ಉತ್ತರಕಾಂಡ ಚಿತ್ರದಲ್ಲಿ ನಟಿ ಐಶ್ವರ್ಯಾ ರಾಜೇಶ್ 
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದ ಮೂಲಕ ಐಶ್ವರ್ಯಾ ರಾಜೇಶ್ ಕನ್ನಡಕ್ಕೆ ಎಂಟ್ರಿ; 'ಇದಕ್ಕಿಂತ ಇನ್ನೇನು ಬೇಕು' ಎಂದ ನಟಿ

ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ ನಿರ್ದೇಶನದ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಬಹು ನಿರೀಕ್ಷಿತ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ ನಿರ್ದೇಶನದ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

ಚಿತ್ರದ ತಮ್ಮ ಕ್ಯಾರೆಕ್ಟರ್ ಪೋಸ್ಟರ್ ಅನ್ನು ಹಂಚಿಕೊಂಡಿರುವ ಅವರು ತಮ್ಮ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳಲ್ಲಿ, 'ಇದಕ್ಕಿಂತ ನಾನು ಇನ್ನೇನು ಬಯಸಬಹುದು?. ನನ್ನ ಮೊದಲ ಕನ್ನಡ ಸಿನಿಮಾ ಉತ್ತರಕಾಂಡ' ಎಂದು ಬರೆದಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ ಅವರಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ ದುರ್ಗಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಉತ್ತರಕಾಂಡದಲ್ಲಿ ನಟ ಧನಂಜಯ್ ಗಬ್ರು ಸತ್ಯ ಪಾತ್ರದಲ್ಲಿ ನಟಿಸಲಿದ್ದರೆ, ಚೈತ್ರಾ ಆಚಾರ್ ಲಚ್ಚಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಮಲಯಾಳಂನ ಹೆಸರಾಂತ ನಿರ್ಮಾಪಕ ಮತ್ತು ನಟ ವಿಜಯ್ ಬಾಬು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚೈತ್ರಾ ಆಚಾರ್ ಅವರಿಗೆ ಜೋಡಿಯಾಗಿ ದಿಗಂತ್ ನಟಿಸುತ್ತಿದ್ದಾರೆ. ಹಿರಿಯ ನಟಿ ಉಮಾಶ್ರೀ ಪಂಡರಿ ಭಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಗೋಪಾಲ ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜಾಕಿ ಖ್ಯಾತಿಯ ನಟಿ ಭಾವನಾ ಮೆನನ್ ಕೂಡ ಚಿತ್ರದ ಭಾಗವಾಗಿದ್ದು, ನಟ ಶಿವರಾಜ್‌ಕುಮಾರ್‌ ಅವರಿಗೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರದ ಜೊತೆಗೆ ಸಿನಿಮಾದಲ್ಲಿ ಅವರು ತೊಡಗಿಸಿಕೊಳ್ಳುವ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಅಧಿಕೃತ ಪ್ರಕಟಣೆ ಹೊರಡಿಸಲಿದೆ.

ಕೆಆರ್‌ಜಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ ಈ ಚಿತ್ರಕ್ಕೆ ಬಾಲಿವುಡ್‌ನ ಖ್ಯಾತ ಸಂಗೀತ ಸಂಯೋಜಕ ಮತ್ತು ಗಾಯಕ ಅಮಿತ್ ತ್ರಿವೇದಿ ಸಂಗೀತ ಸಂಯೋಜಿಸಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಮತ್ತು ವಿಶ್ವಾಸ್ ಕಶ್ಯಪ್ ಅವರ ಕಲಾ ನಿರ್ದೇಶನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT