ಅಲ್ಲು ಅರ್ಜುನ್ 
ಸಿನಿಮಾ ಸುದ್ದಿ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಮೃತ ಅಭಿಮಾನಿಯ ಕುಟುಂಬಕ್ಕೆ 2 ಕೋಟಿ ರೂ ನೆರವು ಘೋಷಿಸಿದ ಪುಷ್ಪ ಸಿನಿಮಾ ತಂಡ

ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಮತ್ತು ಈಗ ಕೃತಕ ಉಸಿರಾಟ ವ್ಯವಸ್ಥೆ ಇಲ್ಲದೆ ಉಸಿರಾಡುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದು, ಸಮಾಧಾನ ತಂದಿದೆ

ಹೈದರಾಬಾದ್: ಪುಷ್ಪ–2 ಪ್ರದರ್ಶನದ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ರೇವತಿ ಕುಟುಂಬಕ್ಕೆ ಚಿತ್ರದ ನಾಯಕ ನಟ ಅಲ್ಲು ಅರ್ಜುನ್, ನಿರ್ಮಾಣ ಸಂಸ್ಥೆ ಮತ್ತು ನಿರ್ದೇಶಕರು ಒಟ್ಟು ₹2 ಕೋಟಿ ಪರಿಹಾರ ನೀಡಿದ್ದಾರೆ.

ಈ ಮಧ್ಯೆ, ತೆಲಂಗಾಣ ರಾಜ್ಯ ಚಲನಚಿತ್ರ ಅಭಿವೃದ್ಧಿ ನಿಗಮದ (ಎಫ್‌ಡಿಸಿ) ಅಧ್ಯಕ್ಷ ಮತ್ತು ಪ್ರಮುಖ ನಿರ್ಮಾಪಕ ದಿಲ್ ರಾಜು ಅವರು, ಸರ್ಕಾರ ಮತ್ತು ಚಲನಚಿತ್ರೋದ್ಯಮದ ನಡುವೆ ಆರೋಗ್ಯಕರ ಸಂಬಂಧವನ್ನು ಬೆಳೆಸಲು ಚಿತ್ರರಂಗದ ನಿಯೋಗದ ಜೊತೆ ಗುರುವಾರ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ಹೇಳಿದರು. ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ದಿಲ್ ರಾಜು ಮತ್ತು ಇತರರೊಂದಿಗೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಕಾಲ್ತುಳಿತದಲ್ಲಿ ಗಾಯಗೊಂಡಿರುವ ಬಾಲಕನ ಆರೋಗ್ಯ ವಿಚಾರಿಸಿದರು.

ವೈದ್ಯರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯಿಸಿದ ಅಲ್ಲು ಅರವಿಂದ್, ಬಾಲಕ ಚೇತರಿಸಿಕೊಳ್ಳುತ್ತಿದ್ದಾನೆ ಮತ್ತು ಈಗ ಕೃತಕ ಉಸಿರಾಟ ವ್ಯವಸ್ಥೆ ಇಲ್ಲದೆ ಉಸಿರಾಡುತ್ತಿದ್ದಾನೆ ಎಂದು ವೈದ್ಯರು ತಿಳಿಸಿದ್ದು, ಸಮಾಧಾನ ತಂದಿದೆ ಎಂದು ತಿಳಿಸಿದರು. ಬಾಲಕನ ಸಂಪೂರ್ಣ ಚೇತರಿಕೆಯ ಬಗ್ಗೆ ವೈದ್ಯರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು.

ಇದೇ ವೇಳೆ, ಮೃತ ಮಹಿಳೆಯ ಕುಟುಂಬಕ್ಕೆ ಅಲ್ಲು ಅರ್ಜುನ್ (₹1ಕೋಟಿ), ಪುಷ್ಪ ಚಿತ್ರದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್(₹50 ಲಕ್ಷ), ಮತ್ತು ಚಿತ್ರದ ನಿರ್ದೇಶಕ ಸುಕುಮಾರ್ (₹50 ಲಕ್ಷ) ಆರ್ಥಿಕ ನೆರವು ನೀಡಿದ್ದಾರೆ ಎಂದು ಘೋಷಿಸಿದರು. ದಿಲ್ ರಾಜು ಅವರಿಗೆ ಚೆಕ್ ಹಸ್ತಾಂತರಿಸಿದ ಅರವಿಂದ್, ಬಾಲಕನ ಕುಟುಂಬಕ್ಕೆ ತಲುಪಿಸುವಂತೆ ಮನವಿ ಮಾಡಿದರು. ಕುಟುಂಬವನ್ನು ನೇರವಾಗಿ ಭೇಟಿ ಮಾಡುವುದಕ್ಕೆ ಕಾನೂನಿನ ತೊಡಕಿದೆ ಎಂದರು. ಸಂಧ್ಯಾ ಥಿಯೇಟರ್​ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಪಟ್ಟು: ಗದ್ದಲ, 2ನೇ ದಿನವೂ ವಿಧಾನಸಭೆಯ ಕಲಾಪ ಬಲಿ!

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!