ಭೈರತಿ ರಣಗಲ್ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ಶಿವಣ್ಣ ನಟನೆಯ 'ಭೈರತಿ ರಣಗಲ್' ನವೆಂಬರ್ 15ಕ್ಕೆ ತೆರೆಗೆ

‘ಭೈರತಿ ರಣಗಲ್‌’ ಚಿತ್ರವು ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದೆ. ಈ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶನದ ಈ‌ ಚಿತ್ರದಲ್ಲಿ ರುಕ್ಮಿಣಿ ವಸಂತ್‌ ನಾಯಕಿಯಾಗಿ ನಟಿಸಿದ್ದಾರೆ.

ಶಿವರಾಜ್‌ ಕುಮಾರ್‌ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ನವೆಂಬರ್‌ 15ರಂದು ‘ಭೈರತಿ ರಣಗಲ್‌’ ಸಿನಿಮಾ ಬಿಡುಗಡೆಯಾಗುವುದಾಗಿ ಚಿತ್ರತಂಡ ಘೋಷಿಸಿದೆ.

‘ಭೈರತಿ ರಣಗಲ್‌’ ಚಿತ್ರವು ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದೆ. ಈ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶನದ ಈ‌ ಚಿತ್ರದಲ್ಲಿ ರುಕ್ಮಿಣಿ ವಸಂತ್‌ ನಾಯಕಿಯಾಗಿ ನಟಿಸಿದ್ದಾರೆ. ಈ ಮೊದಲು ಆಗಸ್ಟ್ 15 ಕ್ಕೆ ರಿಲೀಸ್ ಮಾಡಲು ಚಿತ್ರ ತಂದ ನಿರ್ಧರಿಸಿತ್ತು.

ಅಕ್ಟೋಬರ್‌ನಲ್ಲಿ ಕೆಲವು ದೊಡ್ಡ ಬ್ಯಾನರ್ ಗ ಚಿತ್ರಗಳ ಬಿಡುಗಡೆಗೆ ನಿರ್ಧರಿಸಲಾಗಿದೆ, ಧ್ರುವ ಸರ್ಜಾ ಅವರ ಮಾರ್ಟಿನ್, ಉಪೇಂದ್ರ ಅವರ ಯುಐ, ರಜನಿಕಾಂತ್ ಅವರ ವೆಟ್ಟೈಯನ್, ಸೂರ್ಯ ಅವರ ಕಂಗುವ, ಅಕ್ಷಯ್ ಕುಮಾರ್ ಅವರ ಸ್ಕೈ ಫೋರ್ಸ್ ಸೇರಿದಂತೆ ಹಲವು ಸಿನಿಮಾಗಳು ರಿಲೀಸ್ ಆಗುವ ಕಾರಣದಿಂದ ಭೈರತಿ ರಣಗಲ್ ತಂಡವು ಬಿಡುಗಡೆ ದಿನಾಂಕ ಬದಲಾಯಿಸಲು ನಿರ್ಧರಿಸಲಾಗಿದೆ.

ಭೈರತಿ ರಣಗಲ್ ನಲ್ಲಿ ಶಿವರಾಜಕುಮಾರ್ ವಕೀಲರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಶಿವರಾಜ್‌ಕುಮಾರ್, ಶ್ರೀ ಮುರಳಿ, ಶಾನ್ವಿ ಶ್ರೀವಾಸ್ತವ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದು ನಂತರ ತಮಿಳಿನಲ್ಲಿ ಸಿಲಂಬರಸನ್ ನಟಿಸಿದ ಪಾತು ಥಾಲಾ ಎಂದು ಮರುನಿರ್ಮಾಣವಾಯಿತು. ನರ್ತನ್ ನಿರ್ದೇಶನದ ಮತ್ತು ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ ಭೈರತಿ ರಣಗಲ್ ಚಿತ್ರದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್, ಬಾಲಿವುಡ್ ನಟ ರಾಹುಲ್ ಬೋಸ್ ಮತ್ತು ಅವಿನಾಶ್ ಇದ್ದಾರೆ. ಚಿತ್ರಕ್ಕೆ ನವೀನ್ ಕುಮಾರ್ ಅವರ ಛಾಯಾಗ್ರಹಣ ಮತ್ತು ರವಿ ಬಸ್ರೂರ್ ಅವರ ಸಂಗೀತ ಸಂಯೋಜನೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT