ಧರ್ಮಸ್ಥಳದಲ್ಲಿ ನಟ ಯಶ್ ಕುಟುಂಬ 
ಸಿನಿಮಾ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು.

ಬೆಳ್ತಂಗಡಿ: ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರು ಕುಟುಂಬ ಸಮೇತರಾಗಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು. ಸಿನೆಮಾದ ಸಕ್ಸಸ್ ಗಾಗಿ ಭೇಟಿ ನೀಡಿದ್ದ ಅವರು ಪತ್ನಿ ರಾಧಿಕಾ ಪಂಡಿತ್, ಮಕ್ಕಳೊಂದಿಗೆ ಬಂದು ದೇವರಿಗೆ ಕುಟುಂಬ ಹಾಗೂ ಸಿನೆಮಾ ರೀಲ್ ನ ಮಣ್ಣಿನ ಹರಕೆ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನದ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಡಾ.ಸತೀಶ್ಚಂದ್ರ ಅವರು ದಂಪತಿಗಳನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು. ಯಶ್ ಜೊತೆ ಪತ್ನಿ ರಾಧಿಕಾ ಪಂಡಿತ್. ಮಕ್ಕಳಾದ ಐರಾ ಹಾಗೂ ಯಥರ್ವ್ ಇದ್ದರು. ಟಾಕ್ಸಿಕ್ ಚಲನಚಿತ್ರದ ನಿರ್ಮಾಪಕ ವೆಂಕಟ್ ಜೊತೆಗಿದ್ದರು.

ಬಳಿಕ ದಂಪತಿಗಳು ನೇರವಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆಯಲು ತೆರಳಿದ್ದು, ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!