ರಿಷಬ್ ಶೆಟ್ಟಿ 
ಸಿನಿಮಾ ಸುದ್ದಿ

'ಹನುಮಾನ್‌' ಸಿನಿಮಾ ಘೋಷಣೆ ಬೆನ್ನಲ್ಲೇ ಮತ್ತೊಂದು ಚಿತ್ರದಲ್ಲಿ ರಿಷಬ್‌ ಶೆಟ್ಟಿ 'ಛತ್ರಪತಿ ಶಿವಾಜಿ' ಪಾತ್ರ!

ಸಂದೀಪ್‌ ಸಿಂಗ್‌ ಅವರು 2024ರ ಫೆಬ್ರುವರಿ 16ರಂದು ಈ ಸಿನಿಮಾವನ್ನು ಘೋಷಿಸಿದ್ದರು. ಹಿಂದಿ, ಮರಾಠಿ, ಕನ್ನಡ, ತಮಿಳು ಸೇರಿ ಆರು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ತೆಲುಗಿನಲ್ಲಿ ‘ಹನುಮಾನ್‌’ ಸಿನಿಮಾ ಘೋಷಣೆ ಬೆನ್ನಲ್ಲೇ ನಟ ರಿಷಬ್‌ ಶೆಟ್ಟಿ ಅವರ ‘ದಿ ಪ್ರೈಡ್‌ ಆಫ್‌ ಭಾರತ್‌ ಛತ್ರಪತಿ ಶಿವಾಜಿ ಮಹಾರಾಜ್‌’ ಸಿನಿಮಾ ಘೋಷಣೆಯಾಗಿದೆ.

ಈ ಚಿತ್ರ ಸಂದೀಪ್‌ ಸಿಂಗ್‌ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದೆ. 2027ರ ಜನವರಿ 21ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಸಂದೀಪ್‌ ಸಿಂಗ್‌ ಅವರು 2024ರ ಫೆಬ್ರುವರಿ 16ರಂದು ಈ ಸಿನಿಮಾವನ್ನು ಘೋಷಿಸಿದ್ದರು. ಹಿಂದಿ, ಮರಾಠಿ, ಕನ್ನಡ, ತಮಿಳು ಸೇರಿ ಆರು ಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

ಛತ್ರಪತಿ ಶಿವಾಜಿ ಪಾತ್ರದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಿದ್ದಾರೆ. ಹಿಂದಿಯಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಸಂದೀಪ್ ಸಿಂಗ್ ಈ ಸಿನಿಮಾ ನಿರ್ದೇಶನ ಮಾಡಲಿದ್ದಾರೆ. ಸಿನಿಮಾದ ಮೊದಲ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದ್ದು, ಛತ್ರಪತಿ ಶಿವಾಜಿ ಪಾತ್ರದಲ್ಲಿ ರಿಷಬ್ ಶೆಟ್ಟಿ ಮಿಂಚುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾವನ್ನು ಅವರು ನಿರ್ದೇಶಕ ಸಂದೀಪ್ ಸಿಂಗ್ ಊಹಿಸಿರುವ ರೀತಿ ಅದ್ಭುತವಾಗಿದೆ. ಛತ್ರಪತಿ ಶಿವಾಜಿ ಮಹಾರಾಜರ ಪಾತ್ರ ಅದೆಷ್ಟು ಅದ್ಭುತವಾದುದು ಎಂದರೆ ಕತೆ ಕೇಳಿದ ಕ್ಷಣ ಕಾಲವೂ ಯೋಚಿಸದೆ ಒಪಪಿಕೊಂಡುಬಿಟ್ಟೆ. ಛತ್ರಪತಿ ಶಿವಾಜಿಯವರ ಪಾತ್ರದಲ್ಲಿ ನಟಿಸುವುದು ಪದಗಳಿಗೆ ಮೀರಿದ ಗೌರವ. ಛತ್ರಪತಿ ಶಿವಾಜಿ ಮಹಾರಾಜರು ರಾಷ್ಟ್ರೀಯ ಹೀರೋ, ಶತಮಾನಗಳ ಕಾಲ ಅವರು ಪ್ರಭಾವ ಬೀರಿದ್ದಾರೆ. ಅಂಥಹಾ ಅದ್ಭುತವಾದ ನಾಯಕನ ಪಾತ್ರಕ್ಕೆ ಜೀವ ತುಂಬುತ್ತಿರುವುದು ನನಗೆ ದೊರಕಿದ ಅಭೂತಪೂರ್ವ ಅವಕಾಶ ಮತ್ತು ಗೌರವ’ ಎಂದಿದ್ದಾರೆ ರಿಷಬ್ ಶೆಟ್ಟಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT