ದೀಕ್ಷಿತ್ ಶೆಟ್ಟಿ - ನಿರ್ದೇಶಕ ಕೆಎಸ್ ಅಶೋಕ 
ಸಿನಿಮಾ ಸುದ್ದಿ

ದಿಯಾ ಬಳಿಕ ಮತ್ತೊಂದು ಚಿತ್ರಕ್ಕಾಗಿ ಒಂದಾಗುತ್ತಿದ್ದಾರೆ ನಿರ್ದೇಶಕ ಕೆಎಸ್ ಅಶೋಕ, ದೀಕ್ಷಿತ್ ಶೆಟ್ಟಿ!

200ಕ್ಕೂ ಹೆಚ್ಚು ಮಂದಿಯ ಆಡಿಷನ್ ಮಾಡಿದ ನಂತರ ಅಶೋಕ ಅವರು ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರನ್ನು ಪ್ರಮುಖ ಪಾತ್ರಕ್ಕಾಗಿ ಆಯ್ಕೆ ಮಾಡಿದ್ದಾರೆ.

6-5=2 ಮತ್ತು ದಿಯಾ ಮುಂತಾದ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ಚಿತ್ರಗಳನ್ನು ನಿರ್ದೇಶಿಸಿದ್ದ ಕೆಎಸ್ ಅಶೋಕ ಇದೀಗ ಮತ್ತೊಂದು ಚಿತ್ರ ನಿರ್ದೇಶನಕ್ಕೆ ಸಜ್ಜಾಗಿದ್ದಾರೆ. ಹಳ್ಳಿಯೊಂದರಲ್ಲಿ ನಡೆಯುವ ಕಥೆ ಇದಾಗಿದ್ದು, ಸ್ನೇಹ, ಪ್ರೀತಿ ಮತ್ತು ಜೀವನದ ಸಂಕೀರ್ಣತೆಗಳನ್ನು ಚಿತ್ರದಲ್ಲಿ ಹೇಳಲು ಮುಂದಾಗಿದ್ದಾರೆ. ಕಥೆ ಹೇಳುವಿಕೆ ಮತ್ತು ಮಾನವನ ಭಾವನೆಗಳನ್ನು ಸೂಕ್ಷ್ಮವಾಗಿ ಸೆರೆಹಿಡಿಯುವ ಸಾಮರ್ಥ್ಯಕ್ಕೆ ಹೆಸರಾಗಿರುವ ಅಶೋಕ ಅವರು, ಜೀವನದ ವಿವಿಧ ಹಂತಗಳಲ್ಲಿ ಮೂವರು ಯುವಕರ ಸುತ್ತ ಸುತ್ತುವ ಕಥೆಯನ್ನು ಹೆಣೆದಿದ್ದಾರೆ.

200ಕ್ಕೂ ಹೆಚ್ಚು ಮಂದಿಯ ಆಡಿಷನ್ ಮಾಡಿದ ನಂತರ ಅಶೋಕ ಅವರು ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅವರನ್ನು ಪ್ರಮುಖ ಪಾತ್ರಕ್ಕಾಗಿ ಆಯ್ಕೆ ಮಾಡಿದ್ದು, ಇದೀಗ ಮತ್ತೆ ನಿರ್ದೇಶಕ ಮತ್ತು ನಟ ಒಟ್ಟಿಗೆ ಕೆಲಸ ಮಾಡಲು ಸಿದ್ಧವಾಗಿದ್ದಾರೆ. ನಾಗಿನಿ ಧಾರಾವಾಹಿ ಮೂಲಕ ಜನಮನ ಗೆದ್ದಿದ್ದ ದೀಕ್ಷಿತ್, ಪೃಥ್ವಿ ಅಂಬಾರ್ ಅವರೊಂದಿಗೆ ದಿಯಾ ಸಿನಿಮಾದಲ್ಲಿ ನಟಿಸಿದ್ದರು. ಕೆಟಿಎಂ ಮತ್ತು ಬ್ಲಿಂಕ್‌ನಂತಹ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೆ, ನಟ ನಾನಿ ಜೊತೆಗೆ ದಸರಾ ಮೂಲಕ ತೆಲುಗು ಚಿತ್ರರಂಗದಲ್ಲಿ ಛಾಪು ಮೂಡಿಸಿದ್ದಾರೆ.

ಅಶೋಕ ಅವರು ಚಿತ್ರದ ಸಂಪೂರ್ಣ ತಾರಾಗಣ ಸೇರಿದಂತೆ ಹಲವು ವಿವರಗಳನ್ನು ಮುಚ್ಚಿಟ್ಟಿದ್ದು, ಸಂಕ್ರಾಂತಿ ನಂತರ ಚಿತ್ರದ ಶೀರ್ಷಿಕೆ, ಪೋಸ್ಟರ್ ಮತ್ತು ಹೆಚ್ಚಿನ ವಿವರಗಳನ್ನು ಅನಾವರಣಗೊಳಿಸಲು ಯೋಜಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT