ರಚಿತಾ ರಾಮ್ 
ಸಿನಿಮಾ ಸುದ್ದಿ

ರಾಜನನ್ನು ರಾಜನಂತೆಯೇ ನೋಡಲು ಬಯಸುತ್ತೇನೆ: ದರ್ಶನ್ ಭೇಟಿ ಬಳಿಕ ನಟಿ ರಚಿತಾ ರಾಮ್ ಮಾತು

ದರ್ಶನ್‌ ಅವರು ಆರೋಗ್ಯವಾಗಿದ್ದಾರೆ. ಅವರು ಚಿತ್ರರಂಗದ ರಾಜನಿದ್ದಂತೆ. ಅದೇ ಸ್ಥಾನದಲ್ಲಿ ಅವರನ್ನು ನೋಡುತ್ತೇನೆ ಎಂದು ಹೇಳಿ ಭಾವುಕರಾದರು. ನಾನು ಅವರ ಬ್ಯಾನರ್ ನಿಂದಲೇ ಚಿತ್ರರಂಗ ಪ್ರವೇಶಿಸಿದವಳು.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ ಅವರನ್ನು ನಟಿ ರಚಿತಾ ರಾಮ್‌ ಅವರು ಗುರುವಾರ ಭೇಟಿಯಾಗಿ ಚರ್ಚಿಸಿದರು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರಾಗೃಹಕ್ಕೆ ತೆರಳಿದ ಅವರು ದರ್ಶನ್‌ ಅವರೊಂದಿಗೆ ಅರ್ಧ ತಾಸು ಚರ್ಚೆ ನಡೆಸಿ ವಾಪಸ್ ಬಂದರು.

ನಂತರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ರಚಿತಾ ರಾಮ್‌, ‘ದರ್ಶನ್‌ ಅವರು ಆರೋಗ್ಯವಾಗಿದ್ದಾರೆ. ಅವರು ಚಿತ್ರರಂಗದ ರಾಜನಿದ್ದಂತೆ. ಅದೇ ಸ್ಥಾನದಲ್ಲಿ ಅವರನ್ನು ನೋಡುತ್ತೇನೆ’ ಎಂದು ಹೇಳಿ ಭಾವುಕರಾದರು.

ನಾನು ಅವರ ಬ್ಯಾನರ್ ನಿಂದಲೇ ಚಿತ್ರರಂಗ ಪ್ರವೇಶಿಸಿದವಳು. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು, ದರ್ಶನ್​ ಸರ್​. ಇವತ್ತು ಚಿತ್ರರಂಗದಲ್ಲಿ ನಾನೇನು ಹೆಸರು ಮಾಡಿದ್ದರೆ ಅದಕ್ಕೆ ದರ್ಶನ್​ ಸರ್​ ಕಾರಣ. ಅವತ್ತು ದರ್ಶನ್​ ಸರ್​ ಏನಾದ್ರು ನೋ ಅಂದಿದ್ದರೆ ಬಿಂದ್ಯಾ ರಾಮ್​ ರಚಿತಾ ರಾಮ್​ ಆಗುತ್ತಿರಲು ಸಾಧ್ಯವಿರಲಿಲ್ಲ. ಅವರ ಒಂದು ಋಣ ನನ್ನ ಇಡೀ ಕುಟುಂಬದ ಮೇಲಿದೆ. ಜೈಲಿನಲ್ಲಿ ಅವರೇ ನನಗೆ ಧೈರ್ಯ ತುಂಬಿದರು. ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಸಿಗಲಿ ಆ ದೇವರಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನರವಾಣೆ ಪುಸ್ತಕಕ್ಕೆ ಹೆದರಿ ಮೋದಿ ಲೋಕಸಭೆಗೆ ಗೈರು, ಭದ್ರತಾ ಕಾರಣದಿಂದ ಅಲ್ಲ: ರಾಹುಲ್ ಗಾಂಧಿ

'ಮತದಾರರ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡಲ್ಲ': ಮಮತಾ ಸರ್ಕಾರಕ್ಕೆ 'ಸುಪ್ರೀಂ' ಶಾಕ್

ಸಂಸತ್ತಿನಲ್ಲಿ ಕೋಲಾಹಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳಿಂದ ಸಭಾತ್ಯಾಗ; ಲೋಕಸಭೆ ನಾಳೆಗೆ ಮುಂದೂಡಿಕೆ

ಹುಬ್ಬಳ್ಳಿ: ಕನ್ನಡ, ಕನ್ನಡ ವಿವಾದದ ಬಳಿಕ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಬಾಲಿವುಡ್ ಗಾಯಕ ಸೋನು ನಿಗಮ್

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ಎಸ್‌ಐಟಿಯಿಂದ 9 ಪುಟಗಳ ಟಿಪ್ಪಣಿ ಪರಿಶೀಲನೆ; ಅಧಿಕಾರಿಳು ಹೇಳಿದ್ದೇನು?

SCROLL FOR NEXT