ಸಮರ್ಜಿತ್ ಲಂಕೇಶ್ 
ಸಿನಿಮಾ ಸುದ್ದಿ

'ಗೌರಿ' ಮೂಲಕ ನಟನೆ ಜೊತೆ ಗಾಯಕರಾಗಿಯೂ ಅದೃಷ್ಟ ಪರೀಕ್ಷೆಗಿಳಿದ ಸಮರ್ಜಿತ್ ಲಂಕೇಶ್!

ತಮ್ಮ ತಂದೆ ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದ 'ಗೌರಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್ ಲಂಕೇಶ್ ನಟನಾಗಿ ಪದಾರ್ಪಣೆ ಮಾಡುತ್ತಿರುವುದಲ್ಲದೆ, ತಮ್ಮ ಮೊದಲ ಚಿತ್ರದಲ್ಲೇ ತಮ್ಮ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ.

ತಮ್ಮ ತಂದೆ ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದ 'ಗೌರಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್ ಲಂಕೇಶ್ ನಟನಾಗಿ ಪದಾರ್ಪಣೆ ಮಾಡುತ್ತಿರುವುದಲ್ಲದೆ, ತಮ್ಮ ಮೊದಲ ಚಿತ್ರದಲ್ಲೇ ತಮ್ಮ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ. ಕುತೂಹಲಕಾರಿಯಾಗಿ, ಇಂದ್ರಜಿತ್ ಅವರೇ ನಿರ್ದೇಶಿಸಿದ್ದ ನಟ ಉಪೇಂದ್ರ ಮತ್ತು ದೀಪಿಕಾ ಪಡುಕೋಣೆ ನಟನೆಯ 2006ರಲ್ಲಿ ಬಿಡುಗಡೆಯಾದ 'ಐಶ್ವರ್ಯ' ಸಿನಿಮಾದ ಜನಪ್ರಿಯ ಗೀತೆ 'ಹುಡುಗಿ ಹುಡುಗಿ ನಿನ್ನ ಕಂಡಾಗ' ಹಾಡಿನ ಮರುಸೃಷ್ಟಿಗೆ ತಮ್ಮ ಧ್ವನಿ ನೀಡಿದ್ದಾರೆ.

ಮೂಲತಃ ರಾಜೇಶ್ ರಾಮನಾಥ್ ಸಂಗೀತ ಸಂಯೋಜನೆಯೊಂದಿಗೆ ಕುನಾಲ್ ಗಾಂಜಾವಾಲಾ ಹಾಡಿರುವ ಈ ಟ್ರ್ಯಾಕ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಭಾರಿ ಟ್ರೆಂಡ್ ಅನ್ನು ಹುಟ್ಟುಹಾಕಿತು ಮತ್ತು ಇದೀಗ ಗೌರಿ ಚಿತ್ರದಲ್ಲಿ ಸಮರ್ಜಿತ್ ಅವರು ಈ ಹಾಡಿಗೆ ಧ್ವನಿ ನೀಡಿದ್ದು, ಮತ್ತೊಮ್ಮೆ ಮೋಡಿ ಮಾಡಲು ಸಿದ್ಧವಾಗಿದೆ. ಚಿತ್ರಕ್ಕೆ ಜಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬರ್ಗಿ ಮತ್ತು ಹೊಸಬರು ಸಂಗೀತ ಸಂಯೋಜಿಸಿದ್ದು, ಜಾವೇದ್ ಅಲಿ, ಕೈಲಾಶ್ ಖೇರ್ ಮತ್ತು ಅನನ್ಯಾ ಭಟ್ ಅವರಂತಹ ಪ್ರಸಿದ್ಧ ಗಾಯಕರಿಂದ ಹಾಡುಗಳಿಗೆ ಧ್ವನಿ ನೀಡಿಸಿರುವ ಇಂದ್ರಜಿತ್ ಲಂಕೇಶ್, ಗೌರಿ ಸಿನಿಮಾಗಾಗಿ ಸ್ಮರಣೀಯ ಆಲ್ಬಂ ರಚಿಸುವ ಗುರಿಯನ್ನು ಹೊಂದಿದ್ದಾರೆ.

ನಿಜ ಜೀವನದ ಘಟನೆಗಳನ್ನು ಆಧರಿಸಿದ ಗೌರಿಯಲ್ಲಿ ಸಮರ್ಜಿತ್ ಪಾತ್ರವನ್ನು ಹೊರತುಪಡಿಸಿ, ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದ ಸಾನ್ಯಾ ಅಯ್ಯರ್‌ ಅವರು ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇದಲ್ಲದೆ, ಮಿಸ್ ಟೀನ್ ಯೂನಿವರ್ಸ್ ಆದ ಸ್ವೀಝಲ್ ಮತ್ತು ಚಂದು ಗೌಡ ನಟಿಸಿದ್ದಾರೆ. ಚಿತ್ರಕ್ಕೆ ರವಿ ವರ್ಮಾ ಅವರ ಸಾಹಸ ಮತ್ತು ಎಜೆ ಶೆಟ್ಟಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

SCROLL FOR NEXT