ನಟ ಅಲ್ಲು ಅರ್ಜುನ್ ಮನೆಯಲ್ಲಿ ಸೆಲೆಬ್ರಿಟಿಗಳು 
ಸಿನಿಮಾ ಸುದ್ದಿ

Pushpa 2: 'Allu Arjun ಸಂಕಷ್ಟಕ್ಕೆ ಓಡಿಬಂದ ಸೆಲೆಬ್ರಿಟಿಗಳು ಮೃತ ಮಹಿಳೆ, ಮಗುವಿಗಾಗಿ ಬರಲಿಲ್ಲ?'; Tollywood ನಟರ ವಿರುದ್ಧ ಆಕ್ರೋಶ!

ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವಿಗೀಡಾಗಿ ಆಕೆಯ ಮಗ ಗಂಭೀರವಾಗಿ ಗಾಯಗೊಂಡು ಈಗಲೂ ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಬಂಧಿತರಾಗಿದ್ದ ನಟ ಅಲ್ಲು ಅರ್ಜುನ್ ವಿಚಾರ ಮತ್ತೆ ಸುದ್ದಿಯಲ್ಲಿದ್ದು, ನಟನ ಬಂಧನ ಬೆನ್ನಲ್ಲೇ ನಾ ಮುಂದು ತಾ ಮುಂದು ಎಂಬಂತೆ ಧಾವಿಸಿದ್ದ ಟಾಲಿವುಡ್ ಸೆಲೆಬ್ರಿಟಿಗಳ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಹೌದು.. ತೆಲಂಗಾಣ ರಾಜಧಾನಿ ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣದಲ್ಲಿ ರೇವತಿ ಎಂಬ ಮಹಿಳೆ ಸಾವಿಗೀಡಾಗಿ ಆಕೆಯ ಮಗ ಗಂಭೀರವಾಗಿ ಗಾಯಗೊಂಡು ಈಗಲೂ ಕೋಮಾ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಪ್ರಕರಣದ ವಿಚಾರವಾಗಿ ಮರುಗಿದ್ದ ನಟ ಅಲ್ಲು ಅರ್ಜುನ್ ಸಂತ್ರಸ್ಥ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದರು. ಇದೇ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ರನ್ನು ಪೊಲೀಸರು ಬಂಧಿಸಿದ್ದರು.

ಆದರೆ ಒಂದೇ ರಾತ್ರಿಯಲ್ಲಿ ನಟ ಅಲ್ಲು ಅರ್ಜುನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಅತ್ತ ಅಲ್ಲು ಅರ್ಜುನ್ ಬಿಡುಗಡೆಯಾಗುತ್ತಲೇ ಟಾಲಿವುಡ್ ಗಣ್ಯಾತಿ ಗಣ್ಯ ಸ್ಟಾರ್ ನಟ ನಟಿಯರು ಅಲ್ಲು ಅರ್ಜುನ್ ನಿವಾಸಕ್ಕೆ ದೌಡಾಯಿಸಿ ಅಲ್ಲು ಅರ್ಜುನ್ ರನ್ನು ಭೇಟಿ ಮಾಡಿದರು. ಆ ಮೂಲಕ ನಟ ಅಲ್ಲು ಅರ್ಜುನ್ ಗೆ ತಮ್ಮ ಬೆಂಬಲ ಸೂಚಿಸಿದರು. ಆದರೆ ಇದೇ ವಿಚಾರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.

ಟಾಲಿವುಡ್ ಸೆಲೆಬ್ರಿಟಿಗಳ ವಿರುದ್ಧ ಆಕ್ರೋಶ

ಇನ್ನು ನಟ ಅಲ್ಲು ಅರ್ಜುನ್ ಬೆಂಬಲಕ್ಕೆ ನಿಂತ ಟಾಲಿವುಡ್ ಸೆಲೆಬ್ರಿಟಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಾಲ್ತುಳಿತ ಪ್ರಕರಣದಲ್ಲಿ ಓರ್ವ ಹೆಣ್ಣು ಮಗಳು ಸಾವನ್ನಪ್ಪಿದ್ದಾಳೆ. ಅಲ್ಲದೆ ಒಂದು ಮಗು ಗಾಯಗೊಂಡು ಈಗಲೂ ಕೋಮಾ ಪರಿಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ.

