ತೇಜಸ್ವಿನಿ ಶರ್ಮಾ - ವಿಐಪಿ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

'ವಿಐಪಿ' ಕಮರ್ಷಿಯಲ್ ಸಿನಿಮಾದ ಭಾಗವಾಗಿರುವುದಕ್ಕೆ ಸಂತೋಷವಾಗಿದೆ: ತೇಜಸ್ವಿನಿ ಶರ್ಮಾ

ಫ್ಲಾಟ್#9, ಮೇರಿ ಮತ್ತು ಇಂಗ್ಲಿಷ್ ಮಂಜ ಚಿತ್ರಗಳಲ್ಲಿ ನಟಿಸಿದ್ದ ತೇಜಸ್ವಿನಿ ಶರ್ಮಾ ಇದೀಗ ವಿಐಪಿ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಬ್ರಹ್ಮ ಅವರ ನಿರ್ದೇಶನದ ಚಿತ್ರದಲ್ಲಿ ನಟ ವಸಿಷ್ಠ ಸಿಂಹ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಥ್ರಿಲ್ ಆಗಿದ್ದಾರೆ. ಕ್ರೈಮ್ ಥ್ರಿಲ್ಲರ್ ಎಂದು ಹೇಳಲಾದ ಈ ಚಿತ್ರದಲ್ಲಿ ತೇಜಸ್ವಿನಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

ಫ್ಲಾಟ್#9, ಮೇರಿ ಮತ್ತು ಇಂಗ್ಲಿಷ್ ಮಂಜ ಚಿತ್ರಗಳಲ್ಲಿ ನಟಿಸಿದ್ದ ತೇಜಸ್ವಿನಿ ಶರ್ಮಾ ಇದೀಗ ವಿಐಪಿ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಬ್ರಹ್ಮ ಅವರ ನಿರ್ದೇಶನದ ಚಿತ್ರದಲ್ಲಿ ನಟ ವಸಿಷ್ಠ ಸಿಂಹ ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಥ್ರಿಲ್ ಆಗಿದ್ದಾರೆ. ಕ್ರೈಮ್ ಥ್ರಿಲ್ಲರ್ ಎಂದು ಹೇಳಲಾದ ಈ ಚಿತ್ರದಲ್ಲಿ ತೇಜಸ್ವಿನಿ ಕಾಲೇಜು ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ.

'ಥ್ರಿಲ್ಲರ್‌ ಸಿನಿಮಾಗಳೊಂದಿಗೆ ನಟನೆಯನ್ನು ಪ್ರಾರಂಭಿಸಿ ಮತ್ತು ವಿಭಿನ್ನ ಪ್ರಕಾರಗಳಲ್ಲಿ ಕೆಲಸ ಮಾಡುತ್ತಿರುವುದಕ್ಕೆ ಮತ್ತು ಕಮರ್ಷಿಯಲ್ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ವಿಐಪಿಯಲ್ಲಿ ಅನೇಕ್ ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟ ವಸಿಷ್ಠ ಸಿಂಹ ಅವರೊಂದಿಗೆ ಕೆಲಸ ಮಾಡುವುದು ಆಸಕ್ತಿದಾಯಕವಾಗಿದೆ' ಎಂದು ಹೇಳುತ್ತಾರೆ ತೇಜಸ್ವಿನಿ.

ವಿಐಪಿ ಚಿತ್ರವನ್ನು ಕಲಾಸೃಷ್ಟಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಆರ್‌ಎಸ್ ಮೋಹನ್ ಕುಮಾರ್ ಮತ್ತು ಆರ್ ಅಚ್ಯುತ ರಾವ್ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಅಫ್ಜಲ್ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಬೆಂಗಳೂರು ಮತ್ತು ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

'ಕೆಲವು ಭಾಗಗಳನ್ನು ಹೊರತುಪಡಿಸಿ, ನಾನು ಬಹುತೇಕ ನನ್ನ ಭಾಗಗಳ ಚಿತ್ರೀಕರಣ ಪೂರ್ಣಗೊಂಡಿದೆ. ಮುಂಬರುವ ವೇಳಾಪಟ್ಟಿಯಲ್ಲಿ ಉಳಿದಿರುವುದು ಪೂರ್ಣಗೊಳ್ಳಲಿದೆ' ಎಂದು ತೇಜಸ್ವಿನಿ ಹೇಳುತ್ತಾರೆ.

ವಿಐಪಿ ಸಿನಿಮಾ ತೇಜಸ್ವಿನಿಯ 6ನೇ ಯೋಜನೆಯಾಗಿದ್ದು, ಅವರು ಹೆಚ್ಚಿನ ಕನ್ನಡ ಚಿತ್ರಗಳಲ್ಲಿ ಕೆಲಸ ಮಾಡಲು ಮತ್ತು ಇತರ ಉದ್ಯಮಗಳಲ್ಲಿಯೂ ತಮ್ಮ ಪರಿಧಿಯನ್ನು ವಿಸ್ತರಿಸಲು ಸಿದ್ಧರಾಗಿದ್ದಾರೆ. 'ನಾನು ಒಂದೆರಡು ತಮಿಳು ಸಿನಿಮಾಗಳಿಗಾಗಿ ಮಾತುಕತೆ ನಡೆಸುತ್ತಿದ್ದೇನೆ. ಹಿಂದಿಯಲ್ಲಿ ಡ್ಯಾನ್ಸ್ ವಿಡಿಯೋಗಳನ್ನು ಮಾಡಲು ನನ್ನನ್ನು ಸಂಪರ್ಕಿಸಲಾಗಿದೆ. ಆ ಬಗ್ಗೆಯೂ ನೋಡುತ್ತಿದ್ದೇನೆ. ಸಿನಿಮಾ ಮಾಡುವುದು ಈಗ ನನ್ನ ಆದ್ಯತೆಯಾಗಿದ್ದು, ನಾನು ಕೆಲವು ಉತ್ತಮ ಸ್ಕ್ರಿಪ್ಟ್‌ಗಳ ಭಾಗವಾಗಲು ಎದುರು ನೋಡುತ್ತಿದ್ದೇನೆ. ವೆಬ್ ಸೀರೀಸ್, ಮ್ಯೂಸಿಕ್ ವಿಡಿಯೋಗಳಿಗಷ್ಟೇ ಸೀಮಿತವಾಗಲು ನನಗಿಷ್ಟವಿಲ್ಲ. ಫ್ರೀಸ್ಟೈಲ್ ಮತ್ತು ಭರತನಾಟ್ಯದಲ್ಲಿ ಪರಿಣಿತಿ ಹೊಂದಿದ್ದೇನೆ. ನಾನು ಮ್ಯೂಸಿಕ್ ವಿಡಿಯೋಗಳನ್ನು, ನೃತ್ಯದ ಅವಕಾಶಗಳನ್ನು ನೀಡುವ ಯೋಜನೆಗಳಿಗಾಗಿ ಎದುರು ನೋಡುತ್ತಿದ್ದೇನೆ ಎನ್ನುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT