ದೇವಾಲಯದಲ್ಲಿ ದರ್ಶನ್ ಫೋಟೋ ಇಟ್ಟು ಪೂಜೆ 
ಸಿನಿಮಾ ಸುದ್ದಿ

ಬಳ್ಳಾರಿ: ಗರ್ಭಗುಡಿಯಲ್ಲಿ ದರ್ಶನ್ ಫೋಟೋ ಇಟ್ಟು ಪೂಜೆ; ಅರ್ಚಕನನ್ನು ವಜಾಗೊಳಿಸಿದ ಮುಜರಾಯಿ ಇಲಾಖೆ

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿನ ಬೃಹತ್ ನಂದಿ ವಿಗ್ರಹದ ಎದುರು ಅಮವಾಸ್ಯೆಯಂದು ನಟ ದರ್ಶನ್ ಪೋಟೋಗಳನ್ನು ಇಟ್ಟು ಪೂಜೆ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಫೋಟೋ ಇಟ್ಟು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡಬಸವೇಶ್ವರ ದೇವಸ್ಥಾನದಲ್ಲಿನ ಬೃಹತ್ ನಂದಿ ವಿಗ್ರಹದ ಎದುರು ಅಮವಾಸ್ಯೆಯಂದು ನಟ ದರ್ಶನ್ ಪೋಟೋಗಳನ್ನು ಇಟ್ಟು ಪೂಜೆ ಮಾಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಬಗ್ಗೆ ಹಲವು ಭಕ್ತರು ಅಸಮಾಧಾನ ಹೊರಹಾಕಿದ್ದಾರೆ. ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿ ಎಂಬ ಅರ್ಚಕ ನಟ ದರ್ಶನ್ ಪೋಟೋ ಇಟ್ಟು ಪೂಜೆ ಮಾಡಿದ್ದಾರೆ. ಪೂಜೆ ಮಾಡಿ ಮಂಗಳಾರತಿ ಎತ್ತಿದ್ದಾರೆ. ಈ ಫೊಟೋಗಳು ವೈರಲ್​ ಆಗುತ್ತಿದ್ದಂತೆ ಧಾರ್ಮಿಕ ದತ್ತಿ ಇಲಾಖೆ ಕಾರ್ಯ ನಿರ್ವಾಹಕ ಅಧಿಕಾರಿ ಹನುಮಂತಪ್ಪರವರು ಅರ್ಚಕ ಮಲ್ಲಿ ಎಂಬುವರನ್ನು ಅಮಾನತು ಮಾಡಿದ್ದಾರೆ. ವಿಚಾರಣೆ ಮುಗಿಯೋವರೆಗೂ ದೇವಸ್ಥಾನಕ್ಕೆ ಬಾರದಂತೆ ನಿಷೇಧ ಹೇರಿದ್ದಾರೆ ಎನ್ನಲಾಗಿದೆ.

ಸರ್ಕಾರದ ಧಾರ್ಮಿಕ ಇಲಾಖೆಯ ಸುಪರ್ದಿಯಲ್ಲಿರುವ ದೇವಸ್ಥಾನದಲ್ಲಿ ಹೀಗೆ ಮಾಡುವುದು ಸರಿಯೇ? ಎನ್ನುವ ಪ್ರಶ್ನೆ ಎದ್ದಿದೆ. ದರ್ಶನ್​​ ಅವರಿಗೆ ಒಳ್ಳೆಯದಾಗಲಿ, ಸಂಕಷ್ಟಗಳು ದೂರವಾಗಲಿ ಎಂದು ಪೂಜೆ ಮಾಡಿಸಲಿ. ಅದು ಬಿಟ್ಟು ದೇವರ ಮುಂದೆ ಫೋಟೋ ಇಟ್ಟು ಪೂಜೆ ಮಾಡಿರುವುದು ಎಷ್ಟು ಸರಿ ಎಂದು ಅನೇಕರು ಅಸಮಾಧಾನ ಹೊರಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಲಯಾಳಂ ನಟಿ ಮೇಲೆ ಹತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

ಬೆಳಗಾವಿ ಅಧಿವೇಶನ 2025: ಸುವರ್ಣ ಸೌಧದಲ್ಲೂ'ನಾಟಿ ಕೋಳಿ' ಸದ್ದು, ಆರ್ ಅಶೋಕ್ ಗೆ ಸಿಎಂ ಸಿದ್ದು ಸಲಹೆ!

ಬಳಕೆಯಾಗದ ಬಾರ್‌ ಲೈಸೆನ್ಸ್ ಹರಾಜು ಕುರಿತು ಈ ವಾರ ಅಧಿಸೂಚನೆ ಸಾಧ್ಯತೆ

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

SCROLL FOR NEXT