ಮಾರಕಾಸ್ತ್ರ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಮಾಲಾಶ್ರೀ ನಟನೆಯ 'ಮಾರಕಾಸ್ತ್ರ' ತೆಲುಗು ಆವೃತ್ತಿ 'ಮರಣಾಯುಧಂ' ಈ ವಾರ ಬಿಡುಗಡೆ!

ಮಾಲಾಶ್ರೀ ಮುಖ್ಯಭೂಮಿಕೆಯ 'ಮಾರಕಾಸ್ತ್ರ' ಚಿತ್ರ ಕಳೆದ ವರ್ಷ ತೆರೆಕಂಡು ಕನ್ನಡಿಗರ ಮನ ಗೆದ್ದಿತ್ತು. ಇದೀಗ ಇದೇ ಚಿತ್ರ ತೆಲುಗಿನಲ್ಲೂ ನಿರ್ಮಾಣ ಆಗಿದ್ದು, 'ಮರಣಾಯುಧಂ' ಎಂದು ಶೀರ್ಷಿಕೆ ಇಡಲಾಗಿದೆ.

ಮಾಲಾಶ್ರೀ ಮುಖ್ಯಭೂಮಿಕೆಯ 'ಮಾರಕಾಸ್ತ್ರ' ಚಿತ್ರ ಕಳೆದ ವರ್ಷ ತೆರೆಕಂಡು ಕನ್ನಡಿಗರ ಮನ ಗೆದ್ದಿತ್ತು. ಇದೀಗ ಇದೇ ಚಿತ್ರ ತೆಲುಗಿನಲ್ಲೂ ನಿರ್ಮಾಣ ಆಗಿದ್ದು, 'ಮರಣಾಯುಧಂ' ಎಂದು ಶೀರ್ಷಿಕೆ ಇಡಲಾಗಿದೆ.

ಗುರುಮೂರ್ತಿ ಸುನಾಮಿ ನಿರ್ದೇಶನದ ಮತ್ತು ಕೋಮಲಾ ನಟರಾಜ ನಿರ್ಮಿಸಿದ ಮಾಲಾಶ್ರೀ ಅವರ ಆ್ಯಕ್ಷನ್ ಸಿನಿಮಾ 'ಮಾರಕಾಸ್ತ್ರ' ಕಳೆದ ವರ್ಷ ಬಿಡುಗಡೆಯಾಯಿತು, ಆದರೆ ಗಲ್ಲಾಪೆಟ್ಟಿಗೆಯಲ್ಲಿ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆಯಿತು. ನಿರ್ದೇಶಕರು ಇದನ್ನು ತೆಲುಗಿನಲ್ಲಿ 'ಮರಣಾಯುಧಂ' ಎಂದು ಡಬ್ ಮಾಡಿ ಏಪ್ರಿಲ್ 19 ರಂದು ಬಿಡುಗಡೆ ಮಾಡಿದ್ದಾರೆ. ಸುಮಾರು 26 ನಿಮಿಷಗಳ ದೃಶ್ಯಗಳಿಗೆ ಕತ್ತರಿ ಹಾಕಿದ ನಂತರ, ಚಿತ್ರವು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ತೆರೆ ಕಂಡಿದೆ.

ಎಡಿಟ್ ಮಾಡಿದ ಕನ್ನಡ ಆವೃತ್ತಿಯನ್ನು ಏಪ್ರಿಲ್ 26 ರಂದು ಕರ್ನಾಟಕ ಮತ್ತು ತೆಲಂಗಾಣದಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಮಾಲಾಶ್ರೀ ಜೊತೆಗೆ ಚಿತ್ರದಲ್ಲಿ ಆನಂದ್ ಆರ್ಯ, ಹರ್ಷಿಕಾ ಪೂಣಚ್ಚ, 'ಉಗ್ರಂ' ಮಂಜು, ನಟರಾಜ್, ಅಯ್ಯಪ್ಪ ಪಿ ಶರ್ಮಾ ಮುಂತಾದವರು ನಟಿಸಿದ್ದಾರೆ.

ಮಾರಕಾಸ್ತ್ರ ಚಿತ್ರವನ್ನು ಕಳೆದ ವರ್ಷ ಬಿಡುಗಡೆ ಮಾಡಿದ್ದೆವು. ಆ ಸಮಯದಲ್ಲಿ ಭಾರತ-ಪಾಕ್ ಮ್ಯಾಚ್, ಹಬ್ಬಗಳು ಬಂದವು. ಹಾಗಾಗಿ ಹೆಚ್ಚಿನ ವೀಕ್ಷಕರಿಗೆ ನಮ್ಮ ಸಿನಿಮಾ‌ ನೋಡಲು ಆಗಲಿಲ್ಲ. ಆದರೆ ಚಿತ್ರ ನೋಡಿದ ತೆಲುಗು ವಿತರಕರಾದ ವೆಂಕಟೇಶ್ ರಾವ್ ಅವರು ಈ ಚಿತ್ರವನ್ನು ತೆಲುಗಿನಲ್ಲಿ ನಿರ್ಮಾಣ ಮಾಡಿ ಎಂದರು. ಮಾರಕಾಸ್ತ್ರ ಈಗ ಮಾರಣಾಯುಧಂ ಎಂಬ ಹೆಸರಿನಿಂದ ಇದೇ ಏಪ್ರಿಲ್ 26 ರಂದು ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ. ಇದೇ ಶನಿವಾರ 27ರಂದು ಪೌರ ಕಾರ್ಮಿಕರು ಸೇರಿದಂತೆ ಅನೇಕ ಶ್ರಮಿಕ ವರ್ಗದವರಿಗೆ ಒಂದು ಉಚಿತ ಪ್ರದರ್ಶನದ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಆರಂಭದಲ್ಲಿ ಸಿನಿಮಾ ಮಾಡಲು ಮಾಲಾಶ್ರೀ ಹಿಂಜರಿದರು. ಅಂತಿಮವಾಗಿ ಸಿನಿಮಾ ಮಾಡಲು ಒಪ್ಪಿಕೊಂಡರು, ನಿರ್ದೇಶಕರ ಉತ್ಸಾಹವನ್ನು ಹೊಗಳಿದ ಅವರು ಎಲ್ಲರೂ ಸಿನಿಮಾ ನೋಡುವಂತೆ ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT