ಶ್ರೀಮುರಳಿ ಅಭಿನಯದ ರಥಾವರ ಚಿತ್ರದ ಮೂಲಕ ಖ್ಯಾತಿ ಪಡೆದ ಆನೆ ಪಟಾಕಿ ಮತ್ತು ತಾರಕಾಸುರ ಚಿತ್ರಗಳ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಇದೀಗ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಅವರ ಹೊಸ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
'ನಾನು ನನ್ನ ಮೊದಲ ಹಿಂದಿ ಚಿತ್ರವಾದ ಕಿಶೋರ್ ಅಭಿನಯದ 'ರೆಡ್ ಕಾಲರ್' ಸಿನಿಮಾದ ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದೇನೆ. ಅದೀಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಗುರುದತ್ತ ಗಾಣಿಗ ನಿರ್ದೇಶನದ ಕರಾವಳಿ ಚಿತ್ರಕ್ಕೆ ಬರಹಗಾರನಾಗಿ ಕೆಲಸ ಮಾಡಿರುವ ನಾನು ನನ್ನ ಮುಂದಿನ ಯೋಜನೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದೇನೆ' ಎಂದು ನಿರ್ದೇಶಕರು ಹೇಳುತ್ತಾರೆ.
ವಿಶೇಷವಾಗಿ ಕ್ಲಾಸಿಕ್ ಕಂಟೆಂಟ್ಗಳ ಮೂಲಕ ಹೆಸರುವಾಸಿಯಾಗಿರುವ ಚಂದ್ರಶೇಖರ್ ಇದೀಗ ಫ್ಯಾಮಿಲಿ ಎಂಟರ್ಟೈನರ್ ಸಿನಿಮಾ ನಿರ್ದೇಶನದತ್ತ ಹೊರಳಿದ್ದಾರೆ. ಈ ಚಿತ್ರಕಥೆಯಲ್ಲಿ ಬದಲಾವಣೆಯನ್ನು ತಂದಿರುವುದಾಗಿ ಅವರು ಹೇಳುತ್ತಾರೆ. 'ಈಗಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಈ ಕಂಟೆಂಟ್ ಅನ್ನು ವಿಶೇಷವಾಗಿ ರಚಿಸಲಾಗಿದೆ ಮತ್ತು ಪೃಥ್ವಿ ಅಂಬಾರ್ ಈ ಕಥೆಗೆ ಉತ್ತಮವಾಗಿ ಹೊಂದಿಕೊಳ್ಳುತ್ತಾರೆ' ಎನ್ನುತ್ತಾರೆ.
ಇನ್ನೂ ಹೆಸರಿಡದ ಈ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಶಿಕ್ಷಣ ತಜ್ಞ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಿಸಲಿದ್ದಾರೆ. ಚಿತ್ರಕ್ಕೆ ಸಚಿನ್ ಬಸ್ರೂರ್ ಸಂಗೀತ ಸಂಯೋಜಿಸಲಿದ್ದು, ಚಿತ್ರದ ಉಳಿದ ತಾರಾಗಣ ಮತ್ತು ತಂತ್ರಜ್ಞರನ್ನು ಅಂತಿಮಗೊಳಿಸಲಾಗುತ್ತಿದೆ.
ಈಮಧ್ಯೆ, ಮತ್ಸ್ಯಗಂಧ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಪೃಥ್ವಿ ಅಂಬಾರ್ ಅವರ ನಟನೆಯ 'ಭುವನಂ ಗಗನಂ' ಮತ್ತು 'ಲೈಫ್ ಈಸ್ ಬ್ಯೂಟಿಫುಲ್' ಚಿತ್ರಗಳು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ. ಮಜೈ ಪುಡಿಕಥಾ ಮಾನಿತನ್ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೂ ನಟ ಪದಾರ್ಪಣೆ ಮಾಡುತ್ತಿದ್ದಾರೆ.