ರಮೇಶ್ ಅರವಿಂದ್ 
ಸಿನಿಮಾ ಸುದ್ದಿ

ಶ್ರಮಿಕ ವರ್ಗಕ್ಕೆ ಅವಮಾನ: ನಟ ರಮೇಶ್ ಅರವಿಂದ್, ನಿರೂಪಕಿ ಅನುಶ್ರೀ ಸೇರಿ ಹಲವರ ವಿರುದ್ಧ ದೂರು ದಾಖಲು

ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಬಳಸಲಾದ ಪದದಿಂದ ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಬಳಸಲಾದ ಪದದಿಂದ ಶ್ರಮಿಕರಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ತುಮಕೂರು ಚಿಕ್ಕನಾಯಕನಹಳ್ಳಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರ ನಿರ್ಮಾಪಕ, ನಿರ್ದೇಶಕ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ಸ್ಪರ್ಧಿ, ನಿರೂಪಕಿ ಅನುಶ್ರೀ ಹಾಗೂ ಇತರರ ವಿರುದ್ಧ ಚಿಕ್ಕನಾಯಕನಹಳ್ಳಿ ಪಟ್ಟಣದ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇತ್ತೀಚಿಗೆ ಆರಂಭವಾದ ಈ ರಿಯಾಲಿಟಿ ಶೋ ತನ್ನ ವಿಶೇಷತೆಗಳಿಂದ ಪ್ರೇಕ್ಷಕರ ಮನಗೆದ್ದಿದ್ದು, ಟಿಆರ್‌ಪಿಯಲ್ಲೂ ಉತ್ತಮ ಸ್ಥಾನ ಪಡೆದುಕೊಂಡು ಮುನ್ನುಗ್ಗುತ್ತಿದೆ. ಪ್ರತಿ ವೀಕೆಂಡ್‌ನಲ್ಲಿ ಪ್ರಸಾರವಾಗುವ ಈ ಶೋನಲ್ಲಿ ಈ ಬಾರಿ ಫ್ಯಾಮಿಲಿ ರೌಂಡ್‌ ಆಯೋಜನೆ ಮಾಡಲಾಗಿತ್ತು. ಸ್ಪರ್ಧಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ನಟಿಸಬೇಕಿತ್ತು. ಈ ವಾರಾಂತ್ಯ ಪ್ರಸಾರವಾದ ಈ ಸಂಚಿಕೆ ಕೂಡ ಪ್ರೇಕ್ಷಕರಿಗೆ ಇಷ್ಟವಾಗಿದೆ.

ಆದರೆ ಸ್ಪರ್ಧಿಯೊಬ್ಬರು ಬಳಸಿದ ಒಂದು ಪದದಿಂದ ಶ್ರಮಿಕರಿಗೆ ನೋವಾಗಿದೆ. ಈ ರಿಯಾಲಿಟಿ ಶೋ ಸ್ಪರ್ಧಿ ಗಗನ ದೃಶ್ಯವೊಂದರ ನಟನೆಯಲ್ಲಿ ‘ಮ್ಯಾಕನಿಕ್‌ನನ್ನು ಮದುವೆಯಾದರೆ ಗ್ರೀಸ್ ತಿಂದುಕೊಂಡು ಬದುಕಲಾಗದು...’ ಎಂಬ ಮಾತುಗಳನ್ನು ಆಡುತ್ತಾಳೆ. ಈ ಮಾತಿನಿಂದ ವೃತ್ತಿಪರ ಮೆಕ್ಯಾನಿಕ್ ಸಮುದಾಯಕ್ಕೆ ನೋವಾಗಿದೆ. ಶ್ರಮಿಕವರ್ಗದ ದುಡಿಮೆಯ ಬಗ್ಗೆ, ವೃತ್ತಿಯ ಬಗ್ಗೆ ಹೀಗೆ ತಿರಸ್ಕಾರದ, ಕುಹಕದ ಮತ್ತು ನಿಂದನಾತ್ಮಕ ಮಾತುಗಳನ್ನು ಆಡಿರುವ ಸ್ಪರ್ಧಿ ಹಾಗೂ ಆಕೆಯ ಮಾತುಗಳಿಗೆ ಉತ್ತೇಜನ ನೀಡಿದ ನಿರೂಪಕಿ, ನಿರ್ದೇಶಕರು, ನಿರ್ಮಾಪಕರು, ತೀರ್ಪುಗಾರರು ಹಾಗೂ ವಾಹಿನಿಯ ವಿರುದ್ಧ ರಾಜ್ಯದ ಎಲ್ಲ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ದೂರು ದಾಖಲಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಉಂಟುಮಾಡುವ, ಸಮುದಾಯಗಳ ನಡುವೆ ದ್ವೇಷಭಾವನೆ ಬಿತ್ತುವ ಹಾಗೂ ಶ್ರಮಿಕರನ್ನು ಅವಮಾನಿಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ವರಿಷ್ಠಾಧಿಕಾರಿಗೆ ಪಟ್ಟಣದ ಠಾಣೆಯ ಮೂಲಕ ದೂರು ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT