ಎಂ. ನರಸಿಂಹಲು 
ಸಿನಿಮಾ ಸುದ್ದಿ

ಫಿಲಂ ಚೇಂಬರ್ ಚುನಾವಣೆ: ಮಂಡಳಿ ಅಧ್ಯಕ್ಷರಾಗಿ ಎಂ.ನರಸಿಂಹಲು ಆಯ್ಕೆ

ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು.

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಶನಿವಾರ ಮುಕ್ತಾಯಗೊಂಡಿದ್ದು, ಅಧ್ಯಕ್ಷರಾಗಿ ವೈಭವಿ ಚಿತ್ರಮಂದಿರದ ಮಾಲೀಕ ನರಸಿಂಹಲು ಎಂ ಆಯ್ಕೆಗೊಂಡಿದ್ದಾರೆ. ಇವರು, ತಮ್ಮ ಪ್ರತಿಸ್ಪರ್ಧಿ ವಜ್ರೇಶ್ವರಿ ಚಿತ್ರಮಂದಿರದ ಮಾಲೀಕ ಸುಂದರ್‌ ರಾಜು ಆರ್‌ ಅವರನ್ನು ಮಣಿಸಿದರು. ಎಂ.ನರಸಿಂಹಲು ಆಯ್ಕೆಯಾಗುವ ಮೂಲಕ ಸಾ.ರಾ ಗೋವಿಂದು ಬಣಕ್ಕೆ ಮತ್ತೆ ಗೆಲುವು ಸಿಕ್ಕಂತಾಗಿದೆ.

ನಿರ್ಮಾಪಕ, ವಿತರಕ ಮತ್ತು ಪ್ರದರ್ಶಕ ವಲಯಗಳಿಂದ ವಿವಿಧ ಸ್ಥಾನಗಳಿಗಾಗಿ ಒಟ್ಟು 104 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಸಲ ಪ್ರದರ್ಶಕ ವಲಯಕ್ಕೆ ಅಧ್ಯಕ್ಷ ಸ್ಥಾನ ಮೀಸಲಾಗಿತ್ತು.ಈ ಬಾರಿ ಅಧ್ಯಕ್ಷ ಸ್ಥಾನ ಪ್ರದರ್ಶಕರ ವಲಯಕ್ಕೆ ಮೀಸಲಾಗಿತ್ತು. ಎಂ.ನರಸಿಂಹಲು ಅವರು ತಮ್ಮ ಪ್ರತಿಸ್ಪರ್ಧಿ ಆರ್‌.ಸುಂದರ್‌ ರಾಜು ಅವರನ್ನು ಸೋಲಿಸಿ ಅಧ್ಯಕ್ಷ ಸ್ಥಾನಕ್ಕೆ ಏರಿದ್ದಾರೆ. ಉಪಾಧ್ಯಕ್ಷರಾಗಿ ನಿರ್ಮಾಪಕ ವಲಯದಿಂದ ಸಫೈರ್ ವೆಂಕಟೇಶ್, ಪ್ರದರ್ಶಕ ವಲಯದಿಂದ ರಂಗಪ್ಪ ಕೆ.ಓ, ವಿತರಕ ವಲಯದಿಂದ ಶಿಲ್ಪಾ ಶ್ರೀನಿವಾಸ್ ಆಯ್ಕೆಗೊಂಡರು. ಗೌರವ ಕಾರ್ಯದರ್ಶಿಯಾಗಿ ಪ್ರದರ್ಶಕ ವಲಯದಿಂದ ವೀರೇಶ್ ಚಿತ್ರಮಂದಿರದ ಮಾಲೀಕ ಕುಶಾಲ್ ಎಲ್.ಸಿ, ನಿರ್ಮಾಪಕ‌ ವಲಯದಿಂದ ಪ್ರವೀಣ್ ಕುಮಾರ್, ವಿತರಕ ವಲಯದಿಂದ ಎಂ.ಎನ್.ಕುಮಾರ್ ಆಯ್ಕೆಗೊಂಡರು.

ಮಧ್ಯಾಹ್ನದಿಂದ ಚುನಾವಣೆ ನಡೆದಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ಮಾಡಲಾಗಿದೆ. ಗುರುರಾಜ ಕಲ್ಯಾಣ ಮಂಟಪದಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಮುಖವಾಗಿ ಸಾರಾ ಗೋವಿಂದು ಬಣ ಮತ್ತು ಭಾಮಾ ಹರೀಶ್ ಅವರ ಬಣಗಳ ಮಧ್ಯೆ ಜಿದ್ದಾಜಿದ್ದಿ ನಡೆದಿತ್ತು. ಅಂತಿಮವಾಗಿ ಸಾರಾ ಗೋವಿಂದು ಬಣಕ್ಕೆ ಜಯ ದೊರೆತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

Ranji Trophy final: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜಮ್ಮು ಮತ್ತು ಕಾಶ್ಮೀರದ ನಾಯಕ, Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

SCROLL FOR NEXT