ನಟ ಅಲ್ಲು ಅರ್ಜುನ್ 
ಸಿನಿಮಾ ಸುದ್ದಿ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಭಿಮಾನಿಗಳಿಗೆ ನಟ ಅಲ್ಲು ಅರ್ಜುನ್ ಎಚ್ಚರಿಕೆ!

ಸಂಧ್ಯಾ ಥಿಯೇಟರ್ ನಲ್ಲಿ ಡಿಸೆಂಬರ್ 4 ರಂದು ಸಂಭವಿಸಿದ ನೂಕು ನುಗ್ಗಲಿನಲ್ಲಿ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ತಮ್ಮ ವಿರುದ್ಧದ ಹೊಸ ಆರೋಪದ ನಡುವೆ ಆನ್​ಲೈನ್​ ಮತ್ತು ಆಫ್​ಲೈನ್​ನಲ್ಲಿ ಯಾವುದೇ ರೀತಿಯ ಅಸಭ್ಯ ಭಾಷೆ ಬಳಸಬೇಡಿ ಎಂದು ಅಭಿಮಾನಿಗಳಿಗೆ ಅಲ್ಲ ಅರ್ಜುನ್ ಅವರು ಕಿವಿಮಾತು ಹೇಳಿದ್ದಾರೆ.

ಸಂಧ್ಯಾ ಥಿಯೇಟರ್ ನಲ್ಲಿ ಡಿಸೆಂಬರ್ 4 ರಂದು ಸಂಭವಿಸಿದ ನೂಕು ನುಗ್ಗಲಿನಲ್ಲಿ 35 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅವರ ಎಂಟು ವರ್ಷದ ಮಗ ಗಂಭೀರವಾಗಿ ಗಾಯಗೊಂಡಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ.

ಈ ಕುರಿತು ಶನಿವಾರ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಥಿಯೇಟರ್ ಗೆ ಬರಬೇಡಿ ಎಂದು ಪೊಲೀಸರು ಹೇಳಿದ್ದರೂ ಲೆಕ್ಕಿಸದೆ ಬಂದು ಸಿನಿಮಾ ನೋಡಿದ್ದಾರೆ. ಥಿಯೇಟರ್ ಗೆ ಬರುವಾಗ ಕಾರಿನ ಸನ್ ರೂಫ್ ತೆಗೆದು ಅಲ್ಲಿ ರೋಡ್ ಶೋ ಮಾಡಿಕೊಂಡು ಬಂದಿದ್ದಾರೆ. ಇದರಿಂದ ಆ ಥಿಯೇಟರ್ ನ ಪ್ರೇಕ್ಷಕರು ಮಾತ್ರವಲ್ಲ. ಅದೇ ರಸ್ತೆಯಲ್ಲಿದ್ದ ಇತರೆ ಥಿಯೇಟರ್ ಗಳಲ್ಲಿದ್ದ ಪ್ರೇಕ್ಷಕರೂ ಕೂಡ ಸಂಧ್ಯಾ ಥಿಯೇಟರ್ ಗೆ ದೌಡಾಯಿಸಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ಆರೋಪಿಸಿದ್ದರು.

ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಅಸಭ್ಯ, ನಿಂದನಾತ್ಮಕ ಫೋಸ್ಟ್ ಹಾಕಲಾಗುತ್ತಿದ್ದು, ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತನ್ನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಈ ಮಧ್ಯೆ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ವಿರುದ್ಧ ಅಸಭ್ಯ, ನಿಂದನಾತ್ಮಕ ಫೋಸ್ಟ್ ಹಾಕಲಾಗುತ್ತಿದ್ದು, ಅಲ್ಲು ಅರ್ಜುನ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತನ್ನ ಅಭಿಮಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಅದೇ ರೀತಿ ನಕಲಿ ಖಾತೆಗಳ ಮೂಲಕ ನನ್ನ ಅಭಿಮಾನಿಗಳು ಎಂದು ಹೇಳಿಕೊಂಡು ಯಾರಾದರೂ ಅಶ್ಲೀಲ ಭಾಷೆ ಬಳಕೆ ಮಾಡಿದರೆ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT