ದಿ ಜಡ್ಜ್‌ಮೆಂಟ್ ಚಿತ್ರತಂಡ 
ಸಿನಿಮಾ ಸುದ್ದಿ

ರವಿಚಂದ್ರನ್ ನಟನೆಯ 'ದಿ ಜಡ್ಜ್‌ಮೆಂಟ್' ಚಿತ್ರೀಕರಣ ಪೂರ್ಣ; ಮೇನಲ್ಲಿ ಬಿಡುಗಡೆಗೆ ಸಿದ್ಧತೆ

ಕ್ರೇಜಿ ಸ್ಟಾರ್ ರವಿಚಂದ್ರನ್ ನಟಿಸಿರುವ 'ದಿ ಜಡ್ಜ್‌ಮೆಂಟ್: ಸೀ ಯು ಇನ್ ಕೋರ್ಟ್' ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕುತೂಹಲಕಾರಿಯಾಗಿ, ಅವರು ಡಾ. ರಾಜ್‌ಕುಮಾರ್ ಅವರ ಜನ್ಮ ವಾರ್ಷಿಕೋತ್ಸವದಂದು ಚಿತ್ರದ ಕೊನೆಯ ದೃಶ್ಯವನ್ನು ಮುಗಿಸಿದ್ದಾರೆ.

ಕ್ರೇಜಿ ಸ್ಟಾರ್ ರವಿಚಂದ್ರನ್ ನಟಿಸಿರುವ 'ದಿ ಜಡ್ಜ್‌ಮೆಂಟ್: ಸೀ ಯು ಇನ್ ಕೋರ್ಟ್' ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಕುತೂಹಲಕಾರಿಯಾಗಿ, ಅವರು ಡಾ. ರಾಜ್‌ಕುಮಾರ್ ಅವರ ಜನ್ಮ ವಾರ್ಷಿಕೋತ್ಸವದಂದು ಚಿತ್ರದ ಕೊನೆಯ ದೃಶ್ಯವನ್ನು ಮುಗಿಸಿದ್ದಾರೆ. G9 ಕಮ್ಯುನಿಕೇಷನ್ ಮೀಡಿಯಾ ಮತ್ತು ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಡಿಯಲ್ಲಿ ಚಿತ್ರ ನಿರ್ಮಾಣಗೊಂಡಿದ್ದು, ನಿರ್ಮಾಪಕರು ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸಿದರು.

ನಿರ್ದೇಶಕ ಗುರುರಾಜ್ ಕುಲಕರ್ಣಿ ಚಿತ್ರದ ಕುರಿತು ಮಾತನಾಡಿ, 'ಕಳೆದ ವರ್ಷ ನಾವು ಡಾ. ರಾಜ್‌ಕುಮಾರ್ ಅವರ ಜನ್ಮದಿನದಂದು ಚಿತ್ರವನ್ನು ಪ್ರಾರಂಭಿಸಿದ್ದೆವು ಮತ್ತು ನಾವು ಈ ವರ್ಷ ಅದೇ ದಿನದಂದು ಚಿತ್ರೀಕರಣ ಮುಗಿಸಿದ್ದೇವೆ. ನಟ ರವಿಚಂದ್ರನ್ ಅವರ ಸೇರ್ಪಡೆ ಮತ್ತು ಎಲ್ಲ ಕಲಾವಿದರು ಮತ್ತು ತಂತ್ರಜ್ಞರ ಸಹಕಾರದೊಂದಿಗೆ ನಾವು ಚಿತ್ರವನ್ನು ಯಶಸ್ವಿಯಾಗಿ ಮುಗಿಸಿದ್ದು, ಮೇನಲ್ಲಿ ಬಿಡುಗಡೆ ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂದರು.

ನಟಿ ಮೇಘನಾ ಗಾಂವ್ಕರ್ ಮಾತನಾಡಿ, 'ನಟ ರವಿಚಂದ್ರನ್ ಅವರೊಂದಿಗೆ ಕೆಲಸ ಮಾಡಿರುವುದು ನನಗೆ ಖುಷಿ ತಂದಿದೆ. ಈ ವರ್ಷ ಡಾ. ರಾಜ್‌ಕುಮಾರ್ ಅವರ ಜನ್ಮದಿನದಂದು ಚಿತ್ರವು ಪೂರ್ಣಗೊಂಡಿರುವುದು ನಿಜಕ್ಕೂ ಆಶ್ಚರ್ಯಕರವಾಗಿದೆ' ಎಂದು ಹೇಳಿದರು.

ಚಿತ್ರದಲ್ಲಿ ದಿಗಂತ್, ಧನ್ಯಾ ರಾಮ್‌ಕುಮಾರ್, ಲಕ್ಷ್ಮಿ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ರವಿಶಂಕರ್ ಗೌಡ, ಸುಜಯ್ ಶಾಸ್ತ್ರಿ, ಕೃಷ್ಣ ಹೆಬ್ಬಾಳೆ, ರೇಖಾ ಕೂಡ್ಲಿಗಿ ಮತ್ತು ನವಿಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಚಿತ್ರಕ್ಕೆ ಎಂಎಸ್ ರಮೇಶ್ ಅವರ ಸಂಭಾಷಣೆ ಇದ್ದು, ದಿ ಜಡ್ಜ್‌ಮೆಂಟ್‌ಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಪಿಕೆಎಚ್ ದಾಸ್ ಅವರ ಛಾಯಾಗ್ರಹಣ ಮತ್ತು ಕೆಂಪರಾಜ್ ಸಂಕಲನವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಹೆಚ್ಚುತ್ತಿರುವ ಸಬ್ಸಿಡಿ: ಗ್ರಾಮ ಪಂಚಾಯಿತಿ ಅನುದಾನಕ್ಕೆ ರಾಜ್ಯ ಸರ್ಕಾರ ಕೊಕ್- CAG ವರದಿ

SCROLL FOR NEXT