ಇಂತಹ ಧಾರುಣ ಪರಿಸ್ಥಿತಿಯಲ್ಲಿ ಆ ಹೆಣ್ಣುಮಗಳ ಕುಟುಂಬಕ್ಕೆ ನೆರವು ನೀಡದ ಸೆಲೆಬ್ರಿಟಿಗಳು ನಟ ಅಲ್ಲು ಅರ್ಜುನ್ ಒಂದೇ ಒಂದು ರಾತ್ರಿ ಜೈಲಿಗೆ ಹೋದಾಕ್ಷಣ ಅವರ ಬೆಂಬಲಕ್ಕೆ ನಿಂತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ. ಒಂದೇ ಒಂದು ಕ್ಷಣವಾದರೂ ಆ ಸಂತ್ರಸ್ಥ ಕುಟುಂಬದ ಬಗ್ಗೆ ಈ ಸೆಲೆಬ್ರಿಟಿಗಳು ಆಲೋಚಿಸಿಲ್ಲ ಎಂದು ಕಿಡಿಕಾರುತ್ತಿದ್ದಾರೆ.

ನಟ ಅಲ್ಲು ಅರ್ಜುನ್ ವಿರುದ್ಧವೂ ಆಕ್ರೋಶ

ಕೇವಲ ಟಾಲಿವುಡ್ ಸೆಲೆಬ್ರಿಟಿಗಳ ಮಾತ್ರವೇ ಇಲ್ಲ.. ನಟ ಅಲ್ಲು ಅರ್ಜುನ್ ವಿರುದ್ಧವೂ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ನಟ ಅಲ್ಲು ಅರ್ಜುನ್ ಸಂತ್ರಸ್ಥ ಮಹಿಳೆಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ಘೋಷಣೆ ಮಾಡಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ನಟ ಅಲ್ಲು ಅರ್ಜುನ್ ಪುಷ್ಪ2 ಚಿತ್ರಕ್ಕಾಗಿ ಬರೊಬ್ಬರಿ 300 ಕೋಟಿ ರೂ ಸಂಭಾವನೆ ಪಡೆದಿದ್ದು, ಸಂತ್ರಸ್ಥ ಮಹಿಳೆಗೆ ಮಾತ್ರ ಕೇವಲ 25 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಈ 25 ಲಕ್ಷರೂ ಆಸ್ಪತ್ರೆಯಲ್ಲಿರುವ ಆಕೆಯ ಮಗನ ಚಿಕಿತ್ಸೆಗೂ ಸಾಲುವುದಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೆ ಈ ಹಿಂದೆ ಇದೇ ನಟ ಅಲ್ಲು ಅರ್ಜುನ್ ನಟ ಬಾಲಕೃಷ್ಣ ಅವರ ಟಾಕ್ ಷೋ ನಲ್ಲಿ ವಸ್ತು ಮತ್ತು ವ್ಯಕ್ತಿಗಳ ಯೋಗ್ಯತೆಗೆ ಅನುಸಾರವಾಗಿ ನಾನು ಹಣ ನೀಡುತ್ತೇನೆ.. ನನ್ನ ಬಳಿ 100 ಕೋಟಿ ಇದೆ ಎಂದು ಒಂದು ವಸ್ತುವಿಗೆ ಹೆಚ್ಚಿನ ಹಣ ನೀಡುವುದಿಲ್ಲ. ಅದರ ಮೌಲ್ಯವೆಷ್ಟೋ ಅಷ್ಟು ಹಣವನ್ನು ಮಾತ್ರ ನೀಡುತ್ತೇನೆ ಎಂದು ಹೇಳಿದ್ದರು.

ಇದೀಗ ಅವರ ಈ ಮಾತುಗಳೇ ಆಕ್ರೋಶಕ್ಕೆ ಕಾರಣವಾಗಿದ್ದು, ಹಾಗಾದರೆ ಮೃತ ಮಹಿಳೆಯ ಯೋಗ್ಯತೆ ಕೇವಲ 25 ಲಕ್ಷ ರೂಗಳ ಮಾತ್ರವೇ? ಎಂದು ನೆಟ್ಟಿಗರು ಕಿಡಿಕಾರುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT