ರಚಿತಾ ರಾಮ್ 
ಸಿನಿಮಾ ಸುದ್ದಿ

ರಾಜನನ್ನು ರಾಜನಂತೆಯೇ ನೋಡಲು ಬಯಸುತ್ತೇನೆ: ದರ್ಶನ್ ಭೇಟಿ ಬಳಿಕ ನಟಿ ರಚಿತಾ ರಾಮ್ ಮಾತು

ದರ್ಶನ್‌ ಅವರು ಆರೋಗ್ಯವಾಗಿದ್ದಾರೆ. ಅವರು ಚಿತ್ರರಂಗದ ರಾಜನಿದ್ದಂತೆ. ಅದೇ ಸ್ಥಾನದಲ್ಲಿ ಅವರನ್ನು ನೋಡುತ್ತೇನೆ ಎಂದು ಹೇಳಿ ಭಾವುಕರಾದರು. ನಾನು ಅವರ ಬ್ಯಾನರ್ ನಿಂದಲೇ ಚಿತ್ರರಂಗ ಪ್ರವೇಶಿಸಿದವಳು.

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ ಅವರನ್ನು ನಟಿ ರಚಿತಾ ರಾಮ್‌ ಅವರು ಗುರುವಾರ ಭೇಟಿಯಾಗಿ ಚರ್ಚಿಸಿದರು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾರಾಗೃಹಕ್ಕೆ ತೆರಳಿದ ಅವರು ದರ್ಶನ್‌ ಅವರೊಂದಿಗೆ ಅರ್ಧ ತಾಸು ಚರ್ಚೆ ನಡೆಸಿ ವಾಪಸ್ ಬಂದರು.

ನಂತರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ರಚಿತಾ ರಾಮ್‌, ‘ದರ್ಶನ್‌ ಅವರು ಆರೋಗ್ಯವಾಗಿದ್ದಾರೆ. ಅವರು ಚಿತ್ರರಂಗದ ರಾಜನಿದ್ದಂತೆ. ಅದೇ ಸ್ಥಾನದಲ್ಲಿ ಅವರನ್ನು ನೋಡುತ್ತೇನೆ’ ಎಂದು ಹೇಳಿ ಭಾವುಕರಾದರು.

ನಾನು ಅವರ ಬ್ಯಾನರ್ ನಿಂದಲೇ ಚಿತ್ರರಂಗ ಪ್ರವೇಶಿಸಿದವಳು. ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು, ದರ್ಶನ್​ ಸರ್​. ಇವತ್ತು ಚಿತ್ರರಂಗದಲ್ಲಿ ನಾನೇನು ಹೆಸರು ಮಾಡಿದ್ದರೆ ಅದಕ್ಕೆ ದರ್ಶನ್​ ಸರ್​ ಕಾರಣ. ಅವತ್ತು ದರ್ಶನ್​ ಸರ್​ ಏನಾದ್ರು ನೋ ಅಂದಿದ್ದರೆ ಬಿಂದ್ಯಾ ರಾಮ್​ ರಚಿತಾ ರಾಮ್​ ಆಗುತ್ತಿರಲು ಸಾಧ್ಯವಿರಲಿಲ್ಲ. ಅವರ ಒಂದು ಋಣ ನನ್ನ ಇಡೀ ಕುಟುಂಬದ ಮೇಲಿದೆ. ಜೈಲಿನಲ್ಲಿ ಅವರೇ ನನಗೆ ಧೈರ್ಯ ತುಂಬಿದರು. ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಸಿಗಲಿ ಆ ದೇವರಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran ನಲ್ಲಿ ಕೊನೆಗೂ ಆಡಳಿತ ಬದಲಾವಣೆ! ಅಮೆರಿಕ, ಇಸ್ರೇಲ್ ಬಯಸಿದ್ದೇ ಒಂದು, ಆಗಿದ್ದು ಇನ್ನೊಂದು!

Op Sindoor: ವಿಶ್ವಭೂಪಟದಿಂದ ಪಾಕ್ ನಿರ್ನಾಮಕ್ಕೆ ಕೆಲವೇ ನಿಮಿಷಗಳ ಅಂತರದಲ್ಲಿದ್ದೆವು, ಆದ್ರೆ ಅವರು ತಡೆದರು...: ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ

IPL 2026: ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್; ಲಕ್ನೋ ವಿರುದ್ಧ ಗೆದ್ದು ಬೀಗಿದ ಡೆಲ್ಲಿ

IPL 2026: ಯಾರ್ ಮೇಲಾದ್ರೂ 5 ಸಾವಿರ ಹೂಡಿಕೆ ಮಾಡಿ ನೋಡಿ: LSG ಮಾಲೀಕರ ಕುರಿತು Mohammed Shami ಹೇಳಿಕೆ ವೈರಲ್!

ದೇಶದಲ್ಲೇ ಮೊದಲ ಬಾರಿಗೆ ಡ್ರಗ್ಸ್, ಸಾಮಾಜಿಕ–ಆರ್ಥಿಕ ಜನಗಣತಿ ಆರಂಭಿಸಿದ ಪಂಜಾಬ್: ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ

SCROLL FOR NEXT