ರಕ್ಷಿತ್ ಶೆಟ್ಟಿ 
ಸಿನಿಮಾ ಸುದ್ದಿ

ರಕ್ಷಿತ್ ಶೆಟ್ಟಿಗೆ ಸಂಕಷ್ಟ: ಕಾಪಿರೈಟ್ ವಿವಾದ ಸಂಬಂಧ 20 ಲಕ್ಷ ರೂ. ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ಆದೇಶ

ನವೀನ್ ಕುಮಾರ್ ಪ್ರತಿನಿಧಿಸಿರುವ MRT ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, 'ನ್ಯಾಯ ಎಲ್ಲಿದೆ' ಮತ್ತು 'ಒಮ್ಮೆ ನಿನ್ನನ್ನು...' ಹಾಡುಗಳನ್ನು ಸರಿಯಾದ ಅನುಮತಿಯಿಲ್ಲದೆ ಚಿತ್ರದಲ್ಲಿ ಬಳಸಲಾಗಿದೆ ಎಂದು ಪ್ರತಿಪಾದಿಸಿದರು.

MRT Music ಕಂಪನಿಯ ಮಾಡಿರುವ ಕಾಪಿ ರೈಟ್ ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ದೆಹಲಿ ಹೈಕೋರ್ಟ್ ನಟ-ನಿರ್ದೇಶಕ ರಕ್ಷಿತ್ ಶೆಟ್ಟಿಗೆ ಆದೇಶಿಸಿದೆ. ರಕ್ಷಿತ್ ಶೆಟ್ಟಿ ಅವರ ಪರಂವಾ ಸ್ಟುಡಿಯೋಸ್ ನಿರ್ಮಿಸಿದ್ದ 'ಬ್ಯಾಚುಲರ್ ಪಾರ್ಟಿ' ಚಿತ್ರದಲ್ಲಿ 'ನ್ಯಾಯ ಎಲ್ಲದೆ' ಹಾಡನ್ನು ಅನಧಿಕೃತವಾಗಿ ಬಳಸಲಾಗಿದೆ ಎಂಬ ಆರೋಪವಿದೆ.

ನವೀನ್ ಕುಮಾರ್ ಪ್ರತಿನಿಧಿಸಿರುವ MRT ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, 'ನ್ಯಾಯ ಎಲ್ಲಿದೆ' ಮತ್ತು 'ಒಮ್ಮೆ ನಿನ್ನನ್ನು...' ಹಾಡುಗಳನ್ನು ಸರಿಯಾದ ಅನುಮತಿಯಿಲ್ಲದೆ ಚಿತ್ರದಲ್ಲಿ ಬಳಸಲಾಗಿದೆ ಎಂದು ಪ್ರತಿಪಾದಿಸಿದರು. ಈ ದೂರಿನ ಮೇರೆಗೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಹಕ್ಕುಸ್ವಾಮ್ಯ ಕಾಯ್ದೆಯ ಸೆಕ್ಷನ್ 63ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಮನ್ಸ್ ನೀಡಿದರೂ ರಕ್ಷಿತ್ ಶೆಟ್ಟಿ ದೆಹಲಿ ಹೈಕೋರ್ಟ್‌ಗೆ ಹಾಜರಾಗಿರಲಿಲ್ಲ. ಇದಕ್ಕೆ ಪ್ರತಿಯಾಗಿ ನ್ಯಾಯಾಲಯವು ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ಆದೇಶ ನೀಡಿದ್ದಲ್ಲದೆ, ಹಾಡನ್ನು ಹಂಚಿಕೊಂಡಿರುವ ಇನ್‌ಸ್ಟಾಗ್ರಾಮ್‌ನಿಂದ ತೆಗೆದುಹಾಕುವಂತೆ ಸೂಚಿಸಿದೆ.

ರಕ್ಷಿತ್ ಶೆಟ್ಟಿ ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ವಿಚಾರಣೆಯಲ್ಲಿ ಎದುರಿಸಿದ್ದಾರೆ. ಅಲ್ಲದೆ ಕಾನೂನು ಪರಿಶೀಲನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ನ್ಯಾಯಾಲಯದ ಆದೇಶವು ನಟ-ನಿರ್ದೇಶಕ ಮತ್ತು ಅವರ ಸ್ಟುಡಿಯೊಗೆ ಗಂಭೀರ ಪರಿಣಾಮಗಳೊಂದಿಗೆ ನಡೆಯುತ್ತಿರುವ ಕಾನೂನು ಹೋರಾಟದಲ್ಲಿ ಮಹತ್ವದ ಹೆಜ್ಜೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT