ನಟ ಅಲ್ಲು ಅರ್ಜುನ್ 
ಸಿನಿಮಾ ಸುದ್ದಿ

Pushpa 2 ಆರ್ಭಟಕ್ಕೆ ಎಲ್ಲಾ ದಾಖಲೆ ಉಡೀಸ್! ಬಿಡುಗಡೆಯಾದ ಮೊದಲ ದಿನವೇ 294 ಕೋಟಿ ರೂ ಕಲೆಕ್ಷನ್!

2021 ರ ತೆಲುಗು ಬ್ಲಾಕ್‌ಬಸ್ಟರ್ ಪುಷ್ಪಾ: ದಿ ರೈಸ್‌ನ ಮುಂದುವರಿದ ಭಾಗವಾದ ಸುಕುಮಾರ್ ನಿರ್ದೇಶನದ 'Pushpa 2' ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ದಾಖಲೆ ಬರೆದಿದೆ.

ತೆಲುಗಿನ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ 'Pushpa 2' ಆರ್ಭಟಕ್ಕೆ ಭಾರತೀಯ ಚಿತ್ರರಂಗದ ಎಲ್ಲಾ ದಾಖಲೆಗಳು ಉಡೀಸ್ ಆಗಿದೆ. ಬಿಡುಗಡೆಯಾದ ಮೊದಲ ದಿನವೇ ಜಾಗತಿಕವಾಗಿ ರೂ. 294 ಕೋಟಿ ಕಲೆಕ್ಷನ್ ಮಾಡಿದೆ.

2021 ರ ತೆಲುಗು ಬ್ಲಾಕ್‌ಬಸ್ಟರ್ ಪುಷ್ಪಾ: ದಿ ರೈಸ್‌ನ ಮುಂದುವರಿದ ಭಾಗವಾದ ಸುಕುಮಾರ್ ನಿರ್ದೇಶನದ 'Pushpa 2' ಭಾರತೀಯ ಚಿತ್ರರಂಗದ ಇತಿಹಾಸದಲ್ಲಿಯೇ ಬಿಡುಗಡೆಯಾದ ಮೊದಲ ದಿನ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವಾಗಿ ದಾಖಲೆ ಬರೆದಿದೆ.

ಈ ಮೂಲಕ RRR ದಾಖಲೆಯನ್ನು ಮುರಿದಿದೆ. ಈ ಹಿಂದೆ ಎಸ್ ಎಸ್ ರಾಜಮೌಳಿ ನಿರ್ದೇಶನದ RRR ಬಿಡುಗಡೆಯಾದ ಮೊದಲ ದಿನ ರೂ. 223.5 ಕೋಟಿ ಕಲೆಕ್ಷನ್ ಮಾಡಿತ್ತು. ನಂತರ ಬಾಹುಬಲಿ 2 ರೂ. 217 ಕೋಟಿ, ಕಲ್ಕಿ 2898 ಎಡಿ ರೂ. 175 ಕೋಟಿ ಕಲೆಕ್ಷನ್ ಮಾಡಿತ್ತು.

ಈ ಚಿತ್ರದ ಕಲೆಕ್ಷನ್ ಟ್ರೆಂಡ್ ಭಾರತೀಯ ಚಿತ್ರೋದ್ಯಮದ ತಜ್ಞರ ಲೆಕ್ಕಾಚಾರವನ್ನು ತಲೆ ಕೆಳಗಾಗಿಸಿದೆ. ಮೊದಲ ದಿನ 150 ಕೋಟಿಗಿಂತ ಸ್ವಲ್ಪ ಹೆಚ್ಚು ಗಳಿಸಬಹುದು ಎಂದು ಊಹಿಸಿದ್ದರು. ಪುಷ್ಪ 2 ನಿರ್ಮಾಣ ಮಾಡಿರುವ ಮೈತ್ರಿ ಮೂವೀ ಮೇಕರ್ಸ್, ಬಾಕ್ಸ್ ಆಫೀಸ್ ಅಂಕಿಅಂಶಗಳನ್ನು ಹಂಚಿಕೊಂಡಿದೆ.

ಬಾಕ್ಸ್ ಆಫೀಸ್ ಇತಿಹಾಸದಲ್ಲಿ ಪುಷ್ಪ-2 ಇತಿಹಾಸ ಸೃಷ್ಟಿಸಿದೆ. ಬಿಡುಗಡೆಯಾದ ಮೊದಲ ದಿನ ವಿಶ್ವಾದ್ಯಂತ 294 ಕೋಟಿ ಗಳಿಸಿದೆ. ಭಾರತೀಯ ಚಿತ್ರರಂಗದಲ್ಲಿ ಬಿಡುಗಡೆಯಾದ ಮೊದಲ ದಿನವೇ ಅತ್ಯಧಿಕ ಕಲೆಕ್ಷನ್ ಮಾಡಿದೆ ಎಂದು ಸ್ಟುಡಿಯೋ Instagram ನಲ್ಲಿ ಪೋಸ್ಟ್ ಮಾಡಿದೆ.

ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಶ್ರೀಗಂಧದ ಕಳ್ಳಸಾಗಾಣಿಕೆದಾರರಾದ ಪುಷ್ಪಾ ರಾಜ್ ಆಗಿ ಮರಳಿದ್ದಾರೆ, ಜೊತೆಗೆ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ಮತ್ತು ಎಸ್ಪಿ ಭನ್ವರ್ ಸಿಂಗ್ ಶೇಖಾವತ್ ಆಗಿ ಫಹಾದ್ ಫಾಸಿಲ್ ಅಭಿನಯಿಸಿದ್ದು,

ಹಿಂದಿ, ತಮಿಳು, ಕನ್ನಡ, ಬೆಂಗಾಲಿ ಮತ್ತು ಮಲಯಾಳಂ ಭಾಷೆಗಳಲ್ಲಿ ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

GOAT India Tour: ಹೈದರಾಬಾದಿನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ ಫುಟ್ಬಾಲ್ ದಂತಕಥೆ!

ರಾಕೆಟ್ ವೇಗದಲ್ಲಿ ಚಿನ್ನದ ಬೆಲೆ: ಹಳದಿ ಲೋಹದ ಸುಲಭ ಖರೀದಿಗಾಗಿ ಮಧ್ಯಮ ವರ್ಗದವರಿಗೆ ಇಲ್ಲಿದೆ ಟಿಪ್ಸ್!

ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನನಲ್ಲ: ಡಿಕೆ ಶಿವಕುಮಾರ್ ಧಮ್ಕಿಗೆ ಮೋಹನ್‌ದಾಸ್ ಪೈ ಆಕ್ರೋಶ!

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

SCROLL FOR NEXT