ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ವಿದೇಶಕ್ಕೆ ತೆರಳುವ ಮುನ್ನ ಶಿವಣ್ಣ ಭಾವುಕ: ಮಿಯಾಮಿ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಸರ್ಜರಿ; ತಿಂಗಳ ಬಳಿಕ ಭಾರತಕ್ಕೆ ವಾಪಸ್!

ಮನೆ ಹತ್ತಿರ ನನ್ನ ಆಪ್ತರು, ಅಭಿಮಾನಿಗಳು ಬರುತ್ತಿದ್ದಾರೆ. ಇದನ್ನು ನೋಡಿದಾಗ ನನಗೆ ಎಮೋಷನಲ್ ಆಗುತ್ತಿದೆ. ಹೆಲ್ತ್ ಚೆಕಪ್ ಮಾಡಿಸಿದ್ದೀನಿ ಎಲ್ಲವೂ ಸರಿಯಾಗಿದೆ. ನನ್ನ ತಂಗಿ ಮತ್ತು ಸಂಬಂಧಿಕರನ್ನು ನೋಡುವಾಗ ಬೇಜಾರು ಆಯ್ತು.

ನಟ ಶಿವರಾಜ್ ಕುಮಾರ್ ಚಿಕಿತ್ಸೆಗಾಗಿ ಅಮೆರಿಕಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆ ಪ್ರಸ್ತುತ ಆರೋಗ್ಯದ ಕುರಿತು ಮಾತನಾಡಿದ್ದಾರೆ. ಹೆಲ್ತ್ ಚೆಕಪ್ ಮಾಡಿಸಿದ್ದೀನಿ. ಎಲ್ಲವೂ ಸರಿಯಾಗಿದೆ. ಎಲ್ಲಾ ಅಭಿಮಾನಿಗಳ ಆಶೀರ್ವಾದ ನನ್ನ ಮೇಲಿದೆ ಎಂದು ಶಿವಣ್ಣ ಮಾತನಾಡಿದ್ದಾರೆ.

ಮನೆ ಹತ್ತಿರ ನನ್ನ ಆಪ್ತರು, ಅಭಿಮಾನಿಗಳು ಬರುತ್ತಿದ್ದಾರೆ. ಇದನ್ನು ನೋಡಿದಾಗ ನನಗೆ ಎಮೋಷನಲ್ ಆಗುತ್ತಿದೆ. ಹೆಲ್ತ್ ಚೆಕಪ್ ಮಾಡಿಸಿದ್ದೀನಿ ಎಲ್ಲವೂ ಸರಿಯಾಗಿದೆ. ನನ್ನ ತಂಗಿ ಮತ್ತು ಸಂಬಂಧಿಕರನ್ನು ನೋಡುವಾಗ ಬೇಜಾರು ಆಯ್ತು. ಅಭಿಮಾನಿಗಳನ್ನು ನೋಡಿದಾಗ ದುಃಖ ಆಗುತ್ತದೆ. ಅದು ಬಿಟ್ಟರೆ ನಾನು ಧೈರ್ಯವಾಗಿದ್ದೀನಿ. ಡಿ.24ರಂದು ನನಗೆ ಸರ್ಜರಿ ನಡೆಯುತ್ತಿದೆ. ಅದರ ಬಗ್ಗೆ ಪಾಸಿಟಿವ್ ಆಗಿದ್ದೀನಿ. ಈ ಬಗ್ಗೆ ನನಗೇನು ಯೋಚನೆ ಇಲ್ಲ ಎಂದು ಶಿವಣ್ಣ ಮಾತನಾಡಿದ್ದಾರೆ. ಈಗಾಗಲೇ ಚಿಕಿತ್ಸೆ ಆರಂಭವಾಗಿದೆ. 4 ಹಂತಗಳ ಚಿಕಿತ್ಸೆ ಬಳಿಕ ಅಮೆರಿಕಾದಲ್ಲಿ ಶಸ್ತ್ರ ಚಿಕಿತ್ಸೆ ನಡೆಯುತ್ತದೆ ಎಂದಿದ್ದರು. ಚಿಕಿತ್ಸೆಗಾಗಿ ಕೆಲವು ದಿನಗಳ ಕಾಲ ಮನೆಯಿಂದ ಆಚೆ ಇರುತ್ತೇವೆ. ಒಂದು ತಿಂಗಳಿಗೂ ಹೆಚ್ಚು ದಿನ ಮನೆ ಬಿಟ್ಟು ಇರುತ್ತಿರೋದು ಇದೇ ಮೊದಲ ಬಾರಿ ಎಂದಿದ್ದಾರೆ. ಇನ್ನೂ ಎಲ್ಲಾ ಅಭಿಮಾನಿಗಳ ಆಶೀರ್ವಾದ ನನ್ನ ಮೇಲಿದೆ. ಇದರಿಂದ ನನಗೆ ಖುಷಿ ಆಗುತ್ತಿದೆ. ಜ.26ಕ್ಕೆ ನಾನು ಬೆಂಗಳೂರಿಗೆ ಹಿಂದಿರುಗುತ್ತಿದ್ದೇನೆ ಎಂದರು.

ಇದೇ ವೇಳೆ ಸುದೀಪ್ ಭೇಟಿಯ ಬಗ್ಗೆ ಶಿವಣ್ಣ ಮಾತನಾಡಿ, ಅವರು ಬಂದಿದ್ದು ಖುಷಿಯಾಯ್ತು. ಯಾರು ಯೋಚನೆ ಮಾಡುವಂತಹದ್ದು ಏನು ಇಲ್ಲ. ಎಲ್ಲವೂ ಸರಿಯಾಗಿದೆ ಎಂದು ತಿಳಿಸಿದರು. ನಂತರ ‘ಯುಐ’ ಮತ್ತು ‘ಮ್ಯಾಕ್ಸ್’ ಎರಡು ಸಿನಿಮಾಗಳು ರಿಲೀಸ್ ಆಗುತ್ತಿದೆ. ಎರಡು ಚಿತ್ರಕ್ಕೂ ಒಳ್ಳೆಯದಾಗಲಿ ಎಂದು ಶಿವಣ್ಣ ಶುಭಕೋರಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಅಮೆರಿಕಗೆ (USA) ಪ್ರಯಾಣ ಬೆಳೆಸಿದ್ದ ಶಿವರಾಜ್‌ಕುಮಾರ್‌ಗೆ, ಪತ್ನಿ ಗೀತಾ ಶಿವರಾಜ್‌ಕುಮಾರ್, ಪುತ್ರಿ ನಿವೇದಿತಾ ಸಾಥ್ ನೀಡಿದರು. ಡಿಸೆಂಬರ್ 24ರಂದು ಫ್ಲೋರಿಡಾ ರಾಜ್ಯದ ಮಿಯಾಮಿಯಲ್ಲಿರುವ ಮಿಯಾಮಿ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ (MCI) ಆಸ್ಪತ್ರೆಯಲ್ಲಿ ಶಿವರಾಜ್‌ಕುಮಾರ್ ಅವರಿಗೆ ಸರ್ಜರಿ ನಡೆಯಲಿದೆ. ಡಾಕ್ಟರ್ ಮುರುಗೇಶ್ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT