ಜಸ್ಟ್ ಮ್ಯಾರೀಡ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಶೈನ್ ಶೆಟ್ಟಿ-ಅಂಕಿತಾ ಅಮರ್ ನಟನೆಯ 'ಜಸ್ಟ್ ಮ್ಯಾರೀಡ್' ಚಿತ್ರೀಕರಣ ಪೂರ್ಣ

ಎಬಿಬಿಎಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಜಸ್ಟ್ ಮ್ಯಾರೀಡ್ ಚಿತ್ರದ ಮೂಲಕ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ.

ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ಅಭಿನಯದ 'ಜಸ್ಟ್ ಮ್ಯಾರೀಡ್' ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದೆ. ದೇವರಾಜ್, ಶ್ರುತಿ ಕೃಷ್ಣ, ಅನೂಪ್ ಭಂಡಾರಿ, ಶ್ರೀಮನ್, ರವಿಶಂಕರ್ ಗೌಡ, ರವಿ ಭಟ್, ಸಾಕ್ಷಿ ಅಗರ್ವಾಲ್, ಶ್ರುತಿ ಹರಿಹರನ್ ಮತ್ತು ಅಚ್ಯುತ್ ಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ರೊಮ್ಯಾಂಟಿಕ್ ಡ್ರಾಮಾವನ್ನು ಇಪ್ಪತ್ತು ದಿನ ಬೆಂಗಳೂರು, ಮೈಸೂರು ಮತ್ತು ಚಿಕ್ಕಮಂಗಳೂರಿನಲ್ಲಿ ಚಿತ್ರೀಕರಿಸಲಾಗಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಎಬಿಬಿಎಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ ಜಸ್ಟ್ ಮ್ಯಾರೀಡ್ ಚಿತ್ರದ ಮೂಲಕ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅವರು ಮೊದಲ ಬಾರಿಗೆ ನಿರ್ಮಾಪಕರಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ಸಿಆರ್ ಬಾಬಿ ಅವರು ಇದೇ ಮೊದಲ ಬಾರಿಗೆ ನಿರ್ದೇಶನದ ಹೊಣೆ ಹೊತ್ತಿರುವುದಲ್ಲದೆ, ಸಹ-ನಿರ್ಮಾಣ ಮಾಡುತ್ತಿದ್ದಾರೆ. ಜಸ್ಟ್ ಮ್ಯಾರೀಡ್‌ ಚಿತ್ರವು ಆರು ಹಾಡುಗಳನ್ನು ಒಳಗೊಂಡಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿರುವ ಮತ್ತು ವಿಜಯ್ ಪ್ರಕಾಶ್ ಅವರ ಧ್ವನಿಯಾಗಿರುವ 'ಅಭಿಮಾನಿ ಆಗಿ ಹೋದೆ' ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಲಾಗಿದೆ.

ಜಸ್ಟ್ ಮ್ಯಾರೀಡ್ ಚಿತ್ರದ ಕಥೆಯನ್ನು ಸಿಆರ್ ಬಾಬಿ ಬರೆದಿದ್ದಾರೆ. ಧನಂಜಯ್ ಜೊತೆಗೆ ಚಿತ್ರಕಥೆಯನ್ನು ಸಹ ಬರೆದಿದ್ದಾರೆ. ಚಿತ್ರದ ಸಂಭಾಷಣೆಯನ್ನು ರಘು ನಿಡುವಳ್ಳಿ ಬರೆದಿದ್ದಾರೆ.

ಪಿಜಿ (ಪಾರ್ತಿಬನ್) ಮತ್ತು ಆಶಿಕ್ ಕುಸುಗೋಳ್ ಛಾಯಾಗ್ರಹಣವನ್ನು ನಿರ್ವಹಿಸಿದ್ದು, ಅಮರ್ ಕಲಾ ನಿರ್ದೇಶನವನ್ನು ನೋಡಿಕೊಳ್ಳುತ್ತಿದ್ದಾರೆ ಮತ್ತು ಚಿತ್ರಕ್ಕೆ ವಿಕ್ರಮ್ ಮೋರ್, ಸಾಹಸ್, ಬಾಬಾ ಭಾಸ್ಕರ್ ಮತ್ತು ಶಾಂತಿ ಅರವಿಂದ್ ಅವರು ಸ್ಟಂಟ್ ಅನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT