ಗೋಲ್ಡ್ ಸುರೇಶ್ 
ಸಿನಿಮಾ ಸುದ್ದಿ

Biggboss Kannada 11: ತಂದೆಯ ಸಾವಂತೆ, ತುರ್ತು ಪರಿಸ್ಥಿತಿ ಅಂತೆ? ದೊಡ್ಮನೆಯಿಂದ ಗೋಲ್ಡ್ ಸುರೇಶ್ ದಿಢೀರ್ ಹೊರಬಂದಿದ್ದೇಕೆ?

ಭಾನುವಾರ ನಡೆದ ವಾರದ ಕಥೆ ಕಿಚ್ಚನ ಜೊತೆ ಶೋ ವೇಳೆ ದಿಢೀರ್ ಅಂತ ಬಿಗ್ ಬಾಸ್, ಗೋಲ್ಡ್‌ ಸುರೇಶ್‌ ಅವರ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಬಿಗ್‌ ಬಾಸ್‌ಗಿಂತ ಅವರ ಮನೆಯವರಿಗೆ ಸುರೇಶ್‌ ಅವಶ್ಯಕತೆ ಹೆಚ್ಚಾಗಿದೆ ಎಂದು ಘೋಷಿಸಿದರು.

ಕನ್ನಡ ಬಿಗ್‌ ಬಾಸ್‌ ಸ್ಪರ್ಧಿ ಗೋಲ್ಡ್‌ ಸುರೇಶ್‌ ಅದೃಷ್ಟಕ್ಕೆ ಈ ವಾರ ದೊಡ್ಮನೆಯಲ್ಲಿ ಕ್ಯಾಪ್ಟನ್ ಆಗಿದ್ದರು. ಆದರೆ ಆ ಖುಷಿ ಹೆಚ್ಚು ದಿನ ಉಳಿಯಲಿಲ್ಲ. ಕಾರಣ ಕುಟುಂಬದಲ್ಲಿನ ತುರ್ತು ಪರಿಸ್ಥಿತಿಯ ಕಾರಣ ಗೋಲ್ಡ್ ಸುರೇಶ್ ದೊಡ್ಮನೆಯಿಂದ ಹೊರ ಬನ್ನಿ ಎಂಬ ಪ್ರೋಮೋ ರಿಲೀಸ್‌ ಆಗಿದೆ.

ಭಾನುವಾರ ನಡೆದ ವಾರದ ಕಥೆ ಕಿಚ್ಚನ ಜೊತೆ ಶೋ ವೇಳೆ ದಿಢೀರ್ ಅಂತ ಬಿಗ್ ಬಾಸ್, ಗೋಲ್ಡ್‌ ಸುರೇಶ್‌ ಅವರ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಬಿಗ್‌ ಬಾಸ್‌ಗಿಂತ ಅವರ ಮನೆಯವರಿಗೆ ಸುರೇಶ್‌ ಅವಶ್ಯಕತೆ ಹೆಚ್ಚಾಗಿದೆ ಎಂದು ಘೋಷಿಸಿದರು. ಹೀಗಾಗಿ ನೀವು ಈ ಕೂಡಲೇ ತಮ್ಮ ಬಟ್ಟೆಗಳನ್ನೆಲ್ಲ ಪ್ಯಾಕ್‌ ಮಾಡಿಕೊಂಡು ಮನೆಯಿಂದ ಹೊರ ಬರಬೇಕು ಎಂದು ಬಿಗ್‌ ಬಾಸ್‌ ಹೇಳುತ್ತಾರೆ.

ಈ ವಿಚಾರ ಕೇಳಿ ಬಿಗ್‌ ಬಾಸ್‌ನ ಉಳಿದ ಸಹಸ್ಪರ್ಧಿಗಳು ಸಹ ಗಾಬರಿಯಾಗಿದ್ದಾರೆ. ಅಲ್ಲದೆ ಈ ವಿಚಾರ ಸಾಮಾಜಿಕ ಜಾಲತಾಣದಲ್ಲೂ ಹೆಚ್ಚು ಚರ್ಚೆಯಾಗುತ್ತಿದೆ. ಗೋಲ್ಡ್ ಸುರೇಶ್ ಅವರ ತಂದೆ ನಿಧನರಾಗಿದ್ದಾರೆ ಅಂತ ಕೆಲವರು ಹೇಳುತ್ತಿದ್ದರೆ ಮತ್ತೆ ಕೆಲವರು ತಾಯಿಗೆ ಹುಷಾರಿಲ್ಲ ಎಂದು ಚರ್ಚಿಸುತ್ತಿದ್ದಾರೆ. ಆದರೆ ಇದರ ಅಸಲಿಯತ್ತು ಇಂದಿನ ಎಪಿಸೋಡ್ ನಲ್ಲಿ ತಿಳಿಯಲಿದೆ.

ಬಿಗ್ ಬಾಸ್ ಮನೆಯಿಂದ ಗೋಲ್ಡ್ ಸುರೇಶ್ ಹೊರಬರುತ್ತಿದ್ದಾರೆ ಎಂಬ ವಿಷಯ ವ್ಯಾಪಕ ಚರ್ಚೆಯಾಗುತ್ತಿದ್ದಂತೆ ಅತ್ತ ಗೋಲ್ಡ್ ಸುರೇಶ್ ಅವರ ತಂಡೆ ಶಿವಗೌಡ ಅವರು ನನಗೆ ಏನೂ ಆಗಿಲ್ಲ. ಇನ್ನೂ ಬದುಕಿದ್ದೇನೆ. ನಮ್ಮ ಮನೆಯಲ್ಲೂ ಎಲ್ಲರೂ ಹುಷಾರಾಗಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಗೋಲ್ಡ್ ಸುರೇಶ್ ಮತ್ಯಾವ ತುರ್ತುಪರಿಸ್ಥಿತಿ ಎದುರಾಗಿದೆ ಎಂಬುದು ಪ್ರೇಕ್ಷಕರ ಆಂತಕಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT