆಗೆ ರಾಜಾಜಿನಗರದಲ್ಲಿರುವ ಅವರ ಒಡೆತನದ ಜೆಟ್ ಲ್ಯಾಗ್ ಪಬ್ ನಲ್ಲಿ ನಟ ದರ್ಶನ್ ನಟನೆಯ ಯಶಸ್ಸು ಕಂಡ ಕಾಟೇರ ಚಿತ್ರತಂಡ ಅವಧಿ ಮೀರಿ ಪಾರ್ಟಿ ನಡೆಸಿ ಪೊಲೀಸರಿಂದ ನೊಟೀಸ್ ಪಡೆದಿತ್ತು. ಇತ್ತೀಚೆಗೆ ಸೌಂದರ್ಯ ಜಗದೀಶ್ ಅವರು ಸಾಕಷ್ಟು ವಿವಾದಗಳಿಗೆ ಸಿಲುಕಿದ್ದರು.

ಪತ್ನಿ ರೇಖಾ ಜಗದೀಶ್ , ಮಗ ನಟ ಸ್ನೇಹಿತ್, ಓರ್ವ ಪುತ್ರಿ ಸೇರಿ ಅಪಾರ ಬಂಧು ಬಳಗದವರನ್ನು, ಚಿತ್ರರಂಗದ ಸ್ನೇಹಿತರನ್ನು ಅಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ S*x, ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT