ರಚಿತಾ ರಾಮ್ 
ಸಿನಿಮಾ ಸುದ್ದಿ

ರಾಜನನ್ನು ರಾಜನಂತೆಯೇ ನೋಡಲು ಬಯಸುತ್ತೇನೆ: ದರ್ಶನ್ ಭೇಟಿ ಬಳಿಕ ನಟಿ ರಚಿತಾ ರಾಮ್ ಮಾತು

ದರ್ಶನ್‌ ಅವರು ಆರೋಗ್ಯವಾಗಿದ್ದಾರೆ. ಅವರು ಚಿತ್ರರಂಗದ ರಾಜನಿದ್ದಂತೆ. ಅದೇ ಸ್ಥಾನದಲ್ಲಿ ಅವರನ್ನು ನೋಡುತ್ತೇನೆ ಎಂದು ಹೇಳಿ ಭಾವುಕರಾದರು. ನಾನು ಅವರ ಬ್ಯಾನರ್ ನಿಂದಲೇ ಚಿತ್ರರಂಗ ಪ್ರವೇಶಿಸಿದವಳು.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ ಅವರನ್ನು ನಟಿ ರಚಿತಾ ರಾಮ್‌ ಅವರು ಗುರುವಾರ ಭೇಟಿಯಾಗಿ ಚರ್ಚಿಸಿದರು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರಾಗೃಹಕ್ಕೆ ತೆರಳಿದ ಅವರು ದರ್ಶನ್‌ ಅವರೊಂದಿಗೆ ಅರ್ಧ ತಾಸು ಚರ್ಚೆ ನಡೆಸಿ ವಾಪಸ್ ಬಂದರು.

ನಂತರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ರಚಿತಾ ರಾಮ್‌, ‘ದರ್ಶನ್‌ ಅವರು ಆರೋಗ್ಯವಾಗಿದ್ದಾರೆ. ಅವರು ಚಿತ್ರರಂಗದ ರಾಜನಿದ್ದಂತೆ. ಅದೇ ಸ್ಥಾನದಲ್ಲಿ ಅವರನ್ನು ನೋಡುತ್ತೇನೆ’ ಎಂದು ಹೇಳಿ ಭಾವುಕರಾದರು.

ನಾನು ಅವರ ಬ್ಯಾನರ್ ನಿಂದಲೇ ಚಿತ್ರರಂಗ ಪ್ರವೇಶಿಸಿದವಳು. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು, ದರ್ಶನ್​ ಸರ್​. ಇವತ್ತು ಚಿತ್ರರಂಗದಲ್ಲಿ ನಾನೇನು ಹೆಸರು ಮಾಡಿದ್ದರೆ ಅದಕ್ಕೆ ದರ್ಶನ್​ ಸರ್​ ಕಾರಣ. ಅವತ್ತು ದರ್ಶನ್​ ಸರ್​ ಏನಾದ್ರು ನೋ ಅಂದಿದ್ದರೆ ಬಿಂದ್ಯಾ ರಾಮ್​ ರಚಿತಾ ರಾಮ್​ ಆಗುತ್ತಿರಲು ಸಾಧ್ಯವಿರಲಿಲ್ಲ. ಅವರ ಒಂದು ಋಣ ನನ್ನ ಇಡೀ ಕುಟುಂಬದ ಮೇಲಿದೆ. ಜೈಲಿನಲ್ಲಿ ಅವರೇ ನನಗೆ ಧೈರ್ಯ ತುಂಬಿದರು. ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಸಿಗಲಿ ಆ ದೇವರಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT