ಸಮರ್ಜಿತ್ ಲಂಕೇಶ್ 
ಸಿನಿಮಾ ಸುದ್ದಿ

'ಗೌರಿ' ಮೂಲಕ ನಟನೆ ಜೊತೆ ಗಾಯಕರಾಗಿಯೂ ಅದೃಷ್ಟ ಪರೀಕ್ಷೆಗಿಳಿದ ಸಮರ್ಜಿತ್ ಲಂಕೇಶ್!

ತಮ್ಮ ತಂದೆ ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದ 'ಗೌರಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್ ಲಂಕೇಶ್ ನಟನಾಗಿ ಪದಾರ್ಪಣೆ ಮಾಡುತ್ತಿರುವುದಲ್ಲದೆ, ತಮ್ಮ ಮೊದಲ ಚಿತ್ರದಲ್ಲೇ ತಮ್ಮ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ.

ತಮ್ಮ ತಂದೆ ಇಂದ್ರಜಿತ್ ಲಂಕೇಶ್ ಅವರ ನಿರ್ದೇಶನದ 'ಗೌರಿ' ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಸಮರ್ಜಿತ್ ಲಂಕೇಶ್ ನಟನಾಗಿ ಪದಾರ್ಪಣೆ ಮಾಡುತ್ತಿರುವುದಲ್ಲದೆ, ತಮ್ಮ ಮೊದಲ ಚಿತ್ರದಲ್ಲೇ ತಮ್ಮ ಗಾಯನ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ. ಕುತೂಹಲಕಾರಿಯಾಗಿ, ಇಂದ್ರಜಿತ್ ಅವರೇ ನಿರ್ದೇಶಿಸಿದ್ದ ನಟ ಉಪೇಂದ್ರ ಮತ್ತು ದೀಪಿಕಾ ಪಡುಕೋಣೆ ನಟನೆಯ 2006ರಲ್ಲಿ ಬಿಡುಗಡೆಯಾದ 'ಐಶ್ವರ್ಯ' ಸಿನಿಮಾದ ಜನಪ್ರಿಯ ಗೀತೆ 'ಹುಡುಗಿ ಹುಡುಗಿ ನಿನ್ನ ಕಂಡಾಗ' ಹಾಡಿನ ಮರುಸೃಷ್ಟಿಗೆ ತಮ್ಮ ಧ್ವನಿ ನೀಡಿದ್ದಾರೆ.

ಮೂಲತಃ ರಾಜೇಶ್ ರಾಮನಾಥ್ ಸಂಗೀತ ಸಂಯೋಜನೆಯೊಂದಿಗೆ ಕುನಾಲ್ ಗಾಂಜಾವಾಲಾ ಹಾಡಿರುವ ಈ ಟ್ರ್ಯಾಕ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಭಾರಿ ಟ್ರೆಂಡ್ ಅನ್ನು ಹುಟ್ಟುಹಾಕಿತು ಮತ್ತು ಇದೀಗ ಗೌರಿ ಚಿತ್ರದಲ್ಲಿ ಸಮರ್ಜಿತ್ ಅವರು ಈ ಹಾಡಿಗೆ ಧ್ವನಿ ನೀಡಿದ್ದು, ಮತ್ತೊಮ್ಮೆ ಮೋಡಿ ಮಾಡಲು ಸಿದ್ಧವಾಗಿದೆ. ಚಿತ್ರಕ್ಕೆ ಜಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬರ್ಗಿ ಮತ್ತು ಹೊಸಬರು ಸಂಗೀತ ಸಂಯೋಜಿಸಿದ್ದು, ಜಾವೇದ್ ಅಲಿ, ಕೈಲಾಶ್ ಖೇರ್ ಮತ್ತು ಅನನ್ಯಾ ಭಟ್ ಅವರಂತಹ ಪ್ರಸಿದ್ಧ ಗಾಯಕರಿಂದ ಹಾಡುಗಳಿಗೆ ಧ್ವನಿ ನೀಡಿಸಿರುವ ಇಂದ್ರಜಿತ್ ಲಂಕೇಶ್, ಗೌರಿ ಸಿನಿಮಾಗಾಗಿ ಸ್ಮರಣೀಯ ಆಲ್ಬಂ ರಚಿಸುವ ಗುರಿಯನ್ನು ಹೊಂದಿದ್ದಾರೆ.

ನಿಜ ಜೀವನದ ಘಟನೆಗಳನ್ನು ಆಧರಿಸಿದ ಗೌರಿಯಲ್ಲಿ ಸಮರ್ಜಿತ್ ಪಾತ್ರವನ್ನು ಹೊರತುಪಡಿಸಿ, ಕಿರುತೆರೆಯಲ್ಲಿ ಖ್ಯಾತಿ ಗಳಿಸಿದ್ದ ಸಾನ್ಯಾ ಅಯ್ಯರ್‌ ಅವರು ನಾಯಕಿಯಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಇದಲ್ಲದೆ, ಮಿಸ್ ಟೀನ್ ಯೂನಿವರ್ಸ್ ಆದ ಸ್ವೀಝಲ್ ಮತ್ತು ಚಂದು ಗೌಡ ನಟಿಸಿದ್ದಾರೆ. ಚಿತ್ರಕ್ಕೆ ರವಿ ವರ್ಮಾ ಅವರ ಸಾಹಸ ಮತ್ತು ಎಜೆ ಶೆಟ್ಟಿ ಅವರ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