ಉತ್ತರಕಾಂಡ ಚಿತ್ರದಲ್ಲಿ ನಟಿ ಐಶ್ವರ್ಯಾ ರಾಜೇಶ್ 
ಸಿನಿಮಾ ಸುದ್ದಿ

'ಉತ್ತರಕಾಂಡ' ಚಿತ್ರದ ಮೂಲಕ ಐಶ್ವರ್ಯಾ ರಾಜೇಶ್ ಕನ್ನಡಕ್ಕೆ ಎಂಟ್ರಿ; 'ಇದಕ್ಕಿಂತ ಇನ್ನೇನು ಬೇಕು' ಎಂದ ನಟಿ

ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ ನಿರ್ದೇಶನದ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

ಡಾಲಿ ಧನಂಜಯ್ ಮತ್ತು ಶಿವರಾಜಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಬಹು ನಿರೀಕ್ಷಿತ ಉತ್ತರಕಾಂಡ ಚಿತ್ರತಂಡಕ್ಕೆ ನಟಿ ಐಶ್ವರ್ಯಾ ರಾಜೇಶ್ ಎಂಟ್ರಿ ಕೊಟ್ಟಿದ್ದು, ರೋಹಿತ್ ಪದಕಿ ನಿರ್ದೇಶನದ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡಿದ್ದಾರೆ. ಈ ಸುದ್ದಿಯನ್ನು ಸ್ವತಃ ಅವರೇ ಖಚಿತಪಡಿಸಿದ್ದಾರೆ.

ಚಿತ್ರದ ತಮ್ಮ ಕ್ಯಾರೆಕ್ಟರ್ ಪೋಸ್ಟರ್ ಅನ್ನು ಹಂಚಿಕೊಂಡಿರುವ ಅವರು ತಮ್ಮ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳಲ್ಲಿ, 'ಇದಕ್ಕಿಂತ ನಾನು ಇನ್ನೇನು ಬಯಸಬಹುದು?. ನನ್ನ ಮೊದಲ ಕನ್ನಡ ಸಿನಿಮಾ ಉತ್ತರಕಾಂಡ' ಎಂದು ಬರೆದಿದ್ದಾರೆ. ಚಿತ್ರದಲ್ಲಿ ಡಾಲಿ ಧನಂಜಯ ಅವರಿಗೆ ಜೋಡಿಯಾಗಿ ಐಶ್ವರ್ಯಾ ರಾಜೇಶ್ ದುರ್ಗಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಉತ್ತರಕಾಂಡದಲ್ಲಿ ನಟ ಧನಂಜಯ್ ಗಬ್ರು ಸತ್ಯ ಪಾತ್ರದಲ್ಲಿ ನಟಿಸಲಿದ್ದರೆ, ಚೈತ್ರಾ ಆಚಾರ್ ಲಚ್ಚಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಮಲಯಾಳಂನ ಹೆಸರಾಂತ ನಿರ್ಮಾಪಕ ಮತ್ತು ನಟ ವಿಜಯ್ ಬಾಬು ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚೈತ್ರಾ ಆಚಾರ್ ಅವರಿಗೆ ಜೋಡಿಯಾಗಿ ದಿಗಂತ್ ನಟಿಸುತ್ತಿದ್ದಾರೆ. ಹಿರಿಯ ನಟಿ ಉಮಾಶ್ರೀ ಪಂಡರಿ ಭಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಗೋಪಾಲ ಕೃಷ್ಣ ದೇಶಪಾಂಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜಾಕಿ ಖ್ಯಾತಿಯ ನಟಿ ಭಾವನಾ ಮೆನನ್ ಕೂಡ ಚಿತ್ರದ ಭಾಗವಾಗಿದ್ದು, ನಟ ಶಿವರಾಜ್‌ಕುಮಾರ್‌ ಅವರಿಗೆ ಜೋಡಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರದ ಜೊತೆಗೆ ಸಿನಿಮಾದಲ್ಲಿ ಅವರು ತೊಡಗಿಸಿಕೊಳ್ಳುವ ಬಗ್ಗೆ ಶೀಘ್ರದಲ್ಲೇ ಚಿತ್ರತಂಡ ಅಧಿಕೃತ ಪ್ರಕಟಣೆ ಹೊರಡಿಸಲಿದೆ.

ಕೆಆರ್‌ಜಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ ಈ ಚಿತ್ರಕ್ಕೆ ಬಾಲಿವುಡ್‌ನ ಖ್ಯಾತ ಸಂಗೀತ ಸಂಯೋಜಕ ಮತ್ತು ಗಾಯಕ ಅಮಿತ್ ತ್ರಿವೇದಿ ಸಂಗೀತ ಸಂಯೋಜಿಸಿದ್ದಾರೆ. ಅದ್ವೈತ ಗುರುಮೂರ್ತಿ ಅವರ ಛಾಯಾಗ್ರಹಣ ಮತ್ತು ವಿಶ್ವಾಸ್ ಕಶ್ಯಪ್ ಅವರ ಕಲಾ ನಿರ್ದೇಶನವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT