ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

ನಟ ದ್ವಾರಕೀಶ್ ವಿಧಿವಶ: ಕಾಫಿ ಕುಡಿದು ಮಲಗಿದವರು ಮೇಲೇಳಲೇ ಇಲ್ಲ; ಕುಟುಂಬಸ್ಥರ ಮಾಹಿತಿ

ಕನ್ನಡ ಚಿತರಂಗದ ಹಿರಿಯ ನಟ ದ್ವಾರಕೀಶ್ ಅವರು ಮಂಗಳವಾರ ನಿಧನ ಹೊಂದಿದ್ದು, ದ್ವಾರಕೀಶ್ ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ಬೆಂಗಳೂರು: ಕನ್ನಡ ಚಿತರಂಗದ ಹಿರಿಯ ನಟ ದ್ವಾರಕೀಶ್ ಅವರು ಮಂಗಳವಾರ ನಿಧನ ಹೊಂದಿದ್ದು, ದ್ವಾರಕೀಶ್ ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ದ್ವಾರಕೀಶ್ ಅವರ ನಿಧನ ವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ದ್ವಾರಕೀಶ್ ಅವರ ನಿಧನದ ಕುರಿತು ಈ ಹಿಂದೆ ವದಂತಿಗಳು ಹಬ್ಬಿದ್ದವು. ಈ ಬಾರಿಯೂ ಸಾವಿನ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಕುಟುಂಬಸ್ಥರೇ ಸಾವಿನ ಕುರಿತು ಸ್ಪಷ್ಟನೆ ನೀಡಿದ್ದಾರೆ.

ರಾತ್ರಿ ಲೂಸ್ ಮೋಷನ್ ಆಗಿತ್ತು. ರಾತ್ರಿಯಿಡೀ ನಿದ್ರೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ನಿದ್ರಿಸಿದ್ದರು. ಆದರೆ, ಮಲಗಿದವರು ಮೇಲೆ ಏಳಲೇ ಇಲ್ಲ. ಅವರಿಗೆ ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಅವಕ ಪುತ್ರ ಯೋಗೇಶ್ ದ್ವಾರಕೀಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT